ಉಡುಪಿ:ಪ.ಜಾತಿ-ಪ.ಪಂಗಡಗಳ ವಿದ್ಯಾರ್ಥಿಗಳಿಗೆ ಕಲಿಕಾ ತರಬೇತಿ ಕಾರ್ಯಾಗಾರ ಉದ್ಘಾಟನೆ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ “ಕರಗ ಕೋಲಾಟ ಹಾಗೂ ಜಾನಪದ ನೃತ್ಯಗಳ”ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ “ಬುಡಕಟ್ಟು ಜನಾಂಗದ ಸಾಂಪ್ರದಾಯಕ ನೃತ್ಯದ” 6 ತಿಂಗಳ ಕಲಿಕಾ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಬುಧವಾರ ನಗರದ ಬನ್ನಂಜೆಯ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಮಾಜ ಕಲ್ಯಾಣ ಅಧಿಕಾರಿ […]
ಉಡುಪಿ:ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ

ಉಡುಪಿ:ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ,ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ […]
ಉಡುಪಿ:ಜು.28 ರಂದು ನೇರ ಸಂದರ್ಶನ

ಉಡುಪಿ: ನಗರದ ಕುಂಜಿಬೆಟ್ಟುವಿನ ಕ್ರೋಮಾ ಬಿಲ್ಡಿಂಗ್ನ ಎರಡನೇ ಮಹಡಿಯ ಪ್ರಗತಿ ಬಿಸಿನೆಸ್ ಪಾರ್ಕ್ನ ಆಕ್ಸಿಸ್ಮ್ಯಾಕ್ಸ್ಲೈಫ್ ಇಲ್ಲಿ ಜುಲೈ 28 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ. ಉಡುಪಿ ದೂ.ಸಂಖ್ಯೆ: 8105618291, 9945856670, […]
ಮಲ್ಪೆ ಕಡಲತೀರದಲ್ಲಿ ಕೇರಳ ಸಮಾಜದಿಂದ ಬಲಿತರ್ಪಣಂ; ಎಪ್ಪತ್ತಕ್ಕೂ ಅಧಿಕ ಕುಟುಂಬಗಳಿಂದ ಅಗಲಿದ ಪಿತೃಗಳಿಗೆ ತರ್ಪಣ

ಉಡುಪಿ: ತುಳು ನಾಡಿನಲ್ಲಿ ಆಟಿ ಅಮಾವಾಸ್ಯೆಗೆ ಅದರದ್ದೇ ಆದ ವಿಶೇಷ ಮಹತ್ವವಿದೆ. ಹಾಲೆ ಮರದ ಕಷಾಯ ಕುಡಿದು ಸರ್ವರೋಗದಿಂದ ವರ್ಷವಿಡೀ ದೂರವಿದ್ರೆ ಇನ್ನೊಂದೆಡೆ ಅಗಲಿದ ಪಿತೃಗಳಿಗೆ ತರ್ಪಣ ಬಿಡುವ ಧಾರ್ಮಿಕ ವಿಧಿವಿಧಾನಕ್ಕೆ ಇಂದು ವಿಶೇಷ ಮಹತ್ವ. ಈ ವಿಶೇಷ ದಿನದಲ್ಲಿ ಕೇರಳ ಸಮಾಜ ಕೂಡ ತುಳುನಾಡಿನಲ್ಲಿ ಮೊದಲ ಬಾರಿ ಪಿತೃಗಳಿಗೆ ತರ್ಪಣ ಬಿಟ್ಟಿದ್ದಾರೆ. ಹೌದು, ಕೇರಳದಿಂದ ಕರಾವಳಿಗೆ ಬಂದು ನೆಲೆಸಿರುವ ನೂರಾರು ಮಂದಿ ಇಷ್ಟರವರೆಗೆ ಕರಾವಳಿಯ ಪದ್ದತಿಯಂತೆ ತರ್ಪಣ ಬಿಡುತ್ತಿದ್ದರು. ಆದರೆ ಇದೇ ಮೊದಲು ಕೇರಳ ಸಮಾಜಂ […]
ಕಾಪು: ಯುವನಿಧಿ ಯೋಜನೆಯ 2025 ನೇ ಸಾಲಿನ ನೊಂದಾವಣಿ ಪ್ರಕ್ರಿಯೆಯ ಪೋಸ್ಟರ್ ಬಿಡುಗಡೆ

ಕರ್ನಾಟಕ ರಾಜ್ಯ ಸರ್ಕಾರ ಬಡವರ ಮತ್ತು ಮಧ್ಯಮ ವರ್ಗಗಳ ಕಲ್ಯಾಣಕ್ಕಾಗಿ ವಿಶೇಷವಾಗಿ ಮಹಿಳೆಯರ ಸಬಲೀಕರಣಕ್ಕೆ ಪೂರಕವಾಗಿ ಹಾಕಿಕೊಂಡ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2025 ನೇ ಸಾಲಿನ ನೋಂದಾವಣಿ ಪ್ರಕ್ರಿಯೆಯ ಆರಂಭದ ಬಗ್ಗೆ ಪೋಸ್ಟರ್ ಬಿಡುಗಡೆಯು ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ, ಕಾಪು ತಹಶೀಲ್ದಾರರ ಕಚೇರಿಯಲ್ಲಿ, ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು. ಈ ಸಂಧರ್ಭ ಕಾಪು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ಚಂದ್ರ ಸುವರ್ಣ, ಕಾಪು ತಾಲೂಕು ಪಂಚಾಯತ್ […]