ಉಡುಪಿ: ಸೆಪ್ಟೆಂಬರ್ 4ರಂದು ‘ಉಚಿತ ಆರೋಗ್ಯ ಮೇಳ’

ಉಡುಪಿ: ಜಯಂಟ್ಸ್ ಗ್ರೂಪ್ ಆಫ್, ಉಡುಪಿ, ವಿಶ್ವಭಾರತಿ ಅಸೋಸಿಯೇಷನ್ ಚಿಟ್ಪಾಡಿ, ವಿಶ್ವಭಾರತಿ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ಬೀಡಿನಗುಡ್ಡೆ, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸಿ.ಎಸ್.ಐ ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ, ಉಡುಪಿ ಇವರು ಜಂಟಿಯಾಗಿ ಆಯೋಜಿಸಿರುವ ಉಚಿತ ಆರೋಗ್ಯ ಮೇಳವು ಸೆಪ್ಟೆಂಬರ್ 4ರಂದು (ಗುರುವಾರ) ಸ್ಥಳ: ಶಾರದಾಂಬ ದೇವಸ್ಥಾನ ವಠಾರ ಚಿಟ್ಪಾಡಿ ಉಡುಪಿ, ಸಮಯ: ಬೆಳಿಗ್ಗೆ 9.೦೦ ರಿಂದ ಮಧ್ಯಾಹ್ನ 1.೦೦ಗಂಟೆಯ ವರೆಗೆ ನಡೆಯಲಿದೆ. ಈ ಶಿಬಿರದಲ್ಲಿ ಸ್ತ್ರೀ ರೋಗ, ನೇತ್ರ, ಕೀಲು ಮತ್ತು ಎಲುಬು, […]

ಕುಂದಾಪುರ: ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ ಸುಲಿಗೆ: ಮುಸ್ಲಿಂ ಮಹಿಳೆ ಸಹಿತ ಆರು ಮಂದಿಯ ಬಂಧನ

ಉಡುಪಿ: ವ್ಯಕ್ತಿಯೊಬ್ಬನನ್ನು ಹನಿ ಟ್ರ್ಯಾಪ್ ಖೆಡ್ಡಾಕ್ಕೆ ಬೀಳಿಸಿ ಆತನಿಗೆ ಹಲ್ಲೆಗೈದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಸಂದೀಪ್ ಕುಮಾರ್ ಎಂಬವರು ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌‌. ಬಂಧಿತರನ್ನು ಬೈಂದೂರು ನಾವುಂದ ಗ್ರಾಮದ ಸವದ್‌ ( 28), ಕುಂದಾಪುರ ಗುಲ್ವಾಡಿ ಗ್ರಾಮದ ಸೈಪುಲ್ಲಾ ( 38), ಕುಂದಾಪುರ ಹಂಗಳೂರು ಗ್ರಾಮದ ಮೊಹಮ್ಮದ್‌ ನಾಸೀರ್‌ ಶರೀಫ್‌ ( 36), ಕುಂದಾಪುರ ಕುಂಭಾಶಿ ಗ್ರಾಮದ ಅಬ್ದುಲ್‌ ಸತ್ತಾರ್‌ ( […]

ಕುಂಜಾರುಗಿರಿ: ಅವಳಿ ಕರುವಿಗೆ ಜನ್ಮ‌ ನೀಡಿದ ಹಸು

ಉಡುಪಿ: ಹಸುವೊಂದು ಅವಳಿ ಕರುಗಳಿಗೆ ಜನ್ಮ ನೀಡಿದ ಅಪರೂಪದ ಘಟನೆ ಕುಂಜಾರುಗಿರಿಯಲ್ಲಿ‌ ನಡೆದಿದೆ.ಕುಂಜಾರುಗಿರಿಯ ಪಾಜೈಯ ಕೃಷಿಕ ಹಾಗೂ‌ ಬಾಣಸಿಗ ಬಾಲಕೃಷ್ಣ ಭಟ್ ಅವರ ಮನೆಯ ದನವು ಅವಳಿ ಕರುಗಳಿಗೆ ಜನ್ಮನೀಡಿದೆ. ಒಂದು ಹೆಣ್ಣು ಹಾಗೂ ಒಂದು ಗಂಡು ಕರು ಹಾಕಿದ್ದು, ಎರಡು‌ ಕರುಗಳು‌ ಆರೋಗ್ಯವಂತಾಗಿವೆ. ಈ ಕರುಗಳನ್ನು ನೋಡಲು ಸುತ್ತಮುತ್ತಲಿನ ಜನರು ಆಗಮಿಸುತ್ತಿದ್ದಾರೆ.

ವಾಹನ ನೀಡಲು ನಿರಾಕರಿಸಿದ ಆಸ್ಪತ್ರೆ, ಮಂಚದ ಮೇಲೆಯೇ ಶವ ಹೊತೊಯ್ದರು; ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್!

ಗರಿಯಾಬಂದ್‌: ಆಸ್ಪತ್ರೆಯವರು ವಾಹನ ನೀಡಲು ನಿರಾಕರಿಸಿದ್ದರಿಂದ ಮೃತದೇಹವನ್ನು ಮಂಚದ ಮೇಲೆಯೇ ಹೊತ್ತೊಯ್ದಿರುವ ಘಟನೆ ಛತ್ತೀಸಗಢದ ಗರಿಯಾಬಂದ್‌ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಯ ಅಮ್ಲಿಪಡರ್‌ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಚ್ಚಾಬಾಯಿ ಪಟೇಲ್‌ ಎಂಬ 60 ವರ್ಷದ ವೃದ್ಧೆಯು ಸೋಮವಾರ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ವಾಹನವನ್ನು ಕಳುಹಿಸುವಂತೆ ಮೃತರ ಕುಟುಂಬಸ್ಥರು ಕೇಳಿಕೊಂಡಿದ್ದಾರೆ. ಆದರೆ, ಇದಕ್ಕೆ ಆಸ್ಪತ್ರೆಯವರು ನಿರಾಕರಿಸಿದ್ದಾರೆ. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಇರಿಸಿದ್ದ ಆಸ್ಪತ್ರೆಯ ಮಂಚವನ್ನೇ 2.5 ಕಿ.ಮೀ. ದೂರ ಹೆಗಲ ಮೇಲೆ ಹೊತ್ತು ಸಾಗಿದ್ದಾರೆ. ಈ ವಿಡಿಯೊ […]

2024-25ನೇ ಸಾಲಿನಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್’ಗೆ 21.40 ಕೋಟಿ ರೂ. ಲಾಭ: ಯಶ್‌ಪಾಲ್ ಎ. ಸುವರ್ಣ

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2024-25ನೇ ಸಾಲಿನಲ್ಲಿ ರೂ. 1063 ಕೋಟಿ ವ್ಯವಹಾರ ನಡೆಸಿ ರೂ. 21.40 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳನ್ನು ಹೊಂದಿದ್ದು 50,000 ಗ್ರಾಹಕರ ಮೂಲಕ ವ್ಯವಹಾರ […]