ಉಡುಪಿ:ಸರಳ ವಿವಾಹಕ್ಕೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತೀ ಜೋಡಿಗೆ 50,000 ರೂ. ನೀಡುವ ಕಾರ್ಯಕ್ರಮವನ್ನು ಷರತ್ತಿಗೊಳಪಟ್ಟು ಅನುಷ್ಠಾನಗೊಳಿಸಲಾಗಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಡುಪಿ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ […]
ಉಡುಪಿ:ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರ ನೇಮಕಾತಿಗೆ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಪ್ರತಿನಿಧಿಗಳ ನೇರನೇಮಕಾತಿಗೆ ಸಂದರ್ಶನವು ಅಕ್ಟೋಬರ್ 9 ರಂದು ಬೆಳಗ್ಗೆ 10.30 ಕ್ಕೆ ಉಡುಪಿಯ ಪ್ರಧಾನ ಅಂಚೆ ಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ. ಕನಿಷ್ಠ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 18 ವರ್ಷ ಮೇಲ್ಪಟ್ಟ, ಉತ್ತಮ ಸಂವಹನ ಕೌಶಲ್ಯ ಹಾಗೂ ವಿಮಾ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಅರ್ಹರು ಸಂದರ್ಶನ ನಡೆಯುವ ದಿನದಂದು ಅಗತ್ಯ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ […]
ಕಲಿಕಾದೀಪ ಯೋಜನೆ: ಮತ್ತೊಂದಷ್ಟು ಶಾಲೆಗಳಿಗೆ ವಿಸ್ತರಿಸಿದ ಶಿಕ್ಷಣ ಇಲಾಖೆ!

ಬೆಂಗಳೂರು: ಮೊದಲ ಹಂತದಲ್ಲಿ 1,145 ಶಾಲೆಗಳ ಮಕ್ಕಳಲ್ಲಿ ಮೂಲ ಗಣಿತ ತತ್ವಗಳು ಹಾಗೂ ಕನ್ನಡ–ಇಂಗ್ಲಿಷ್ ಭಾಷಾ ಸಾಮರ್ಥ್ಯ ಬೆಳೆಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ.ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಬೋಧನೆ ಒಳಗೊಂಡ ಈ ಯೋಜನೆ ಅನುಷ್ಠಾನಕ್ಕಾಗಿ ಇಲಾಖೆಯ ಅಧಿಕಾರಿಗಳು ಎಕ್ಸ್ಟೆಪ್ ಫೌಂಡೇಶನ್ ಜತೆ ಒಪ್ಪಂದ ಮಾಡಿಕೊಂಡಿದ್ದಾರೆ. ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಿದ್ದ ‘ಕಲಿಕಾ ದೀಪ’ ಕಾರ್ಯಕ್ರಮದ ಭಾಗವಾದ ಯೋಜನೆಯನ್ನು ಕೊಪ್ಪಳ ಹಾಗೂ ತುಮಕೂರು ಜಿಲ್ಲೆಗಳಲ್ಲಿ 2024-25ನೇ ಸಾಲಿನಲ್ಲೇ ಪ್ರಾಯೋಗಿಕವಾಗಿ ಜಾರಿ ಮಾಡಲಾಗಿತ್ತು. ಎರಡೂ ಜಿಲ್ಲೆಗಳಲ್ಲಿ ಉತ್ತಮ ಫಲಿತಾಂಶ […]
ಬೈಂದೂರು ಪ.ಪಂ. ವ್ಯಾಪ್ತಿಯಿಂದ ಗ್ರಾಮೀಣ ಪ್ರದೇಶಗಳನ್ನು ಕೈಬಿಡಲು ಆಗ್ರಹ: ನಾಳೆ (ಸೆ.19) ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಗ್ರಾಮೀಣ ಭಾಗಗಳನ್ನು ಅವೈಜ್ಞಾನಿಕವಾಗಿ ಸೇರಿಸಿರುವುದರಿಂದ ಕೃಷಿಕರು ಪ್ರತಿದಿನ ಪರದಾಡುವಂತಾಗಿದೆ. ಆದ್ದರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಗ್ರಾಮೀಣ ಭಾಗಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿ ಬೈಂದೂರು ತಾಲೂಕು ರೈತ ಸಂಘದ ನೇತೃತ್ವದಲ್ಲಿ ನಾಳೆ (ಸೆ.19) ಬೆಳಿಗ್ಗೆ 10ಗಂಟೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ತಾಲೂಕು ರೈತ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಂದೂರು ವ್ಯಾಪ್ತಿಯ […]
ಕಾರ್ಕಳ ಕ್ರೈಸ್ಟ್ ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿಹೊಸ್ಮಾರಿನಲ್ಲಿರುವ ಲೀಲಾ ಫಾರ್ಮ್ಸ್ ಹಣ್ಣುಗಳ ತೋಟಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಅಲ್ಲಿ ವಿವಿಧ ತಳಿಯ ದೇಶಿ ಮತ್ತು ವಿದೇಶಿ ಹಣ್ಣುಗಳು, ಅವುಗಳನ್ನು ಬೆಳೆಯುವ ವಿಧಾನ, ಕೊಯ್ಲು, ಸಂಸ್ಕರಣೆ ಹಾಗೂ ಮಾರುಕಟ್ಟೆಯ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು. ಲೀಲಾ ಫಾರ್ಮ್ಸ್ನ ಮಾಲಕರಾದ ಶಿವಾನಂದ ಶೆಣೈ ಹಾಗೂ ಅವರ ಪುತ್ರ ಶ್ರವಣ್ ಶೆಣೈ ತೋಟಗಾರಿಕಾ ವಿಧಾನಗಳ ಸಮಗ್ರ ಮಾಹಿತಿ ನೀಡಿದರು. […]