ಭರ್ಜರಿ ಕಲೆಕ್ಷನ್ ಮಾಡಿದ “ಸು ಫ್ರಂ ಸೋ”: ಮೂರು ದಿನದಲ್ಲೇ 6 ಕೋಟಿ ಗಳಿಕೆ!

ರಾಜ್ ಬಿ ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಎನಿಸಿಕೊಂಡಿದೆ. ಈ ಸಿನಿಮಾ ಮೂರೇ ದಿನಕ್ಕೆ ‘ಎಕ್ಕ’ ಹಾಗೂ ‘ಜೂನಿಯರ್’ ಸಿನಿಮಾ ದಾಖಲೆಯನ್ನು ಉಡೀಸ್ ಮಾಡಿದೆ. ಭಾನುವಾರ ಬಹುತೇಕ ಎಲ್ಲ ಕಡೆಗಳಲ್ಲಿ ಸಿನಿಮಾ ಹೌಸ್ಫುಲ್ ಪ್ರದರ್ಶನ ಕಂಡಿದೆ. ಸ್ಯಾಂಡಲ್ವುಡ್ನಲ್ಲಿ ಬಹು ಸಮಯದ ಬಳಿಕ ಒಂದೊಳ್ಳೆಯ ಸಿನಿಮಾ ಬಂದಿದ್ದು, ಸಿಂಗಲ್ ಸ್ಕ್ರೀನ್ ಥಿಯೇಟರ್ಗಳು ಕೂಡ ಫುಲ್ ಆಗಿದ್ದವು ಅನ್ನೋದು ವಿಶೇಷ. ರಾಜ್ ಬಿ. ಶೆಟ್ಟಿ ಈ ಚಿತ್ರದಿಂದ ದೊಡ್ಡ ಲಾಭ ಕಂಡಿದ್ದಾರೆ. ‘ಸು ಫ್ರಮ್ […]
ಧರ್ಮಸ್ಥಳ ಪ್ರಕರಣ: ಸ್ಥಳ ಮಹಜರು ಪ್ರಕ್ರಿಯೆ ಆರಂಭ

ಬೆಳ್ತಂಗಡಿ : ಧರ್ಮಸ್ಥಳ ದೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತಂದು (ಜುಲೈ 28) ರಂದು ಮಧ್ಯಾಹ್ನ 1 ಗಂಟೆಗೆ ಸ್ಥಳದ ಮಹಜರು ಆರಂಭಿಸಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪವೇ ಸ್ಥಳವನ್ನು ಸಾಕ್ಷಿ ದೂರುದಾರ ಗುರುತಿಸಿದ್ದು, ಈ ಸ್ಥಳದಲ್ಲಿ ಭದ್ರತೆಯ ವ್ಯವಸ್ಥೆ ಮಾಡಲಾಗಿದೆ.ಹಿರಿಯ ಅಧಿಕಾರಿ ಜಿತೇಂದ್ರಕುಮಾರ್ ದಯಾಮ, ಸಿ.ಎ […]
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಆತ್ರಾಡಿ ವಿವೇಕಾನಂದ ಯೋಗ ಶಾಖೆ; ವಾರ್ಷಿಕೋತ್ಸವ ಕಾರ್ಯಕ್ರಮ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ ) ನೇತ್ರಾವತಿ ವಲಯ ಕರ್ನಾಟಕ. ವಿವೇಕಾನಂದ ಯೋಗ ಶಾಖೆ ಆತ್ರಾಡಿ ಇದರ ವಾರ್ಷಿಕೋತ್ಸವ ಕಾರ್ಯಕ್ರಮವು ಸವ್ಯಸಾಚಿ ಶಿಶು ಮಂದಿರದ ಸಭಾಂಗಣದಲ್ಲಿ ಪಾದೆಕಲ್ ವಿಷ್ಣು ಭಟ್ ರವರ ಅದ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿ ಯೋಗ ಗುರು ಶ್ರೀ ಸುದರ್ಶನ್ ರವರು ಶ್ರೀ ರಾಮಸ್ವಾಮಿ ಯವರಿಂದ 45 ವರ್ಷಗಳ ಹಿಂದೆ ಸ್ಥಾಪನೆ ಗೊಂಡ ಪತಂಜಲಿ ಯೋಗ ಸಂಸ್ಥೆಯು “ಸಂಸ್ಕಾರ ಸಂಘಟನೆ ಸೇವೆ ” ಎಂಬ ದ್ಯೇಯ ವಾಕ್ಯದಡಿಯಲ್ಲಿ ಮಾಡುತ್ತಿರುವ ಉಚಿತ […]
ಮಲ್ಪೆ; ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣಿಗೆ ಶರಣು

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೇಜಾರು ಸಮೀಪದ ಕೆಳಾರ್ಕಳಬೆಟ್ಟು ಎಂಬಲ್ಲಿ ಸಂಭವಿಸಿದೆ. ಕೆಳಾರ್ಕಳಬೆಟ್ಟು ನಿವಾಸಿ ಜಯಂತಿ ಎಸ್ ಅವರ ಮಗ ಸ್ವಸ್ತಿಕ್ (16) ಮೃತ ವಿದ್ಯಾರ್ಥಿ. ಸ್ವಸ್ತಿಕ್ ಉಡುಪಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಜುಲೈ 27ರಂದು ಜಯಂತಿ ಅವರು ತನ್ನ ಮಗಳ ಮೆಡಿಕಲ್ ಸರ್ಟಿಫಿಕಟ್ ತರಲು ನೇಜಾರಿಗೆ ಹೋಗಿ ವಾಪಾಸ್ಸು ಮನೆಗೆ ಬಂದು ನೋಡಿದಾಗ ಸ್ವಸ್ತಿಕ್ ಮನೆಯ ಹಾಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಬಗ್ಗೆ ಮಲ್ಪೆ […]
ಮೂಡುಬಿದಿರೆ:ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ-‘ಪ್ರೇರಣಾ ದಿವಸ್ 2025’

ಮೂಡುಬಿದಿರೆ: ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗದ ವತಿಯಿಂದ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ 2025ನೇ ಸಾಲಿನ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರದಾನ ಸಮಾರಂಭ-‘ಪ್ರೇರಣಾ ದಿವಸ್ 2025’ ನಡೆಯಿತು. ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಕರ್ನಾಟಕದ ರಾಜ್ಯಪಾಲ ಥಾವರ್ಚಾಂದ್ ಗೆಹ್ಲೋಟ್, ಶಿಕ್ಷಣ ಕ್ಷೇತ್ರಕ್ಕೆ ಉತ್ಕೃಷ್ಟ ಸೇವೆಯನ್ನು ನೀಡುತ್ತಾ ದೇಶದ ಏಳಿಗೆಗೆ ಕೊಡುಗೆ ನೀಡುತ್ತಿರುವ ಶಿಕ್ಷಕರೆಲ್ಲರೂ ಸದಾ ಸ್ಮರಣಿಯರು ಹಾಗೂ ಅನುಕರಣನೀಯರು. ಜ್ಞಾನ, ಸಂಸ್ಕಾರ ಹಾಗೂ ನೈತಿಕ ಮೌಲ್ಯವನ್ನು ನೀಡುವವರು […]