ಉಡುಪಿ:ಹವಾಮಾನ ಇಲಾಖೆ ಮುನ್ಸೂಚನೆಯುಂತೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಸಾಧ್ಯತೆ

ಉಡುಪಿ:ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಅಕ್ಟೋಬರ್ 2 ರವರೆಗೆ ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರದ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ. ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾಕ್ರಮವಾಗಿ ಸಾರ್ವಜನಿಕರು, ಪ್ರವಾಸಿಗರು ಹಾಗೂ ಮೀನುಗಾರರು ನದಿ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವಂತೆ ಸೂಚನೆ ನೀಡಿದೆ. ತುರ್ತು ಸೇವೆಗೆ ಶುಲ್ಕ ರಹಿತ 1077, […]

ಉಡುಪಿ:ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಘಟಕಗಳನ್ನು ಕೂಡಲೇ ಸ್ಥಾಪಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು. ಹೆಚ್ಚುವರಿ ಕಾಲಾವಕಾಶ ಕಲ್ಪಿಸುವುದಿಲ್ಲ. ನಿವೇಶನವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಟಿ.ಕೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ […]

ಉಡುಪಿ ಪತ್ರಕರ್ತರಿಗೆ ಹೃದಯ ಆರೋಗ್ಯ -ತುರ್ತು ಆರೈಕೆ ತರಬೇತಿ

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ(ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ(ಸಿಪಿಆರ್) ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಮಾತನಾಡಿ, ಯುವಜನತೆಯಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಒತ್ತಡವೇ ಮುಖ್ಯ […]

RBI ಉಪ ಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌‌ನ ನೂತನ ಉಪಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ಶಿರೀಶ್ ಚಂದ್ರ ಮುರ್ಮು ಅವರನ್ನು ನೇಮಕ ಮಾಡಲಾಗಿದೆ. ಸದ್ಯ ಆರ್‌ಬಿಐ ಉಪಗವರ್ನರ್ ಆಗಿರುವ ರಾಜೇಶ್ವರ್ ರಾವ್ ಅವರ ಅವಧಿ ಅ.8ರಂದು ಕೊನೆಗೊಳ್ಳಲಿದ್ದು, ಅದಾದ ಬಳಿಕ ಅ.9ರಿಂದ ನೂತನ ಉಪಗವರ್ನರ್ ಆಗಿ ಶಿರೀಶ್ ಚಂದ್ರ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆರ್‌ಬಿಐನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆರ್‌ಬಿಐ ನಾಲ್ಕು ಉಪಗವರ್ನರ್‌ಗಳನ್ನು ಹೊಂದಿದ್ದು, ಪ್ರತಿಯೊಬ್ಬರೂ ಹಣಕಾಸು ನೀತಿ, ಬ್ಯಾಂಕಿಂಗ್ ಮೇಲ್ವಿಚಾರಣೆ ಮತ್ತು ಹಣಕಾಸು ಮಾರುಕಟ್ಟೆಗಳ […]

ಉಡುಪಿ: ಹಿಂದಿ ಹೇರಿಕೆ ವಿರೋಧಿಸಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

ಉಡುಪಿ: ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ನಡೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ರಾಜಾಭಾಷಾ ಆಯೋಗ- ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ. ಇರುವುದು ನೆಲದ ಭಾಷೆಗಳು, […]