ಉಡುಪಿ: ಅಪರಿಚಿತ ವಾಹನ ಡಿಕ್ಕಿ; ಯುವಕ ಮೃತ್ಯು

ಉಡುಪಿ: ಸ್ಕೂಟರ್ ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಸವಾರನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪುವಿನಲ್ಲಿ ನಡೆದಿದೆ. ಸ್ಕೂಟರ್ ಗೆ ಡಿಕ್ಕಿ ಹೊಡೆದ ಚಾಲಕ ವಾಹನವನ್ನು ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದಾನೆ.ಮೃತ ಯುವಕನನ್ನು ಸಂತೆಕಟ್ಟೆಯ ನಿವಾಸಿ ಅನೂಶ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಅನೂಶ್ ಭಂಡಾರಿ ಸೋಮವಾರ ರಾತ್ರಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಬೇರೆ ವಾಹನಗಳು ದೇಹದ ಮೇಲೆ ಹರಿದಿರುವ […]
ಹಿರಿಯಡ್ಕ: ಅನಾರೋಗ್ಯದಿಂದ ಯುವಕ ನಿಧನ

ಉಡುಪಿ: ಹಿರಿಯಡ್ಕ ನಿವಾಸಿ ನಿಖಿಲ್ ದೇವಾಡಿಗ( 26) ಇವರು ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಇವರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಬೆಂಗಳೂರು: 11 ಬಾರಿ ಪತ್ನಿಯನ್ನು ಇರಿದು ಕೊಂದ ಪತಿರಾಯ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಯಲ್ಲಿ ನಡು ರಸ್ತೆಯಲ್ಲಿ ಪುತ್ರಿಯ ಎದುರೇ 2ನೇ ಪತ್ನಿಗೆ ಚಾಕುವಿನಿಂದ ಹಿರಿದು ಪತಿಯೇ ಬರ್ಬರವಾಗಿ ಹತ್ಯೆಗೈದಿದ್ದಾನೆ. ಕೆಬ್ಬೆಹಳ್ಳ ನಿವಾಸಿ ರೇಖಾ(32) ಹತ್ಯೆಯಾದ ಮಹಿಳೆ. ಕೃತ್ಯ ಎಸಗಿದ ಆಕೆಯ ಪತಿ ಲೋಹಿತಾಶ್ವ(35) ಎಂಬಾತನ ಪತ್ತೆ ಕಾರ್ಯ ನಡೆಯುತ್ತಿದ್ದು, ಆರೋಪಿ ಸೋಮವಾರ ಬೆಳಗ್ಗೆ 9 ಗಂಟೆಗೆ ಸುಂಕದಕಟ್ಟೆಯ ಬಸ್ ನಿಲ್ದಾಣದಲ್ಲಿ ಹತ್ಯೆಗೈದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ರೇಖಾಗೆ ಈಗಾಗಲೇ ಮದುವೆಯಾಗಿದ್ದು, ಕೌಟುಂಬಿಕ ಕಾರಣಕ್ಕೆ ಪತಿಯಿಂದ ವಿಚ್ಛೇಧನ ಪಡೆದುಕೊಂಡಿದ್ದರು. ಇಬ್ಬರು ಹೆಣ್ಣು […]
ಹಾಸ್ಟೆಲ್’ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!

ಬೆಳಗಾವಿ: 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಅಂಬೇಡ್ಕರ್ ಹಾಸ್ಟೆಲ್’ನಲ್ಲಿ ನಡೆದಿದೆ. ಮೃತರನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ. ನಿನ್ನೆ ಬೆಳಿಗ್ಗೆ ಟಿಫನ್ ತೆಗೆದುಕೊಂಡು ರೂಮ್ ಗೆ ಹೋಗಿದ್ದ ಸುಮಿತ್ರಾ ಎಷ್ಟು ಹೊತ್ತಾದರೂ ಹೊರಗೆ ಬಾರದರೆ ಇದ್ದಿದ್ದರಿಂದ ಆತಂಕಗೊಂಡ ಸಹಪಾಠಿಗಳು ವಾರ್ಡನ್ ಗೆ ವಿಷಯ ತಿಳಿಸಿದ್ದಾರೆ. ನಂತರ ವಿದ್ಯಾರ್ಥಿನಿ ಸುಮಿತ್ರಾ ತಂದೆ, ಸಂಬಂಧಿಕರ ಸಮ್ಮುಖದಲ್ಲಿ ಹಾಸ್ಟೆಲ್ ರೂಮ್ ಬಾಗಿಲು ಹೊಡೆದು ನೋಡಿದಾಗ ಮಗಳು ನೇಣು […]
ಕುಂದಾಪುರದ ನಿಶಾಲಿ’ಗೆ ಮಿಸ್ ಇಂಡಿಯಾ–ಪ್ರೈಡ್ ಆಫ್ ಇಂಡಿಯಾ 2025 ಕಿರೀಟ.

ಉಡುಪಿ: ದೆಹಲಿಯ ಪ್ರತಿಷ್ಠಿತ DK Pageant ಸಂಸ್ಥೆಯವರು ಆಯೋಜಿಸುವ “ಪ್ರೈಡ್ ಆಫ್ ಇಂಡಿಯಾ- ಮಿಸ್ ಇಂಡಿಯಾ 2025” ಕಿರೀಟವು ನಿಶಾಲಿ ಮುಡಿಗೇರಿಸಿಕೊಂಡಿದ್ದಾರೆ. ದೆಹಲಿಯ ರ್ಯಾಡಿಸನ್ ಬ್ಲೂ ಹೋಟೆಲಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ಬಂದಿದ್ದ 44 ಸ್ಪರ್ಧಿಗಳನ್ನು ಎದುರಿಸಿ, ನಿಶಾಲಿ ಈ ಪ್ರತಿಷ್ಠಿತ ಟೈಟಲ್ಗೆ ಕೊರಳೊಡ್ಡುವುದರ ಮೂಲಕ ಈ ಸಾಧನೆ ಮಾಡಿರುತ್ತಾರೆ. ಇವರು ಮಂಗಳೂರಿನ ಸೈಂಟ್ ಅಲೋಷಿಯಸ್ ಕಾಲೇಜಿನಲ್ಲಿ ಎಂ.ಎ ಜರ್ನಲಿಸಮ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಬೆಂಗಳೂರಿನ ಶ್ರೀ ನೀಧಿ […]