ಉಡುಪಿ:ಅತಿಥಿ ಶಿಕ್ಷಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ:ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಕಾರ್ಕಳತಾಲೂಕಿನ ಅಜೆಕಾರು ವಿನಲ್ಲಿ ನೂತನವಾಗಿ ಪ್ರಾರಂಭವಾಗಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆ (ಆಂಗ್ಲಮಾಧ್ಯಮ) ಯಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ವಿಷಯಗಳ ಶಿಕ್ಷಕರ ನೇಮಕಾತಿಗೆ ಬಿ.ಎ, ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಹಾಗೂ ಗಣಿತ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ., ಬಿ.ಎಡ್ ವಿದ್ಯಾರ್ಹತೆ ಹೊಂದಿರುವವರು ಅಕ್ಟೋಬರ್ 1 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ […]
ಉಡುಪಿ:ಜಾನಪದ ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

ಉಡುಪಿ :ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಪ್ರಸಕ್ತ ಸಾಲಿನ ಐ.ಇ.ಸಿ ಹಾಗೂ ಎಸ್.ಬಿ.ಸಿ.ಸಿ ಕಾರ್ಯ ಚಟುವಟಿಕೆಯಡಿ ಜಾನಪದ ಕಲಾ ಪ್ರಕಾರಗಳ ಮೂಲಕ ಜಿಲ್ಲೆಯಾದ್ಯಂತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಜಾನಪದ ಕಲಾತಂಡಗಳ ಅಗತ್ಯವಿರುವ ಹಿನ್ನೆಲೆ, ಜಿಲ್ಲೆಯಿಂದ ಸಾಂಗ್ ಆಂಡ್ ಡ್ರಾಮಾ ಡಿವಿಜನ್, ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಇಲಾಖೆಯಲ್ಲಿ ನೋಂದಣಿಯಾಗಿರುವ ಹಾಗೂ ಆರೋಗ್ಯ ಇಲಾಖೆಯ ವಿಭಾಗೀಯ ಮಟ್ಟದಲ್ಲಿ ತರಬೇತಿ ಪಡೆದಿರುವ ಆಸಕ್ತ ಜಾನಪದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ […]
ಕಾಪು : ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆ ತೆರೆಯಲು ಅರ್ಜಿ ಆಹ್ವಾನ

ಉಡುಪಿ: ಕಾಪು ತಾಲೂಕಿನಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅನುಮತಿ ಪಡೆಯದೇ ಯಾವುದೇಅಂಗಡಿಗಳಲ್ಲಿ ಸುಡುಮದ್ದು ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಅನಧಿಕೃತವಾಗಿ ಅನುಮತಿ ಪಡೆಯದೇ ಸುಡುಮದ್ದು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ಕೋರಿ ಸೆಪ್ಟಂಬರ್ 26 ರ ಒಳಗಾಗಿ ಕಾಪು ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕಾಪು ತಹಶೀಲ್ದಾರರ ಕಚೇರಿಪ್ರಕಟಣೆ ತಿಳಿಸಿದೆ.
ಸೆ.25-ವಿಶ್ವ ಫಾರ್ಮಸಿಸ್ಟ್ ದಿನ; ನಂಬಿಕೆಗೆ ಪ್ರತೀಕವಾದ ಫಾರ್ಮಸಿಸ್ಟ್ಗಳ ಸೇವೆಗೆ ನಮ್ಮದೊಂದು ಸಲಾಂ!

ವೈದ್ಯಕೀಯ ಕ್ಷೇತ್ರದಲ್ಲಿ ಫಾರ್ಮಸಿಸ್ಟ್ಗಳ ಸೇವೆ ಅನನ್ಯವಾಗಿದೆ. ವಿವಿಧ ರೋಗಗಳ ವಿರುದ್ಧ ಪರಿಣಾಮಕಾರಿ ಔಷಧ ಕಂಡುಹಿಡಿದು ರೋಗಿಗಳಿಗೆ ಸೂಕ್ತ ಪ್ರಮಾಣ ನೀಡುವಲ್ಲಿ ಮಹತ್ತರ ಪಾತ್ರ ಹೊಂದಿದ್ದಾರೆ. 2009ರಲ್ಲಿ ಇಂಟರ್ನ್ಯಾಶನಲ್ ಫಾರ್ಮಸುಟಿಕಲ್ ಫೆಡರೇಶನ್ನ ಆದೇಶದಂತೆ ಪ್ರತಿ ವರ್ಷ ಸೆಪ್ಟಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ದಿನ ಆಚರಿಸಲಾಗುತ್ತಿದೆ. ಸೆ.25-ವಿಶ್ವ ಫಾರ್ಮಸಿಸ್ಟ್ ದಿನ; ನಂಬಿಕೆಗೆ ಪ್ರತೀಕವಾದ ಫಾರ್ಮಸಿಸ್ಟ್ಗಳ ಸೇವೆಗೆ ನಮ್ಮದೊಂದು ಸಲಾಂ! ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವೇ ಎನಿಸಿಕೊಂಡ ಫಾರ್ಮಸಿ ವಿಭಾಗ ಹಲವು ವರ್ಷಗಳಿಂದ ತನ್ನದೆ ಆದ ಛಾಪು ಮೂಡಿಸಿದೆ. 2009ರಲ್ಲಿ ಇಂಟರ್ನ್ಯಾಶನಲ್ […]
ಉಡುಪಿ:ವೃದ್ಧ ನಾಪತ್ತೆ

ಉಡುಪಿ: ಕಾಪು ತಾಲೂಕು ಉಚ್ಚಿಲ ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಉಮರಬ್ಬ (69) ಎಂಬ ವೃದ್ಧವ್ಯಕ್ತಿಯು ಸೆಪ್ಟಂಬರ್ 20 ರಂದು ಮನೆಯಿಂದ ಹೊರಗೆ ಹೋದವರು ಸಂಬಂಧಿಕರ ಮನೆಗೂ ಹೋಗದೇ, ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಬ್ಯಾರಿ ಹಾಗೂ ಮಳೆಯಾಳಿ ಭಾಷೆಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯ ಉಪನಿರೀಕ್ಷಕರು ಮೊ.ನಂ: 9480805450, ದೂ.ಸಂಖ್ಯೆ:0820-2555452, ಕಾಪು ಪೊಲೀಸ್ ವೃತ್ತ ನಿರೀಕ್ಷಕರು ಮೊ.ನಂ: […]