ತುಳು ಸಂಸ್ಕೃತಿಯನ್ನು ಮಕ್ಕಳಿಗೆ ತಿಳಿಸುವ ಕಾರ್ಯವಾಗಬೇಕು- ಪೂರ್ಣಿಮಾ

ಉಡುಪಿ: ಉಡುಪಿ ತುಳುಕೂಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಮತ್ತು ತುಳುನಾಡ ಧ್ವನಿ ತುಳು ಅಂತರ್ಜಾಲ ಪತ್ರಿಕೆಯ ವತಿಯಿಂದ ಉಡುಪಿಯ ಜಗನ್ನಾಥ ಸಭಾಭವನದಲ್ಲಿ ‘ಮದರೆಂಗಿದ ರಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉಡುಪಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು, ನಮ್ಮ ಹಿರಿಯರು ಆಚರಿಸಿಕೊಂಡು ಬರುತ್ತಿದ್ದ ತುಳು ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ತಿಳಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಾಗಿದೆ ಎಂದರು. ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ತುಳು ಸಂಸ್ಕೃತಿಯನ್ನು […]

ಉಡುಪಿ: ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ, ಕುಂಜಾಲುವಿನಲ್ಲಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಮಾಜದ ಸ್ವಾಸ್ಥ ಕೆಡಿಸುವಂತಹ, ಗಲಭೆ ಸೃಷ್ಟಿಸುವಂತಹ ಹುನ್ನಾರವನ್ನು ಮಾಡಿದ್ದಾರೆ ಎಂಬುದಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದಾರೆ. ಇವರು ಆಧಾರರಹಿತವಾಗಿ […]

ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ “ಏಕ್ ಪೇಡ್ ಮಾ ಕೆ ನಾಮ್” ಕಾರ್ಯಕ್ರಮ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಾಜಿ ಸಚಿವ ದಿ. ಡಾ. ವಿ.ಎಸ್. ಆಚಾರ್ಯ ಅವರ ಜಯಂತಿಯ ಪ್ರಯುಕ್ತ ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ “ಏಕ್ ಪೇಡ್ ಮಾ ಕೆ ನಾಮ್” ಕಾರ್ಯಕ್ರಮವನ್ನು ಮಣಿಪಾಲ ಪ್ರಗತಿ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ […]

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ: ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಉಡುಪಿ: ಅಲೈನ್ಸ್ ಕ್ಲಬ್ ಉಡುಪಿ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರನ್ನು ಸನ್ಮಾನಿಸಲಾಯಿತು. ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರ ಉಡುಪಿ ನಗರದಲ್ಲಿರುವ ಕ್ಲಿನಿಕ್‌ನಲ್ಲಿ ಶನಿವಾರ ನಡೆದ ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಯಕ್ಷಗಾನ ಅಕಾಡೆಮಿ ಅಧ್ಯಕ್ಷರು ಹಾಗೂ ಪ್ರಸ್ತುತ ಅಲೈನ್ಸ್ ಜಿಲ್ಲೆ 275ರ ಅಡ್ವೈಸರ್ ಅಲೈ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ಮಾತನಾಡಿ, ಉಡುಪಿಯ ಜನಪ್ರಿಯ ವೈದ್ಯರಾಗಿರುವ ಡಾ.ಆರ್.ಎನ್.ಭಟ್ ಅವರು ಪ್ರತೀ ಶನಿವಾರ ತಮ್ಮ ಕ್ಲಿನಿಕ್‌ಗೆ ಬರುವ ರೋಗಿಗಳಿಗೆ ಉಚಿತ ಸೇವೆಯನ್ನು […]

ಕಾರ್ಕಳ: ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಳಕಳಿ ಮೆರೆದ ನವಜ್ಯೋತಿ ಫ್ರೆಂಡ್ಸ್

ಕಾರ್ಕಳ: ಪುರಸಭೆಯ ವ್ಯಾಪ್ತಿಯಲ್ಲಿರುವ ಆನೆಕೆರೆ ತಾವರೆ ವೃತ್ತದ ಬಳಿಯ ರಸ್ತೆಯು ಹೊಂಡ ಗುಂಡಿಗಳಿಂದ ಹಲವಾರು ದ್ವಿಚಕ್ರ ವಾಹನ ಹಾಗೂ ಇತರ ವಾಹನ ಸಂಚಾರ ಮತ್ತು ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದ್ದು, ಅದನ್ನು ಕಂಡ ಕಾರ್ಕಳ ಆನೆಕೆರೆಯ ನವಜ್ಯೋತಿ ಫ್ರೆಂಡ್ಸ್ ,(ರಿ) ಇದರ ವತಿಯಿಂದ ಶ್ರೀಕಾಂತ್ ಭಾಗವತ್ ಇವರ ನೇತೃತ್ವದಲ್ಲಿ ಜುಲೈ 6ರಂದು ಸಂಘದ ಅಧ್ಯಕ್ಷರಾದ ಗೌತಮ್, ಕಾರ್ಯದರ್ಶಿ ರಂಜಿತ್ , ಕೋಶಾಧಿಕಾರಿ ಶ್ರೀಕಾಂತ್, ನಿರ್ದೇಶಕರಾದ ಹರೀಶ್ ದೇವಾಡಿಗ ಹಾಗೂ ಇನ್ನಿತರ ಸಂಘದ ಸದಸ್ಯರು ರಸ್ತೆ ದುರಸ್ತಿ ಕಾರ್ಯ ನಿರ್ವಹಿಸಿದರು.