ಹೋಂ ವರ್ಕ್ ಮಾಡದಿದ್ದಕ್ಕೆ 7 ವರ್ಷದ ಬಾಲಕನಿಗೆ ತಲೆ ಕೆಳಗಾಗಿ ನೇತುಹಾಕಿ ಹಿಂಸೆ!

ಚಂಡೀಗಢ: ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅನ್ನೋ ಕಾರಣಕ್ಕೆ ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿ ನೇತು ಹಾಕಿ ಹಿಂಸೆ ನೀಡಿ ಕ್ರೌರ್ಯ ಮೆರೆದಿರುವ ಘಟನೆ ಹರಿಯಾಣದ ಪಾಣಿಪತ್ನ ಶ್ರೀಜನ್ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿ ಹೋಂ ವರ್ಕ್ ಮಾಡಿಲ್ಲ ಅಂತ ಶಿಕ್ಷಕಿಯೊಬ್ಬಳು ಆತನ ಕೈಕಾಲು ಕಟ್ಟಿ, ತಲೆಕೆಳಗಾಗಿಸಿ ನೇತುಹಾಕಿದ್ದಾಳೆ, ವಿದ್ಯಾರ್ಥಿಯನ್ನು ಚೆನ್ನಾಗಿ ಥಳಿಸಿದ್ದಾಳೆ. ಆಗಸ್ಟ್ 13ರಂದು ನಡೆದಿದ್ದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಶಾಲಾ ಆಡಳಿಯ ಮಂಡಳಿಗೆ ಈ ವಿಷಯ ತಿಳಿದಿದ್ದೂ ಮುಚ್ಚಿಟ್ಟಿದ್ದರು. ಆದರೆ […]
ವಾಣಿಜ್ಯ ವ್ಯವಸ್ಥೆಗೆ ಸಿದ್ದ ಜಾಗತಿಕ ಕಾರ್ಯಪಡೆ: ವಿದೇಶಾಂಗ ಸಚಿವ ಜೈ ಶಂಕರ್

ನ್ಯೂಯಾರ್ಕ್: ಜಗತ್ತಿಗೆ ಜಾಗತಿಕ ಕಾರ್ಯಪಡೆಯ ಅಗತ್ಯವಿದೆ ಮತ್ತು ಅನಿಶ್ಚಿತತೆಯ ನಡುವೆಯೂ ಹೊಸ ವಾಣಿಜ್ಯ ವ್ಯವಸ್ಥೆಯು ಜಾರಿಗೆ ಬರಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದರು.ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದ ನಡುವೆ ‘ಅಬ್ಸರ್ವರ್ ರಿಸರ್ಚ್ ಫೌಂಡೇಶನ್’ (ಒಆರ್ಎಫ್) ಸಭೆಯಲ್ಲಿ ಮಾತನಾಡಿದ ಅವರು, ‘ಅನಿಶ್ಚಿತತೆ ಮಧ್ಯೆಯೂ ವಾಣಿಜ್ಯ ವ್ಯಾಪಾರವು ತನ್ನ ಮಾರ್ಗವನ್ನು ತಾನೇ ಹುಡುಕಿಕೊಂಡು ಸಾಗುತ್ತದೆ’ ಎಂದು ಆಶಾವಾದ ವ್ಯಕ್ತಪಡಿಸಿದರು. ಭಾರತವು ವ್ಯಾಪಾರ ಮತ್ತು ಪಾಲುದಾರಿಕೆಯನ್ನು ವಿಸ್ತರಿಸುವ ಉದ್ದೇಶದೊಂದಿಗೆ ಲ್ಯಾಟಿನ್ ಅಮೆರಿಕ ಮತ್ತು ಕೆರೀಬಿಯಾದೊಂದಿಗೆ ವ್ಯಾಪಾರದಲ್ಲಿ ತೊಡಗಿದೆ ಎಂದು […]
ಉಡುಪಿ: ರಿತನ್ಯ ಎಸ್.ಆಚಾರ್ಯಗೆ ಸೂಪರ್ ಟ್ಯಾಲೆಂಟೆಡ್ ಕಿಡ್ ಬಿರುದು.

ಉಡುಪಿ: ಉಡುಪಿ ಜಿಲ್ಲೆಯ ಕಮಲಶಿಲೆ ಸುಧಾಕರ ಆಚಾರ್ಯ ಹಾಗೂ ಸುಚೇತಾ ದಂಪತಿಯ ಮಗಳು ರಿತನ್ಯ ಎಸ್. ಆಚಾರ್ಯ (1 ವರ್ಷ 4 ತಿಂಗಳು) ತನ್ನ ಅಪರೂಪದ ಪ್ರತಿಭೆಯಿಂದ ಇಂಟರ್ನೇಷನಲ್ ಬುಕ್ ಆಫ್ ರೆಕಾರ್ಡ್ಸ್ ವತಿಯಿಂದ ಸೂಪರ್ ಟ್ಯಾಲೆಂಟೆಡ್ ಕಿಡ್ ಎಂಬ ಬಿರುದನ್ನು ಪಡೆದು ‘ಒನ್ ಇನ್ ಎ ಮಿಲಿಯನ್’ ಗೌರವ ಪಡೆದಿದ್ದಾಳೆ. ರಿತನ್ಯ 21 ಪಕ್ಷಿಗಳು, 28 ಪ್ರಾಣಿಗಳು, 15 ದೇಹಭಾಗಗಳು, 20 ಹಣ್ಣುಗಳು, 10 ಜಲಚರ ಪ್ರಾಣಿಗಳು, 6 ಕೀಟಗಳು, 23 ತರಕಾರಿಗಳು, 65ಕ್ಕೂ ಹೆಚ್ಚು […]
ಉಡುಪಿ ಉಚ್ಚಿಲ ದಸರಾ: ಮುದ್ದು ಶಾರದೆಯರ ಕಲರವ

ಪಡುಬಿದ್ರಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ನಾಲ್ಕನೇ ವರ್ಷದ ಉಡುಪಿ ಉಚ್ಚಿಲ ದಸರಾ 2025ರ 5ನೇ ದಿನವಾದ ಶುಕ್ರವಾರ ಮಕ್ಕಳಿಗಾಗಿ ನಡೆದ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ ‘ಮುದ್ದು ಶಾರದೆ’ಯರ ಕಲರವ ಎದ್ದು ಕಾಣುತ್ತಿತ್ತು.3 ವರ್ಷದಿಂದ 9 ವರ್ಷ ವಯಸ್ಸಿನ ಮಕ್ಕಳಿಗೆ ಆಯೋಜಿಸಿದ್ದ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ನೂರಾರು ಸ್ಪರ್ಧಿಗಳು ಭಾಗವಹಿಸಿದ್ದರು. ಮುದ್ದು ಶಾರದೆಯರನ್ನು ಕಣ್ತುಂಬಿಕೊಳ್ಳಲು ಹೆತ್ತವರ ಜೊತೆಗೆ ಸಾರ್ವಜನಿಕರು ಕಾತುರರಾಗಿದ್ದರು. ಅನ್ವಿ ನಾಯಕ್ ಬ್ರಹ್ಮಾವರ ಪ್ರಥಮ, […]
ಕರೂರಿನಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ನಟ ವಿಜಯ್.

ನವದೆಹಲಿ: ತಮಿಳುನಾಡಿನ ಕರೂರಿನಲ್ಲಿ ನಿನ್ನೆ ಸಂಜೆ ನಡೆದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಲಿಯಾದ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಮುಖ್ಯಸ್ಥರು ತಿಳಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿನ ಪೋಸ್ಟ್ನಲ್ಲಿ, ‘ತಾನು ದುಃಖದಿಂದ ಮುಳುಗಿದ್ದೇನೆ. ನನ್ನ ಹೃದಯ ಅನುಭವಿಸುತ್ತಿರುವ ನೋವನ್ನು ವ್ಯಕ್ತಪಡಿಸಲು ಪದಗಳೇ ಸಾಲುತ್ತಿಲ್ಲ. ನನ್ನ ಕಣ್ಣುಗಳು […]