ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘ: 11ನೇ ವಾರ್ಷಿಕ ಮಹಾಸಭೆ

ಉಡುಪಿ: ಛತ್ರಪತಿ ಶಿವಾಜಿ ವಿವಿಧೋದ್ದೇಶ ಸಹಕಾರ ಸಂಘದ 11ನೇ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ದಿನೇಶ ಸಿ ನಾಯ್ಕ್ ಇವರ ಅಧ್ಯಕ್ಷತೆಯಲ್ಲಿ ಬನ್ನಂಜೆ ಶ್ರೀ ನಾರಾಯಣಗುರು ಮಂದಿರದ ಶಿವಗಿರಿ ಸಭಾಗೃಹದಲ್ಲಿ ಜರುಗಿತು. ಸಂಘವು 11 ನೇ ವರ್ಷಕ್ಕೆ ಪಾದಾರ್ಪಣೆಗೊಂಡಿದ್ದು 3,708 ಸದಸ್ಯರನ್ನು ಹೊಂದಿದ್ದು ಸದಸ್ಯರಿಗೆ ವಿವಿಧ ರೀತಿಯ ಸಾಲಗಳನ್ನು ನೀಡಿ ಶೇ.97.00 ಸಾಲ ವಸೂಲಾತಿ ನಡೆಸಿದೆ ಸಂಘವು ಪ್ರಸಕ್ತ ಸಾಲಿನಲ್ಲಿ ಒಟ್ಟು 45 ಕೋಟಿ ವ್ಯವಹಾರ ನಡೆದಿದ್ದು ಸಂಘವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಮುಂದಿನ ವರ್ಷಗಳಲ್ಲಿ ಐದು […]
ಕಾರ್ಕಳ: ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ: ಅದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಕಾರ್ಕಳ–ಹೆಬ್ರಿ ರಸ್ತೆಯ ವರಂಗದ ಬಳಿ ಇಂದು ಬೆಳಿಗ್ಗೆ ಸ್ಲೀಪರ್ ಬಸ್ ಹಾಗೂ ಕೆಂಪು ಕಲ್ಲು ಹೊತ್ತ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಸುರಕ್ಷಿತರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ, ಸಂಚಾರ ವ್ಯವಸ್ಥೆ ಸುಗಮಗೊಳಿಸಿದ್ದಾರೆ.
ಕ್ರೈಸ್ಟ್ ಕಿಂಗ್: ರಾಷ್ಟ್ರೀಯ ಹಿಂದಿ ದಿನಾಚರಣೆ

ಕಾರ್ಕಳ:ಇಲ್ಲಿನ ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ. ದೇವಕಿ ಪ್ರಸನ್ನ ಜಿ ಎಸ್ ಅವರು ಮುಖ್ಯ ಅತಿಥಿಗಳಾಗಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು “ಎಲ್ಲಾ ಭಾಷೆಗಳಿಗೆ ತಮ್ಮದೇ ಆದ ಮಹತ್ವವಿದೆ. ಭಾಷೆಗಳಲ್ಲಿ ಪರಿಪೂರ್ಣತೆಯಿದ್ದರೆ ನಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಹಿಂದಿ ಭಾಷೆಯಲ್ಲಿ ಪಾಂಡಿತ್ಯವಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು” ಎಂದು ಹೇಳಿ ಹಿಂದಿ ಭಾಷೆಯ ವ್ಯಾಕರಣ ವಿಶೇಷತೆಯ ಬಗ್ಗೆ ತಿಳಿ ಹೇಳಿದರು. ಕಾರ್ಯಕ್ರಮದ ಅಧ್ಯ್ಯಕ್ಷತೆ ವಹಿಸಿದ್ದ ಸಂಸ್ಥೆಯ […]
ಉಡುಪಿ:ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ನಡೆಯಲಿರುವ ಸಾಂಸ್ಕೃತಿಕ ವೈಭವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಚಾಲನೆ ನೀಡಿದ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾತನಾಡಿ, ನಾಟ್ಯ-ಗಾನ ಪ್ರಿಯೆಯಾದ ದುರ್ಗಾ ಆದಿಶಕ್ತಿ ದೇವಿ ಕ್ಷೇತ್ರದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಯುವ ಕಲಾವಿದರು ತಮ್ಮ ಕಲಾ ಯಶಸ್ಸಿನ ಮೆಟ್ಟಿಲನ್ನು ಏರಿರುವುದು ಉಲ್ಲೇಖನೀಯ. ಇಲ್ಲಿ ಕಲಾವಿದರಿಂದ ಸಮರ್ಪಿಸಲ್ಪಡುವ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮಾತೆ ಸಂತುಷ್ಟಳಾಗುವುದು ಅಷ್ಟೇ ಸತ್ಯ. ನವರಾತ್ರಿ ಪರ್ವಕಾಲದಲ್ಲಿ […]
ಮಹಾರಾಷ್ಟ್ರ: ವಿದ್ಯಾರ್ಥಿನಿ ಮೇಲೆ ಮತ್ತೆ ಮತ್ತೆ ಅತ್ಯಾಚಾರ ಎಸಗಿದ ಶಿಕ್ಷಕ; ಬಾಲಕಿ ಮೃತ್ಯು.

ಯವತ್ಮಾಲ್: 17 ವರ್ಷದ ವಿದ್ಯಾರ್ಥಿನಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಟ್ಯೂಷನ್ ಶಿಕ್ಷಕನನ್ನು ಬಂಧಿಸಿರು ಘಟನೆ ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ನಡೆದಿದೆ. ಗರ್ಭಪಾತ ಮಾಡಿಸುವ ವೇಳೆ ಸಂತ್ರಸ್ತೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಒಂಬತ್ತು ತಿಂಗಳ ಕಾಲ ವಿದ್ಯಾರ್ಥಿನಿಯನ್ನು ಲೈಂಗಿಕವಾಗಿ ಶೋಷಿಸಿದ ಮತ್ತು ಗರ್ಭಿಣಿಯನ್ನಾಗಿಸಿದ್ದ 27 ವರ್ಷದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಪೊಲೀಸರ ದೂರಿನ ಪ್ರಕಾರ, ಟ್ಯೂಷನ್ ನೀಡಿದ್ದ ಆರೋಪಿ, ವಿದ್ಯಾರ್ಥಿನಿಯ ಸ್ನೇಹ ಬೆಳೆಸಿಕೊಂಡು ಕಳೆದ ಒಂಬತ್ತು ತಿಂಗಳಲ್ಲಿ ಹಲವು […]