ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ: ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ▪ ಸೇಲ್ಸ್ (Male/Female)- 2 ▪ ಸ್ಪೇರ್ಸ್ ಮ್ಯಾನೇಜರ್ -1▪ ಅಸಿಸ್ಟೆಂಟ್ ಪಿ ಡಿ ಐ-2▪ ಸರ್ವಿಸ್ ಅಡ್ವೈಸರ್-3▪ಸಿ ಆರ್ ಇ-2▪ ಹೆಲ್ಪರ್ಸ್-2▪ ಮೆಕಾನಿಕ್-3 ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ.📩[email protected]📞+91 7996210666

ಉಡುಪಿ:ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸಂಭ್ರಮದ ನಾಗರ ಪಂಚಮಿ ಆಚರಣೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗರಾಜ ನಾಗರಾಣಿಯರ ಸನ್ನಿಧಾನವಾದ ನಾಗಾಲಯದಲ್ಲಿ ನಾಗರ ಪಂಚಮಿ ಆಚರಣೆ ಕ್ಷೇತ್ರದ ಧರ್ಮದರ್ಶಿ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಿತು. ಆ ಪ್ರಯುಕ್ತ ಕ್ಷೇತ್ರದಲ್ಲಿ ನಾಗ ತನು ತಂಬಿಲ ಸೇವೆ ಪಂಚಾಮೃತ ಅಭಿಷೇಕದಿಗಳು, ಪ್ರಸನ್ನ ಪೂಜೆ ಮಹಾ ಅನ್ನಸಂತರ್ಪಣೆ ನೆರವೇರಿತು. ಕಾರಣಿಕ ಮೆರೆವ ವಲ್ಲಿ ದೇವಯಾನಿ ಸಹಿತವಾಗಿ ಷಟ್ಶಿರಾ ಸುಬ್ರಹ್ಮಣ್ಯ ಸ್ವಾಮಿಯ ಸನ್ನಿಧಾನವನ್ನು ಹೊಂದಿರುವ ಶ್ರೀ ಕ್ಷೇತ್ರದ ನಾಗಾಲಯದಲ್ಲಿ ಪ್ರಾತಃಕಾಲದಿo ದಲೇ […]

ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರ, ಮಾರಾಟಗಾರರ ಸಂಘ ಬ್ರಹ್ಮಾವರ: ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮ್ಮಾನ.

ಬ್ರಹ್ಮಾವರ: ಜಿಲ್ಲಾ ಬೇಕರಿ ಹಾಗೂ ಖಾದ್ಯ ತಿನಸುಗಳ ತಯಾರಕರ, ಮಾರಾಟಗಾರರ ಸಂಘ ಮತ್ತು ಸಹಕಾರ ಸಂಘದ ವಾರ್ಷಿಕ ಸಭೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸಮಾನ ಸಮಾರಂಭ ಬ್ರಹ್ಮಾವರ ಸಿಟಿ ಸೆಂಟರ್‌ನ ಕುಂಕುಮ ಸಭಾಂಗಣದಲ್ಲಿ ಜರಗಿತು. ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು. ಅಂಕಿತಾಧಿಕಾರಿ ಡಾ. ಪ್ರವೀಣ್ ಕುಮಾರ್, ಉದ್ಯಮಿ ರಂಜನ್ ಕಲ್ಕೂರ ಅತಿಥಿಯಾಗಿದ್ದರು. ಸಾಧಕರನ್ನು ಸಮ್ಮಾನಿಸಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಂಘದ ಚಟುವಟಿಕೆಗಳಲ್ಲಿ ಪ್ರಮುಖಪಾತ್ರ ವಹಿಸುತ್ತಿರುವ ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್ ಶೆಣೈ ದಂಪತಿ ಸಮೇತ ಸಮ್ಮಾನಿಸಲಾಯಿತು. ಸಂಘದ […]

ಬೆಳ್ತಂಗಡಿ: ವಿಷ ಸೇವಿಸಿ ವಿವಾಹಿತೆ ಆತ್ಮಹತ್ಯೆ.

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ಪಚ್ಚಡಿ ನಿವಾಸಿ ವಿವಾಹಿತೆ ವಾಣಿಶ್ರೀ (26) ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ. ಇವರಿಗೆ ಒಂದು ವರ್ಷ ಮೂರು ತಿಂಗಳ ಹಿಂದೆ ಮದುವೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವಿಷ ಸೇವಿಸಿದ್ದರು. ಮನೆಯವರು ಬಂದಾಗ ಜೀವನ್ಮರಣ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗದೇವರಿಗೆ ಪಂಚಾಮೃತ ಅಭಿಷೇಕ

ಉಡುಪಿ: ಉಡುಪಿಯ ಕಡೆಕಾರು ಶ್ರೀ ಲಕ್ಷ್ಮೀ ನಾರಾಯಣ ಮಠದಲ್ಲಿ ನಾಗದೇವರಿಗೆ ಪಂಚಾಮೃತ ಸಹಿತ ಸೀಯಾಳ ಅಭಿಷೇಕವನ್ನು ಮಾಡಲಾಯಿತು. ನಂತರ ಅರ್ಚನೆ ಸಹಿತ ವಿಶೇಷ ಹೂವಿನ ಅಲಂಕಾರವನ್ನು ಮಾಡಿ ಕಡೆಕಾರು ಮಠದ ವೇದಮೂರ್ತಿ ಶ್ರೀಶ ಆಚಾರ್ಯ ಅವರು ಮಹಾ ಪೂಜೆಯನ್ನು ಮಾಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.