13 ವರ್ಷಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಯುವಕ ಪತ್ತೆ!

ಉಡುಪಿ: 13 ವರ್ಷಗಳಿಂದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಮನೆಯವರಿಗೆ ಹೆದರಿ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳದ ಯುವಕನೋರ್ವನನ್ನು ಕೊನೆಗೂ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. 2012ರಲ್ಲಿ ಕಾಣೆಯಾಗಿದ್ದ ಅನಂತ ಕೃಷ್ಣ ಪ್ರಭು (29) ಅವರನ್ನು ಇದೀಗ ಬೆಂಗಳೂರು ನಗರದಲ್ಲಿ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.ಇಲ್ಲಿನ ನಿವಾಸಿ ಪ್ರಭಾಕರ ಪ್ರಭು ಅವರ ಪುತ್ರ ಅನಂತ ಕೃಷ್ಣ ಪ್ರಭು (ಆಗ 16 ವರ್ಷ) ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು, ಮುಂಡ್ಕೂರು ಅಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. 2012 ಡಿಸೆಂಬರ್ ತಿಂಗಳಲ್ಲಿ ದೇವಸ್ಥಾನಕ್ಕೆ […]
‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಬೆಂಗಳೂರು: ಸರ್ಕಾರದ ನಿಯಮ ಉಲ್ಲಂಘನೆ ಆರೋಪದ ಮೇಲೆ ಸ್ಥಗಿತಗೊಂಡಿದ್ದ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ ವಹಿಸಿದ್ದು, ತಪ್ಪು ಸರಿಪಡಿಸಿಕೊಳ್ಳಲು ಜಾಲಿವುಡ್ ಸ್ಟುಡಿಯೋಸ್ಗೆ ಮತ್ತೊಂದು ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಮನೆಯನ್ನು ಸರ್ಕಾರದಿಂದ ಸೀಜ್ ಮಾಡಲಾಗಿತ್ತು. ಇದೀಗ […]
ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: ನೂತನ ಕಟ್ಟಡ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ.

ಉಡುಪಿ: ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೆಳ್ಳಿಬೆಡಗು ಸಂಭ್ರಮಾಚರಣೆಯಲ್ಲಿದ್ದು, ಪರ್ಕಳ ರಾ.ಹೆ. ಪಾರ್ಶ್ವದಲ್ಲಿ ನಿರ್ಮಿಸಿದ ‘ಶ್ರೀ ದುರ್ಗ ಸಹಕಾರ ಸೌಧ’ ನೂತನ ಕಟ್ಟಡ ಉದ್ಘಾಟನೆಯು ಅ.12ರಂದು ನಡೆಯಲಿದೆ. ನೂತನ ಕಟ್ಟಡದ ಉದ್ಘಾಟನೆ ಆಮಂತ್ರಣ ಪತ್ರಿಕೆಯನ್ನು ಕಾರ್ಕಳ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ರವೀಂದ್ರ ಪ್ರಭು ಕಡಾರಿ ಬಿಡುಗಡೆಗೊಳಿಸಿದರು. ಸೊಸೈಟಿ ಅಧ್ಯಕ್ಷ ಅಶೋಕ್ ಕಾಮತ್ ಕೊಡಂಗೆ, ಉಪಾಧ್ಯಕ್ಷ ಪಾಂಡುರಂಗ ಕಾಮತ್, ಸಿಇಒ ನಿತ್ಯಾನಂದ ನಾಯಕ್ ನರಸಿಂಗೆ, ನಿರ್ದೇಶಕರಾದ ರಾಮಕೃಷ್ಣ ನಾಯಕ್ ಪರ್ಕಳ, ಸದಾನಂದ […]
ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ‘ಮಹರ್ಷಿ ವಾಲ್ಮೀಕಿ ಸಮ್ಮಾನ್’ ಪ್ರಶಸ್ತಿ ಪ್ರದಾನ.

ಉಡುಪಿ: ವಾಲ್ಮೀಕಿ ನಾಡುಕಂಡ ಶ್ರೇಷ್ಠ ಸಂತ. ಬದುಕಿನಲ್ಲಿ ಪರಿವರ್ತನೆ ಮೂಲಕ ವ್ಯಕ್ತಿ ಎಷ್ಟು ಉನ್ನತ ಸ್ಥಾನಕ್ಕೆ ತಲುಪಬಹುದು ಎಂಬುದಕ್ಕೆ ವಾಲ್ಮೀಕಿ ಮಾದರಿ. ಅವರ ಆದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಹೇಳಿದರು. ಮಹರ್ಷಿ ವಾಲ್ಮೀಕಿ ಸಂದ ಆಶ್ರಯದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘಟಕ, ಹಿರಿಯ ಛಾಯಾಚಿತ್ರ ಪತ್ರಕರ್ತ ಜನಾರ್ದನ್ ಕೊಡವೂರು ಅವರಿಗೆ ಮಹರ್ಷಿ ವಾಲ್ಮೀಕಿ ಸಮ್ಮಾನ್ 2025 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸತಿ […]
ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಬಿಲ್ಲಿಂಗ್ ಹಾಗೂ ರಿಸೆಪ್ಷನಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.ಆಸಕ್ತಿ ಇರುವವರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಗೆ ಕಳುಹಿಸಿ. [email protected] ಕರೆ ಮಾಡಿ:+91 8453391650