Instagram ನಲ್ಲಿ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ವೀಡಿಯೊ ಹರಿಬಿಟ್ಟ ಪ್ರಕರಣ; ಏಳು ಮಂದಿಯ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಸಾಮಾಜಿಕ ಜಾಲತಾಣ Instagram ನಲ್ಲಿ ಪರಿಚಯ ಮಾಡಿಕೊಂಡು, ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ರಾಕೇಶ್ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. Instagramನಲ್ಲಿ ಪರಿಚಯ:ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಎರಡು ತಿಂಗಳ ಹಿಂದೆ Instagram ನಲ್ಲಿ ಕಾರ್ತಿಕ್ ಎಂಬಾತ ಪರಿಚಯವಾಗಿದ್ದ. Instagramನಲ್ಲಿ ಮಾತನಾಡುತ್ತಿದ್ದ […]
ಈಜು ಸ್ಪರ್ಧೆ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿಭಾಗೀಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ: ಅಜ್ಜರಕಾಡಿ ನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದ ವಿದ್ಯಾರ್ಥಿ ರೋಹಿತ್ 200 ಮೀಟರ್ ಬ್ರೆಸ್ಟ್ಸ್ಟ್ರೋಕ್ ಈಜಿನಲ್ಲಿ ಪ್ರಥಮ ಸ್ಥಾನವನ್ನು ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಉಡುಪಿ:ಫಲಾನುಭವಿ ಆಧಾರಿತ ಯೋಜನೆ : ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ 13 ಫಲಾನುಭವಿ ಆಧಾರಿತ ಯೋಜನೆಗಳಾದ ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ, ಸ್ವಯಂ ಉದ್ಯೋಗಕ್ಕಾಗಿ ಆಧಾರ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ ಮತ್ತು ಅಂಧ ಮಹಿಳೆಗಾಗಿ ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ […]
ಉಡುಪಿ:ರೆಡ್ಕ್ರಾಸ್ ಸಂಸ್ಥೆಯ ಮಾನವೀಯ ಸೇವೆ ಶ್ಲಾಘನೀಯವಾದುದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ರೆಡ್ಕ್ರಾಸ್ ಸಂಸ್ಥೆಯು ಮಾನವ ಜೀವನ ಹಾಗೂ ಆರೋಗ್ಯವನ್ನು ರಕ್ಷಿಸಲು ಯಾವುದೇ ಫಲಾಪೇಕ್ಷಿಯಿಲ್ಲದೇ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರೆಡ್ಕ್ರಾಸ್ನ ಈ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಿನೇವಾ ಒಪ್ಪಂದ ಐತಿಹಾಸಿಕ ಆಚರಣೆಯ ಸಮಾರೋಪ, ವಿಶ್ವಶಾಂತಿಗಾಗಿ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ, […]
ಉಡುಪಿ: ಬಳಕೆದಾರರ ವೇದಿಕೆಯ ಹಿರಿಯ ವಿಶ್ವಸ್ಥ ಎ.ಪಿ.ಕೊಡಂಚ ನಿಧನ

ಉಡುಪಿ: ಉಡುಪಿ ಬಳಕೆದಾರರ ವೇದಿಕೆಯ ಹಿರಿಯ ವಿಶ್ವಸ್ಥ ಅಲೆವೂರು ಪದ್ಮನಾಭ ಕೊಡಂಚ(89) ಅಗಸ್ಟ್ 31ರಂದು ತಡರಾತ್ರಿ ಕೊಳ್ಳೇಗಾಲದ ತಮ್ಮ ಪುತ್ರಿಯ ಗೃಹದಲ್ಲಿ ನಿಧನರಾದರು. ಮೃತರು ಪತ್ನಿ, ಈರ್ವರು ಪುತ್ರರು, ಈರ್ವರು ಪುತ್ರಿಯರನ್ನು ಅಗಲಿದ್ದಾರೆ. ಕಾರ್ಪೋರೇಶನ್ ಬ್ಯಾಂಕ್ನಲ್ಲಿ ಸುಮಾರು 39 ವರ್ಷಗಳ ಸೇವೆ ಸಲ್ಲಿಸಿ, ಜನರಲ್ ಮೇನೇಜರ್ ಹುದ್ದೆಯಿಂದ ನಿವೃತ್ತಿ ಹೊಂದಿದ ನಂತರ ಉಡುಪಿ ಬಳಕೆದಾರರ ವೇದಿಕೆಯಲ್ಲಿ ಸುಮಾರು 29 ವರ್ಷಗಳ ಕಾಲ ವಿಶ್ವಸ್ಥರಾಗಿ ಸೇವೆ ಸಲ್ಲಿಸಿ ಸಾವಿರಾರು ಮಂದಿ ಸಂತ್ರಸ್ತ ಗ್ರಾಹಕರಿಗೆ ಮಾರ್ಗದರ್ಶನ ನೀಡಿದ್ದರು. ಗ್ರಾಹಕರಿಗಾಗಿ ಅನೇಕ […]