ಪ್ರಾಧ್ಯಾಪಕಿ ಡಾ. ಚೇತನಾ ಎಂ. ಅವರಿಗೆ “ವಿದ್ಯಾ ವರ್ಧಿನಿ” ಪ್ರಶಸ್ತಿ.

ದಾವಣಗೆರೆ: ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ, ಪ್ರಸ್ತುತ ಕೋಟೇಶ್ವರದ ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಚೇತನಾ ಎಂ. ಅವರಿಗೆ ಜುಲೈ 20 ರಂದು ಪ್ರತಿಷ್ಠಿತ “ವಿದ್ಯಾವರ್ಧಿನಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಾವಣಗೆರೆ ಜಿಲ್ಲಾ ಪಂಚಮಸಾಲಿ ಸಮುದಾಯ ಮತ್ತು ಹರ ಸೇವಾ ಸಂಸ್ಥೆ (ರಿ.), ದಾವಣಗೆರೆಯ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಯವರು ಈ ಪ್ರಶಸ್ತಿಯನ್ನು ಪ್ರದಾನ […]
ಉಡುಪಿ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ನಾಗರಪಂಚಮಿ ಆಚರಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ನಾಗರಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.ತುಳುನಾಡಿನ ದ್ರಾವಿಡ ಜನಾಂಗದ ಬಹುತೇಕ ವರ್ಗಗಳು ಆರಾಧಿಸಿಕೊಂಡು ಬಂದಿರುವ ನಾಗರ ಪಂಚಮಿ ಶ್ರದ್ಧೆ , ಭಕ್ತಿಯಿಂದ ಸಂಪನ್ನಗೊಳ್ಳುತ್ತಿದೆ.ಕರಾವಳಿಯ ನಾಗಸ್ಥಾನ, ಮೂಲನಾಗಸ್ಥಾನ, ದೇಗುಲಗಳಿಗೆ ತೆರಳಿದ ಭಕ್ತರು ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರಿಗೆ ಹಿಂಗಾರ, ಅರಶಿನ, ಕೇದಗೆ, ಕೆಂದಾಳಿ ಸೀಯಾಳ ಅಭಿಷೇಕ ಅರ್ಪಿಸಿದರು. ಕೆಲವು ಕಡೆ ಮಳೆ ಇದ್ದರೂ ಭಕ್ತರು ಮಳೆಯಲ್ಲೇ ನಿಂತು ದೇವರಿಗೆ ಸೇವೆ ಸಲ್ಲಿಸಿದರು. ಹೆಚ್ಚಿನ ಮೂಲನಾಗನ ಸನ್ನಿಧಿಯಲ್ಲಿ ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು, ನಾಗದೇವರಿಗೆ […]
ಉಡುಪಿಯಲ್ಲಿ ಸಂಸ್ಕೃತಿ ಸಂಭ್ರಮ ಸಮಾರೋಪ

ಉಡುಪಿ: ಒಬ್ಬ ವ್ಯಕ್ತಿಗೆ ಬಂಗಾರ, ವಜ್ರ ಇವೆಲ್ಲಾ ಎಷ್ಟು ಭೂಷಣವೋ ಹಾಗೆಯೇ ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ಕೂಡಾ ಭೂಷಣವಾಗಿರುತ್ತದೆ. ಕರಾವಳಿ ಪ್ರದೇಶ ಅತ್ಯುನ್ನತ ಸಂಸ್ಕೃತಿ, ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಾನಪದ ಅಕಾಡೆಮಿ, ನಾಟಕ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಇವರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, ಸಂಗೀತ, […]
ಎಂಸಿಸಿ ಬ್ಯಾಂಕ್ ‘ಐಡಿಯಾ ಸಮ್ಮಿತ್ 2025’ ಆಯೋಜನೆ

ಮಂಗಳೂರು: ಬ್ಯಾಂಕಿಂಗ್’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು. ಈ ಸಮ್ಮಿತ್’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್ನ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ ಭಾಷಣಕಾರರಲ್ಲಿ ಹೆಸರಾಂತ ಎನ್ಆರ್ಐ ಉದ್ಯಮಿ ಮತ್ತು ಉದಾರ ದಾನಿ ಶ್ರೀ ಮೈಕಲ್ ಡಿಸೋಜಾ, […]
ಧರ್ಮಸ್ಥಳ ಪ್ರಕರಣ: ಗುರುತಿಸಿದ ಸ್ಥಳ ಅಗೆಯುವ ಪ್ರಕ್ರಿಯೆ ಆರಂಭ; ಬಿಗಿ ಪೊಲೀಸ್ ಭದ್ರತೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹಗಳನ್ನು ಹೊರ ತೆಗೆಯವ ಕಾರ್ಯ ಮಂಗಳವಾರ ಬಿಗು ಪೊಲೀಸ್ ಭದ್ರತೆಯೊಂದಿಗೆ ಆರಂಭವಾಯಿತು. ಧರ್ಮಸ್ಥಳದ ಸ್ನಾನ ಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಜಾಗವನ್ನು ಏಳೆಂಟು ಕಾರ್ಮಿಕರು ಜೋರು ಮಳೆಯ ನಡುವೆಯೇ ಅಗೆಯುತ್ತಿದ್ದಾರೆ. ಈ ಪ್ರಕರಣದ (ಸಂಖ್ಯೆ 39/2025) ಸಾಕ್ಷಿ ದೂರುದಾರ ವ್ಯಕ್ತಿಯೂ ಮುಸುಕು ಧರಿಸಿ ಸ್ಥಳದಲ್ಲಿ ಹಾಜರಿದ್ದರು. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ […]