ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಉಡುಪಿ ಪೊಲೀಸರಿಂದ ವಿನೂತನ ಪ್ರಯತ್ನ: ಕ್ಯೂ ಆರ್ ಕೋಡ್ ಅಭಿಯಾನ ಶುರು

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ವಿದ್ಯಾರ್ಥಿಗಳು, ಯುವ ಸಮುದಾಯವನ್ನೇ ಗುರಿಯಾಗಿರಿಸಿಕೊಂಡು ಸಕ್ರೀಯವಾಗಿರುವ ಡ್ರಗ್ಸ್ ಜಾಲವನ್ನು ಮಟ್ಟ ಹಾಕಲು ಉಡುಪಿ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಸಾರ್ವಜನಿಕರು ಈ ದಂಧೆಯ ಬಗ್ಗೆ ಅನಾಮಧೇಯವಾಗಿ ಮಾಹಿತಿ ನೀಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಕ್ಯೂಆರ್ ಕೋಡ್ನ್ನು ರಚಿಸಿದೆ. ಅಕ್ರಮ ಡ್ರಗ್ಸ್ ಹಾಗೂ ಸಿಗರೇಟ್ ಮಾರಾಟಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರು ಅನಾಮಧೇಯರಾಗಿ ಕ್ಯೂಆರ್ ಕೋಡ್ನ್ನು ಸ್ಕ್ಯಾನ್ ಮಾಡಿ ಈ ಮೂಲಕ ಮಾಹಿತಿ ನೀಡಬಹುದಾಗಿದೆ. ಸ್ಕ್ಯಾನ್ ಮಾಡಿದಾಗ ಒಟ್ಟು 15 ಹಂತ ಗಳು ಬರಲಿದ್ದು, […]
ಮೂಡ್ಲಕಟ್ಟೆ ಎಂಐಟಿಯ ರಿಸರ್ಚ್ ಸೆಲ್ ವತಿಯಿಂದ ಎಐ, ಮೆಷಿನ್ ಲರ್ನಿಂಗ್ ಹಾಗೂ ಡೇಟಾ ಸೈನ್ಸ್ ಕುರಿತು ಅಂತರಾಷ್ಟ್ರೀಯ ಸಮ್ಮೇಳನ

ಕುಂದಾಪುರ: ಮೂಡ್ಲಕಟ್ಟೆ ಎಂಐಟಿಯ ರಿಸರ್ಚ್ ಸೆಲ್ ವತಿಯಿಂದ ಕೃತಕ ಬುದ್ಧಿಮತ್ತೆ ಮತ್ತು ಮೆಷಿನ್ ಲರ್ನಿಂಗ್ ಹಾಗೂ ಡೇಟಾ ಸೈನ್ಸ್ ಕುರಿತ ದ್ವಿತೀಯ ಅಂತಾರಾಷ್ಟ್ರೀಯ ಸಮ್ಮೇಳನ ಎರಡು ದಿನಗಳ ಕಾಲ ನಡೆಯಿತು. ಸಮ್ಮೇಳನವನ್ನು ಮಣಿಪಾಲ ಎಂಎಡಿಸಿ ಚೇಯರ್ಮೆನ್ ಡಾ. ಬ್ರಿಗೇಡಿಯರ್ ಸುರಜಿತ್ ಸಿಂಗ್ ಪಾಬ್ಲಾ ಉದ್ಘಾಟಿಸಿ ದರು. ದಿಕ್ಸೂಚಿ ಭಾಷಣ ಮಾಡಿದ ಅವರು, ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್(ಎಬಿಸಿ) ಮತ್ತು ಮಾನವ-ಕೇಂದ್ರಿತ ಎಐ ಕುರಿತು ಅತ್ಯುತ್ತಮ ವಿಷಯದ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ರಾಮಕೃಷ್ಣ ಹೆಗಡೆ […]
ರೈಲುಮಾರ್ಗದಲ್ಲಿ ವಿದ್ಯುತ್ ಕಾಮಗಾರಿ: ಡಿಸೆಂಬರ್ ವರೆಗೂ ಈ ದಾರಿಯಲ್ಲಿ ಹಗಲು ರೈಲು ಇಲ್ಲ!

ಮಂಗಳೂರು: ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ನಡುವೆ ಘಾಟಿ ಪ್ರದೇಶದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿ. 15ರ ವರೆಗೆ ಲೈನ್ ಬ್ಲಾಕ್ ಮಾಡುವ ನೈಋತ್ಯ ರೈಲ್ವೇ ಪ್ರಸ್ತಾವವನ್ನು ರೈಲ್ವೇ ಸಚಿವಾಲಯ ಅನುಮೋದಿಸಿದೆ. ಇದರಿಂದಾಗಿ ಬಹುತೇಕ ಹಗಲು ರೈಲುಗಳ ರದ್ಧತಿ ವಿಸ್ತರಣೆಗೊಂಡಿದೆ. ನಂ.16539 ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ರೈಲು ಡಿ.13ರ ವರೆಗೆ, ನಂ.16540 ಮಂಗಳೂರು ಜಂಕ್ಷನ್ ಯಶವಂತಪುರ ಸಾಪ್ತಾಹಿಕ ರೈಲು ಡಿ.14ರ ವರೆಗೆ, 16575 ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈವೀಕ್ಲಿ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ಡಿ.14ರ ವರೆಗೆ, 16576 ಮಂಗಳೂರು ಜಂಕ್ಷನ್ ಯಶವಂತಪುರ ಟ್ರೈ […]
ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ: ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ: ಉಡುಪಿ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ದಿನಾಂಕ:06-09-2025 ರಂದು ಸಂಘದ ಅಧ್ಯಕ್ಷರಾದ ಅರುಣ ಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ಜರಗಿತು. ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ಹೆಗ್ಡೆ ಸಂಘದ67 ನೇ ವರ್ಷದ ವಾರ್ಷಿಕ ವರದಿ, ವರದಿಗೆ ತಯಾರಿಸಿದ ಅನುಪಾಲನಾ ವರದಿ, ಆಯ-ವ್ಯಯ ಪಟ್ಟಿ ಹಾಗೂ 2025-26 ನೇ ಸಾಲಿನ ಯೋಜಿತ ಕಾರ್ಯಕ್ರಮಗಳನ್ನು ಮಂಡಿಸಿದರು. ಹಾಗೂ 2025-26 ನೇ ಸಾಲಿನ ಲೆಕ್ಕ ಪರಿಶೋಧನೆಗೆ ಲೆಕ್ಕ ಪರಿಶೋಧಕರ ನೇಮಕಾತಿ ಬಗ್ಗೆ […]
ಕಾರ್ಕಳ: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಸಂದೇಶ; ಬಿಜೆಪಿ ಐಟಿ ಸೆಲ್’ನ ಪ್ರಖ್ಯಾತ್ ವಿರುದ್ಧ ದೂರು ದಾಖಲು.

ಕಾರ್ಕಳ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಹೇಳನಕಾರಿ ಸಂದೇಶಗಳನ್ನು ಪ್ರಸಾರ ಮಾಡುವ ಮೂಲಕ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಐಟಿ ಸೆಲ್ಗೆ ಸೇರಿದ ಯುವಕನ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿ ಕಾರ್ಕಳದ ಈದು ನಿವಾಸಿ ಪ್ರಖ್ಯಾತ್ ಬಿಜೆ. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಸುಳ್ಳು ಸಂದೇಶಗಳು ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ಹರಡಿದ್ದಾನೆ ಎಂದು ಆರೋಪಿಸಲಾಗಿದೆ. ರಾಜ್ಯ ಸರ್ಕಾರದ ಬೆಲೆ ಏರಿಕೆಯು […]