ಬಿ ಎಲ್ ಸಂತೋಷ್ ವಿರುದ್ಧ ಹಿಂದೂ ವಿರೋಧಿ ಶಕ್ತಿಗಳ ಅವಹೇಳನಕಾರಿ ಹೇಳಿಕೆ ಖಂಡನಾರ್ಹ: ಯಶ್ ಪಾಲ್ ಸುವರ್ಣ ಆಕ್ರೋಶ

ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ ವಿರುದ್ಧ ಸೆಡ್ಡು ಹೊಡೆದು ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಂತ ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕರಾದ ಬಿ. ಎಲ್. ಸಂತೋಷ್ ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವ ಹಿಂದೂ ವಿರೋಧಿ ಶಕ್ತಿಗಳ ವಿರುದ್ಧ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಲ್ಲುವ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಪಿತೂರಿಯ ಮುಂದುವರಿದ ಭಾಗವಾಗಿ ಬಿ ಎಲ್ ಸಂತೋಷ್ ರವರ ವಿರುದ್ಧ ಹೇಳಿಕೆ ನೀಡುವ ಮೂಲಕ ಧರ್ಮಸ್ಥಳ […]

ಮಂಗಳೂರು-ಬೆಂಗಳೂರು ರೈಲು ಸಂಚಾರ ಮಾರ್ಗದಲ್ಲಿ ಗುಡ್ಡ ಕುಸಿತ; ರೈಲ್ವೆ ಮಾರ್ಗ ತಾತ್ಕಾಲಿಕ ಬಂದ್!

ಹಾಸನ: ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಬಳಿ ಭಾರೀ ಮಳೆಯಿಂದಾಗಿ ರೈಲ್ವೇ ಹಳಿ ಮೇಲೆ ಮಣ್ಣು ಕುಸಿತಗೊಂಡಿದೆ. ಇದರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗವನ್ನು ತಾತ್ಕಾಲಿಕ ಬಂದ್ ಮಾಡಲಾಗಿದ್ದು, ರಾತ್ರಿಯಿಡೀ ಮಣ್ಣು ತೆರವುಗೊಳಿಸುವ ಕಾರ್ಯ ನಡೆದಿದೆ. ಧಾರಾಕಾರ ಮಳೆಯ ನಡುವೆಯೂ ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ ಗುಡ್ಡದ ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರೂ ಸಹ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಧಾರಾಕಾರ ಮಳೆಯಿಂದ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ […]

ಉಡುಪಿ: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ಪೂರ್ಣಗೊಳಿಸಿ; ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬವಿಲ್ಲದೇ ತ್ವರಿತವಾಗಿ ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಅಭಿಯಂತರರುಗಳಿಗೆ ಸೂಚನೆ ನೀಡಿದರು. ಅವರು ಆ.16 ರಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ 169 ಎ ಗೆ ಸಂಬಂಧಿಸಿದಂತೆ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ […]

ಸೆ. 6, 7ರಂದು ದುಬೈನಲ್ಲಿ ‘ಅಂತರಾಷ್ಟ್ರೀಯ ಜಾನಪದ ಉತ್ಸವ’

ಉಡುಪಿ: “ಕರ್ನಾಟಕ ಜಾನಪದ ಪರಿಷತ್ ಯುಎಇ ಘಟಕದ ಉದ್ಘಾಟನೆ ಹಾಗೂ ಅಂತರಾಷ್ಟ್ರೀಯ ಜಾನಪದ ಉತ್ಸವ” ಸೆಪ್ಟೆಂಬರ್ 6ಮತ್ತು 7ರಂದು ಯುಎಇ ದುಬೈನ ರಾಮಿಡ್ರಿಮ್ ಪಂಚತಾರಾ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉತ್ಸವದ ನಿರ್ದೇಶಕ, ಕಟಪಾಡಿ ವನಸುಮ ಟ್ರಸ್ಟ್ ಅಧ್ಯಕ್ಷ ಬಾಸುಮ ಕೊಡಗು ಅವರು, ಕರ್ನಾಟಕದ ಜಾನಪದ ಪ್ರಕಾರಗಳಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತೇಜನ ನೀಡುವ ಉದ್ದೇಶದಿಂದ ಈ ಜಾನಪದ ಉತ್ಸವವನ್ನು ಆಯೋಜಿಸಲಾಗಿದೆ‌. ರಾಜ್ಯದ ಹತ್ತಕ್ಕೂ ಹೆಚ್ಚು ಜಾನಪದ ತಂಡಗಳನ್ನು ದುಬೈಗೆ ಆಮಂತ್ರಿಸಿ, ಜಗತ್ತಿನ […]

ಆ.17ರಂದು ಮಂದಾರ್ತಿಯಲ್ಲಿ “ಕಿರಾಡಿ ಯಕ್ಷ ಪ್ರಣತಿ- 2025”

ಉಡುಪಿ: ಯಕ್ಷ ನಕ್ಷತ್ರ ಟ್ರಸ್ಟ್ ಕಿರಾಡಿ ಇದರ ತೃತೀಯ ವಾರ್ಷಿಕೋತ್ಸವ ಅಂಗವಾಗಿ “ಕಿರಾಡಿ ಯಕ್ಷ ಪ್ರಣತಿ- 2025” ಕಾರ್ಯಕ್ರಮವನ್ನು ಇದೇ ಆಗಸ್ಟ್ 17ರಂದು ಮಂದಾರ್ತಿ ಶೇಡಿಕೊಡು ದುರ್ಗಾ ಸನ್ನಿಧಿಯಲ್ಲಿ ಆಯೋಜಿಸಲಾಗಿದೆ ಎಂದು ಯಕ್ಷ ನಕ್ಷತ್ರ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷ ಪ್ರಕಾಶ್ ಮೊಗವೀರ ಕಿರಾಡಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿವರ್ಷದಂತೆ ನೀಡಲಾಗುವ 2025 ಯಕ್ಷ ನಕ್ಷತ್ರ ಪ್ರಶಸ್ತಿಗೆ ಖ್ಯಾತ ಪ್ರಸಂಗಕರ್ತರಾದ ಕಂದಾವರ ರಘುರಾಮ ಶೆಟ್ಟಿ ಹಾಗೂ 2025 ರ ಯಕ್ಷ ನಕ್ಷತ್ರ […]