ಮೂಡುಬಿದಿರೆ:ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾರ್ಯಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ಗಳು ಸಮಾಜದ ಆರೋಗ್ಯದ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದುಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ ಪರಿಶೀಲನೆ, ಸಂಶೋಧನೆ, ಲಸಿಕಾ ಅಭಿವೃದ್ಧಿ ಮತ್ತು ಕ್ಲಿನಿಕಲ್ ರಿಸರ್ಚ್ನಲ್ಲಿ ಫಾರ್ಮಾಸಿಸ್ಟ್ಗಳ ಬೇಡಿಕೆ ಹೆಚ್ಚುತ್ತಿದೆ. ಇಂದಿನ ಸ್ಪರ್ಧಾತ್ಮಕ ಪರಿಸರದಲ್ಲಿ ದೇಶದ ಆರೋಗ್ಯ […]

ಅ.11,12 ರಂದು ಉಡುಪಿಯಲ್ಲಿ ಕೆನರಾ ರಿಟೈಲ್ ಮೇಳ: ದೀಪಾವಳಿಗೆ ಕೆನರಾ ಬ್ಯಾಂಕ್ ನೀಡ್ತಿದೆ ಈ ಭರ್ಜರಿ ಆಫರ್

ಉಡುಪಿ:ದೀಪಾವಳಿ ಹಬ್ಬದ ಪ್ರಯುಕ್ತ ಏರ್ಪಡಿಸುತ್ತಿರುವಕೆನರಾ ರಿಟೈಲ್ ಮೇಳ – 2025 ಅ. 11 & 12 ರಂದು, ಬೆಳಿಗ್ಗೆ 9.30 ರಿಂದ ಸಂಜೆ 6.30 ರವರೆಗೆ ಎಮ್.ಜಿ.ಎಮ್. ಕಾಲೇಜು ಗ್ರೌಂಡ್, ಉಡುಪಿ ಇಲ್ಲಿ ನಡೆಯಲಿರುವುದು. ಸೌಲಭ್ಯಗಳು: ▪️ಯಾವುದೇ ಪ್ರವೇಶ ಶುಲ್ಕ ಇಲ್ಲ.▪️ಯಾವುದೇ ಪೂರ್ವಪಾಪತಿ ಪೆನಾಲ್ಟಿ ಇಲ್ಲ.▪️ ಆಕರ್ಷಕ ದರದಲ್ಲಿ ಸುಲಭ ಸಾಲ.▪️ ವಾಹನ ಸಾಲಕ್ಕೆ ಕೇವಲ 10% ಪಾವತಿಸಿ, ಉಳಿದ ಹಣವನ್ನು ಮಾಸಿಕ 84 ಕಂತುಗಳಲ್ಲಿ ಮರುಪಾವತಿಸಿ.▪️ಸಂಸ್ಕರಣಾ ಶುಲ್ಕ ಇಲ್ಲ.▪️ಯಾವುದೇ ಜಾಮೀನು ಇಲ್ಲ.▪️ಆದಾಯ ತೆರಿಗೆ ವಿನಾಯಿತಿ.▪️ಗೃಹ ಸಾಲಕ್ಕೆ […]

ವಿಷ ಸೇವಿಸಿ ಯುವ ದಂಪತಿ ಆತ್ಮಹತ್ಯೆ.

ಕಾಸರಗೋಡು: ಮಂಜೇಶ್ವರ ಠಾಣಾ ವ್ಯಾಪ್ತಿಯ ಕಡಂಬಾರ್ ಎಂಬಲ್ಲಿ ಯುವ ದಂಪತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟವರು ಕಡಂಬಾರಿನ ಅಜಿತ್ ( 35) ಮತ್ತು ಪತ್ನಿ ಶ್ವೇತಾ ( 27). ಅಜಿತ್ ಪೈಂಟಿಂಗ್ ಕಾರ್ಮಿಕ ರಾಗಿದ್ದು , ಶ್ವೇತಾ ವರ್ಕಾಡಿ ಬೇಕರಿ ಜಂಕ್ಷನ್ ನ ಖಾಸಗಿ ಶಾಲಾ ಶಿಕ್ಷಕಿ ಯಾಗಿದ್ದರು. ಸೋಮವಾರ ಘಟನೆ ನಡೆದಿದ್ದು, ಗಂಭೀರ ಸ್ಥಿತಿಯಲ್ಲಿ ಇದ್ದ ಇಬ್ಬರನ್ನು ದೇರಳ ಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಜಿತ್ ರಾತ್ರಿ ಹಾಗೂ ಶ್ವೇತಾ ಇಂದು ಬೆಳಿಗ್ಗೆ […]

ಮಲ್ಪೆ ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ 70 ಟನ್ ಬೊಲ್ಲಾರ್ಡ್ ಟಗ್ (ಹಡಗು) ಲೋಕಾರ್ಪಣೆ

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌ನಿಂದ ಅದಾನಿ ಪೋರ್ಟ್ಸ್ ಮತ್ತು ಎಸ್‌ಇಝೆಡ್‌ನ ಅಂಗ ಸಂಸ್ಥೆಯಾದ ಓಷಿಯನ್ ಸ್ಪಾರ್ಕಲ್ ಲಿಮಿಟೆಡ್‌ಗಾಗಿ ನಿರ್ಮಿಸಲಾದ 70 ಟನ್ ಬೊಲ್ಲಾರ್ಡ್ ಫುಲ್ ಟಗ್(ಹಡಗು) ಮಲ್ಪೆಯ ಶಿಪ್ ಬಿಲ್ಡಿಂಗ್ ಯಾರ್ಡ್‌ನಲ್ಲಿ ಲೋಕಾರ್ಪಣೆಗೊಂಡಿತು. 60ಕೋಟಿ ರೂ. ವೆಚ್ಚದ ಈ ಹಡಗು 33 ಮೀಟರ್ ಉದ್ದ, 12.2 ಮೀಟರ್ ಅಗಲ ಮತ್ತು 4.2 ಮೀಟರ್ ಆಳ ಹೊಂದಿದ್ದು, ಎರಡು 1838 ಕಿಲೋವಾಟ್ ಸಾಮರ್ಥ್ಯದ ಎಂಜಿನ್‌ಗಳನ್ನು ಮತ್ತು 2.7 ಮೀಟರ್ ಪ್ರೊಪೆಲರ್‌ಗಳು ಹಾಗೂ ಡೆಕ್ ಉಪಕರಣಗಳನ್ನು ಹೊಂದಿವೆ.ಹಡಗನ್ನು ಉದ್ಘಾಟಿಸಿ […]

ಮಂಗಳೂರು:‘ಕರ್ನಾಟಕೀ ಮತ್ತು ಹಿಂದೂಸ್ತಾನೀ ಜುಗಲ್ ಬಂಧಿ’

ಮಂಗಳೂರು:ಮಂಗಳೂರಿನ ಸಂಗೀತ ಭಾರತಿ ಫೌಂಡೇಶನ್ (ರಿ)ಸಂಸ್ಥೆಯು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಪ್ರಾಯೋಜಕತ್ವದಲ್ಲಿ ‘ ‘ವಿಹಂಗಮ’’ ಎಂಬ ‘ ‘ಕರ್ನಾಟಕೀಮತ್ತು ಹಿಂದೂಸ್ತಾನೀ ಜುಗಲ್ ಬಂಧಿ’’ ಕಾರ್ಯಕ್ರಮವುಅ.5ರಂದು ಮಂಗಳೂರಿನ ಪುರಭವನದಲ್ಲಿ ಸಂಜೆ5.30 ಕ್ಕೆ ನಡೆಯಿತು. ‘ ‘ವಿಹಂಗಮ’’ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಇಬ್ಬರು ಕಲಾವಿದರಾದ ವಿದ್ವಾನ್ ಡಾ.ಮೈಸೂರು ಮಂಜುನಾಥ್ ಮತ್ತು ಉಸ್ತಾದ್ ರಫೀಕ್ ಖಾನ್ ಇವರಿಂದ ‘ವಯೋಲಿನ್-ಸಿತಾರ್ ಜುಗಲ್ ಬಂಧಿ’ ನಡೆಯಿತು. ಈ ಕಾರ್ಯಕ್ರಮಕ್ಕೆ ಮೃದಂಗದಲ್ಲಿ ಚೆನ್ನೈ ನ ವಿದ್ವಾನ್ ತಿರುವಾರೂರು ಭಕ್ತವತ್ಸಲಂ ಮತ್ತು ತಬ್ಲಾದಲ್ಲಿ ಮುಂಬೈನ ಶ್ರೀ ಓಜಸ್ ಅಧಿಯಾ […]