ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಚುನಾವಣೆ ಕೆಲಸಗಳಿಂದ ವಿನಾಯಿತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಇದರೊಂದಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಎಲ್ಲಾ ಸಂಘಟನೆಗಳ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ. ಮುಂದಿನ ಅಕ್ಟೋಬರ್‌ನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಗೌರ್ವನ್ಮೆಂಟ್‌ ಮಾಂಟೆಸ್ಸರಿ) ತರಗತಿಗಳು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರೊಂದಿಗೆ ಚರ್ಚೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು. ಈ […]

ಬ್ರಹ್ಮಾವರ: ಜಾತಿನಿಂದನೆ ಆರೋಪ; ಚೇರ್ಕಾಡಿ ಗ್ರಾಮ ಪಂಚಾಯತ್ ಪಿಡಿಒ ವಿರುದ್ಧ ಪ್ರಕರಣ ದಾಖಲು.

ಬ್ರಹ್ಮಾವರ: ಅರ್ಜಿಯ ಬಗ್ಗೆ ವಿಚಾರಿಸಲು ಹೋದ ದಲಿತ ಮಹಿಳೆಗೆ ಜಾತಿ ನಿಂದನೆಗೈದ ಆರೋಪದಲ್ಲಿ ಚೇರ್ಕಾಡಿ ಗ್ರಾಪಂ ಪಿಡಿಓ ಸುಭಾಸ್ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಾರು 2 ವರ್ಷಗಳ ಹಿಂದೆ ಅವೈಜ್ಞಾನಿಕವಾಗಿ ನಿರ್ಮಿಸಿದ ಕಾಂಕ್ರೀಟ್ ರಸ್ತೆಯ ಪರಿಣಾಮ ಮಳೆಗಾಲ ದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ಚೇರ್ಕಾಡಿಯ ವನಿತಾ ಎಂಬವರ ಹೈನುಗಾರಿಕ ಘಟಕಕ್ಕೆ ನುಗ್ಗಿ ಅಪಾರ ನಷ್ಟ ಉಂಟಾಗಿತ್ತು. ಈ ಬಗ್ಗೆ ವನಿತಾ ಚೇರ್ಕಾಡಿ ಗ್ರಾಪಂ ಪಿಡಿಓ ಸುಭಾಸ್ ಅವರಿಗೆ ಅರ್ಜಿ ಸಲ್ಲಿಸಿದ್ದರು. […]

ಶಂಕರಪುರ ಸೈಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ ರೇಂಜರ್ ಘಟಕ ಪ್ರಾರಂಭ.

ಉಡುಪಿ: ಶಂಕರಪುರ ಸೈಂಟ್ ಜಾನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕಾಪು ನೇತೃತ್ವದಲ್ಲಿ ರೋವರ್ ರೇಂಜರ್ ಘಟಕವನ್ನು ಪ್ರಾರಂಭಿಸಲಾಯಿತು. ಅತಿಥಿಯಾಗಿ ಆಗಮಿಸಿದ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು ಮಾತನಾಡಿ ಜಿಲ್ಲೆಯಲ್ಲಿ ಸುಮಾರು 45 ಸಾವಿರ ವಿದ್ಯಾರ್ಥಿಗಳು ಈ ಸ್ಕೌಟಿಂಗ್ ಚಳುವಳಿಯಲ್ಲಿ ತೊಡಗಿಸಿಕೊಂಡಿದ್ದು, ರಾಜ್ಯ ಮುಖ್ಯ ಆಯುಕ್ತ ಪಿ ಜಿ ಆರ್ ಸಿಂಧ್ಯಾರವರ ಆದೇಶದಂತೆ 10 ಸಾವಿರ ಹೊಸ ವಿದ್ಯಾರ್ಥಿಗಳನ್ನು ಸೇರಿಸುವ ಮಹತ್ತರ […]

ಪ್ರಾಧ್ಯಾಪಕಿ ಡಾ. ಚೇತನಾ ಎಂ. ಅವರಿಗೆ “ವಿದ್ಯಾ ವರ್ಧಿನಿ” ಪ್ರಶಸ್ತಿ.

ದಾವಣಗೆರೆ: ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿರುವ, ಪ್ರಸ್ತುತ ಕೋಟೇಶ್ವರದ ಶ್ರೀ ಕಾಳವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ವಹಣಾ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಚೇತನಾ ಎಂ. ಅವರಿಗೆ ಜುಲೈ 20 ರಂದು ಪ್ರತಿಷ್ಠಿತ “ವಿದ್ಯಾವರ್ಧಿನಿ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ದಾವಣಗೆರೆ ಜಿಲ್ಲಾ ಪಂಚಮಸಾಲಿ ಸಮುದಾಯ ಮತ್ತು ಹರ ಸೇವಾ ಸಂಸ್ಥೆ (ರಿ.), ದಾವಣಗೆರೆಯ ಪಂಚಮಸಾಲಿ ಸಮಾಜದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಯವರು ಈ ಪ್ರಶಸ್ತಿಯನ್ನು ಪ್ರದಾನ […]