ಆ.23 ರಂದು ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಹರಿಹರ ತೀರ್ಥ ಸ್ನಾನ.

ಉಡುಪಿ: ಇತಿಹಾಸ ಪ್ರಸಿದ್ಧ 8 ನೇ ಶತಮಾನದಲ್ಲಿ ಗಾಲವ ಋಷಿ ತಪಸ್ಸು ಮಾಡಿದ್ದ ಕೀಳಂಜೆ ಶ್ರೀ ಮಹಾವಿಷ್ಣು ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ನಡೆದ ಅಷ್ಟಮಂಗಲ ಪ್ರಶ್ನೆಯಲ್ಲಿ ಮೂಡಿಬಂದಂತೆ ಪ್ರತಿ ವರ್ಷ ಸಿಂಹ ಮಾಸದ ಅಮಾವಾಸ್ಯೆ ದಿನ ಶ್ರೀಹರಿಹರ ತೀರ್ಥಕುಂಡದಲ್ಲಿ ವಾರ್ಷಿಕವಾಗಿ ತೀರ್ಥ ಉದ್ಭವಿಸುವ ಲಕ್ಷಣವಿದ್ದು, ಈ ದಿನದಂದು ಈ ಪವಿತ್ರ ಸರೋವರದಲ್ಲಿ ತೀರ್ಥ ಸ್ನಾನ ಮಾಡಿದಲ್ಲಿ ಭಕ್ತಾದಿಗಳ ಶಾರೀರಿಕ ಖಾಯಿಲೆಗಳು, ಮುಖ್ಯವಾಗಿ ಚರ್ಮರೋಗ ನಿವಾರಣೆಯಾಗುವುದಲ್ಲದೆ ಸದ್ಭಕ್ತರ ಸಕಲ ಇಷ್ಟಾರ್ಥವು ನೆರವೇರಲಿದೆ ಎಂದು ಪ್ರಶ್ನೆಯಲ್ಲಿ ತಿಳಿದು ಬಂದಿರುತ್ತದೆ. ಆದ್ದರಿಂದ […]
ಜಿಲ್ಲಾ ಉಸ್ತುವಾರಿ ಸಚಿವರಿಂದ ಗಂಗೆ ಕೊರಗ ಕುಟುಂಬಕ್ಕೆ ಹಕ್ಕು ಪತ್ರ ವಿತರಣೆ.

ಉಡುಪಿ: ಕೊಲ್ಲೂರು ಗ್ರಾಮದ ಕಲ್ಯಾಣಿಗುಡ್ಡೆ ಎಂಬಲ್ಲಿ ನಡೆದ ಜಾಗ ಮತ್ತು ಮನೆ ಧ್ವಂಸ ಪ್ರಕರಣದ ಸಂತ್ರಸ್ಥೆ ಗಂಗೆ ಕೊರಗರವರ ಕುಟುಂಬಕ್ಕೆ ಪುನರ್ವಸತಿಗಾಗಿ ಹತ್ತು ಸೆಂಟ್ಸ್ ಜಾಗದ ಹಕ್ಕು ಪತ್ರ ಮತ್ತು ಮನೆ ಮಂಜೂರಾತಿ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ರವರು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಕಾರ್ಯಗಾರದಲ್ಲಿ ವಿತರಿಸಿದರು. ಸಮಾರಂಭದ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ, ಜಿಲ್ಲಾ ಪಂಚಾಯಿತ್ […]
ಹೆಬ್ರಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ

ಹೆಬ್ರಿ: ಗ್ರಾಮೀಣ ಪ್ರದೇಶದ ಮಕ್ಕಳಿಗೆ ನಿರಂತರವಾಗಿ ವೇದಿಕೆ ಕಲ್ಪಿಸಿ ಸಮಾಜದ ಮುಖ್ಯ ವಾಹಿನಿಗೆ ತರುವಲ್ಲಿ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು ಹೆಬ್ರಿ -ಅಜೆಕಾರು ವಲಯ ಬಂಟರ ಸಂಘದ ಅಧ್ಯಕ್ಷ ಬಿ. ಹರ್ಷ ಶೆಟ್ಟಿ ಹೇಳಿದರು. ಅವರು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಾಣಕ್ಯ ಚಿತ್ರಕಲಾ ತರಬೇತಿ ಕೇಂದ್ರ ಹೆಬ್ರಿ ಇದರ ನೇತೃತ್ವದಲ್ಲಿ ನೇತಾಜಿ ಫ್ರೆಂಡ್ಸ್ ಕ್ಲಬ್ ಮುದ್ರಾಡಿ , ಬಂಟರ ಸಂಘ ಹೆಬ್ರಿ, ಲಯನ್ಸ್ ಕ್ಲಬ್ ಹೆಬ್ರಿ ಸಿಟಿ, ಜೆಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಬಂಟರ […]
ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಮಾನುಷ ಕೃತ್ಯಗಳು ಎಸ್ಐಟಿ ತನಿಖೆ ಮೂಲಕ ಬೆಳಕಿಗೆ ಬರಲಿ: ಮುಖ್ಯಮಂತ್ರಿಗೆ ಪತ್ರ ಬರೆದ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು

ಬೆಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಅಮಾನುಷ ಘಟನೆಗಳು ನಡೆದಿದೆ. ಈ ಘಟನೆಗಳ ಎಸ್ಐಟಿ ತನಿಖೆಗೆ ಬೆಂಬಲಿಸಿ ಜಾಗೃತ ನಾಗರಿಕರು ಕರ್ನಾಟಕ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ರಾಜ್ಯ ಸಚಿವ ಸಂಪುಟದ ಸದಸ್ಯರ ಮತ್ತು ವಿರೋಧ ಪಕ್ಷದ ಸದಸ್ಯರ ಕಾನೂನು ವಿರೋಧಿ, ಸಂವಿಧಾನ ವಿರೋಧಿ ಹೇಳಿಕೆಗಳಿಗೆ ಜಾಗೃತ ನಾಗರಿಕರು ಕರ್ನಾಟಕದ ಮುಖಂಡರು ಖಂಡಿಸಿದ್ದಾರೆ. ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಕಳೆದ ನಾಲ್ಕು ದಶಕಗಳಿಂದ ಅತ್ಯಾಚಾರ, ಕೊಲೆ, ಭೂ ಕಬಳಿಕೆ ಪ್ರಕರಣಗಳು ಆಗಾಗ ಮುನ್ನೆಲೆಗೆ ಬರುತ್ತಲೇ ಇವೆ. ಶಾಲಾ ಕಾಲೇಜುಗಳಿಗೆ ಹೋದ ವಿದ್ಯಾರ್ಥಿನಿಯರು […]
ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ https://shp.karnataka.gov.in/bcwd ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ […]