ಆ. 31ರಂದು ಉಡುಪಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ನ “31ನೇ ವಾರ್ಷಿಕೋತ್ಸವ- “ಓಣಂ ಸಂಭ್ರಮ-2025”

ಉಡುಪಿ: ಉಡುಪಿ ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ನ “31ನೇ ವಾರ್ಷಿಕೋತ್ಸವ” ಹಾಗೂ “ಓಣಂ ಸಂಭ್ರಮ-2025” ಕಾರ್ಯಕ್ರಮವನ್ನು ಇದೇ ಆಗಸ್ಟ್ 31ರ ಭಾನುವಾರ ಅಂಬಲಪಾಡಿಯ ಶಾಮಿಲಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಸುಗುಣ ಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8ಗಂಟೆಯಿಂದ 9ಗಂಟೆಯವರೆಗೆ ಹೂವಿನ ರಂಗೋಲಿ ಸ್ಪರ್ಧೆ, ಬೆಳಿಗ್ಗೆ 9ರಿಂದ 11 ಗಂಟೆಯವರೆಗೆ ಸಾಂಸ್ಕೃತಿಕ ಸ್ಪರ್ಧೆಗಳು, ಮಧ್ಯಾಹ್ನ 12.30ರಿಂದ 2.30ರವರೆಗೆ ಕೆಸಿಎಸ್ ಸಿ ಕಲ್ಚರಲ್ ಬ್ಲಾಸ್ಟ್ ಹಾಗೂ […]
170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ವಿಶ್ವ ದಾಖಲೆ ಬರೆದ ವಿದುಷಿ ದೀಕ್ಷಾ ವಿ.

ಉಡುಪಿ: ಬ್ರಹ್ಮಾವರ ತಾಲೂಕು ಮುಂಡ್ಕಿನಜಡ್ಡುವಿನ ವಿದುಷಿ ದೀಕ್ಷಾ ವಿ. ಅವರು ಅಜ್ಜರಕಾಡಿನ ಡಾ. ಜಿ.ಶಂಕರ ಮಹಿಳಾ ಕಾಲೇಜಿನ ಪಿಜಿ ಸಭಾಭವನದಲ್ಲಿ ವಿಶ್ವ ದಾಖಲೆಗಾಗಿ 7 ದಿನಗಳಿಂದ ನಿರಂತರ ಭರತನಾಟ್ಯ ಪ್ರದರ್ಶನ ನೀಡುತ್ತಿದ್ದು, ಗುರುವಾರ ಸಂಜೆ 5.30ಕ್ಕೆ 170 ಗಂಟೆಗಳ ಗಡಿಯನ್ನು ದಾಟಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಹಿಂದಿನ 170 ಗಂಟೆಗಳ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲೆಯನ್ನು ಮೀರಿಸಿದ್ದಾರೆ. ಆಗಸ್ಟ್ 21 ರಂದು ಮಧ್ಯಾಹ್ನ 3:30ಕ್ಕೆ ನೃತ್ಯ ಪ್ರದರ್ಶನ ಪ್ರಾರಂಭವಾಗಿದ್ದು, ಒಂಭತ್ತು ದಿನಗಳಲ್ಲಿ 216 […]
ಮಹಿಳೆಯರ ಘನತೆಗೆ ಧಕ್ಕೆ ತಂದರೆ ಕಠಿಣ ಕ್ರಮ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇತ್ತೀಚಿನ ಬೆಳವಣಿಗೆಗಳ ಕುರಿತು ಸ್ಪಷ್ಟನೆ ನೀಡಿದ್ದು, ಯಾರೇ ಆಗಿರಲಿ ಮಹಿಳೆಯರ ಘನತೆಗೆ ಧಕ್ಕೆ ತಂದರೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಹಿಳಾ ಹೋರಾಟಗಾರರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಅದರಲ್ಲಿ “ಧರ್ಮಸ್ಥಳದ ಸೌಜನ್ಯ, ವೇದವಲ್ಲಿ ಅವರನ್ನೆಲ್ಲಾ ಯಾರು ಕೊಂದ್ರು ಎಂಬ ಅಂಶವನ್ನು ಒಳಗೊಂಡ ಪತ್ರವನ್ನು ಪ್ರಗತಿಪರರು ನೀಡಿದ್ದಾರೆ ಎಂದು ಚೌಧರಿ ವಿವರಿಸಿದರು. ಈ ಕುರಿತು ಈಗಾಗಲೇ ಎಸ್ಐಟಿ ತನಿಖೆ […]
ಅಯ್ಯಪ್ಪ ಭಕ್ತವೃಂದ ಆದಿಉಡುಪಿ:ನೂತನ ಭಜನಾ ಮಂದಿರ ಹಾಗೂ ಸಬಾಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ:ಅಯ್ಯಪ್ಪ ಭಕ್ತವೃಂದ ಅದಿಉಡುಪಿ ಬೈಪಾಸ್ (ರಿ.) ಇದರ ನೂತನ ಭಜನಾ ಮಂದಿರ ಹಾಗೂ ಸಬಾಭವನದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀಯುತ ನಾಡೋಜ ಡಾ ಜಿ ಶಂಕರ್ ಇವರ ಮಾರ್ಗದರ್ಶನದಲ್ಲಿ ದಿ. 24.04.2025 ನೇ ಆದಿತ್ಯವಾರದಂದು ಕರಾವಳಿ ಬೈಪಾಸ್ ನ ಪ್ರಜ್ವಲ್ ನಗರದಲ್ಲಿ ಜರುಗಿತು. ಮುಖ್ಯ ಅಥಿತಿಗಳಾಗಿ ಗುರುಸ್ವಾಮಿಗಳಾದ ರಾಮಣ್ಣ ಗರಡಿ ಮಜಲು, ಸೋಮಯ್ಯ ಅಮೀನ್ ಹಾಗೂ ಕಾರ್ಯಕಾರಿ ಸಮಿತಿಯ ಅಧ್ಯಕ್ಷರುಗಳಾದ ಸುರೇಶ್ ಕೋಟ್ಯಾನ್, ಗೌರೀಶ್ ಕೋಟ್ಯಾನ್ ಉಪಾಧ್ಯಕ್ಷರುಗಳಾದ ಜಗದೀಶ್ ಕಾಂಚನ್, ಕೃಷ್ಣ ಅಂಬಲಪಾಡಿ […]
ಕಾರ್ಕಳ ಕ್ರೈಸ್ಟ್ ಕಿಂಗ್: ಪ್ರೌಢಶಾಲಾ ವಿಭಾಗದ ಬಾಲಕಿಯರ ವಾಲಿಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಇವರ ಸಹಯೋಗದಲ್ಲಿ ವಿದ್ಯಾವರ್ಧಕ ಪ್ರೌಢಶಾಲೆ ಮುಂಡ್ಕೂರು ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೆöÊಸ್ಟ್ಕಿಂಗ್ ಆಂಗ್ಲಮಾಧ್ಯಮ ಪೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಒಂಬತ್ತನೇ ತರಗತಿಯ ಶೈನಿ ಡಿಸೋಜಾ, ಶಗುನ್ ವರ್ಮಾ, ಕಾರ್ತಿಕಾ ಶೆಟ್ಟಿ, ಆಶಿಕಾ, ಹತ್ತನೇ ತರಗತಿಯ ವಿದ್ಯಾಶ್ರೀ, ಕೀರ್ತನಾ ಡಿಸೋಜ, ಎಂಟನೇ ತರಗತಿಯ […]