ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ “ಫ್ಯಾಷನ್ ಡಿಸೈನ್” ಕೋರ್ಸ್; ನೀವು ವೃತ್ತಿಪರಾಗಲು ಇದೊಂದು ಒಳ್ಳೆ ಅವಕಾಶ!

ಮಣಿಪಾಲ: ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರ, ಸ್ಕೂಲ್ ಆಫ್ ಪ್ಯಾಶನ್ ಡಿಸೈನಿಂಗ್’ನಲ್ಲಿ “ಫ್ಯಾಷನ್ ಡಿಸೈನ್” ವೃತ್ತಿಪರ ಅಲ್ಪಾವಧಿಯ ಕೋರ್ಸ್‌’ನ ಹೊಸ ಬ್ಯಾಚುಗಳು ಸೆಪ್ಟೆಂಬರ್ 15 ರಿಂದ ಪ್ರಾರಂಭಗೊಳ್ಳಲಿದೆ. Basic to Advanced: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:ಡ್ರೀಮ್ ಝೋನ್, 2 ನೇ ಮಹಡಿ, MSDC ಕಟ್ಟಡ, ಈಶ್ವರ್ ನಗರ, ಮಣಿಪಾಲ.+91 8123163932dreamzone_msdc_manipal

ಹೆದ್ದಾರಿಯಲ್ಲಿ ಹೊಂಡ ಗುಂಡಿ ಇದ್ದರೆ ಸುಂಕ ವಸೂಲಾತಿ ಇಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಅಪೂರ್ಣವಾಗಿರುವ ಗುಂಡಿಗಳು ಬಿದ್ದಿರುವ ಅಥವಾ ಸಂಚರಿಸಲು ಸಾಧ್ಯವಾಗದಷ್ಟು ದಟ್ಟಣೆ ಇರುವ ಹೆದ್ದಾರಿಗಳಲ್ಲಿ ಟೋಲ್‌ ಕಟ್ಟುವಂತೆ ಪ್ರಯಾಣಿಕರನ್ನು ಒತ್ತಾಯಿಸುವಂತಿಲ್ಲ’ ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ಮೂಲಕ, ಜಾಮ್‌ ಆಗಿದ್ದ ಹೆದ್ದಾರಿಯೊಂದರಲ್ಲಿ ಸುಂಕ ವಸೂಲಾತಿ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ. ಎಡಪ್ಪಳ್ಳಿ–ಮನ್ನುತಿ ನಡುವಿನ 65 ಕಿ.ಮೀ. ಹೆದ್ದಾರಿಯಲ್ಲಿ ಕಳೆದ ವಾರ 12 ತಾಸುಗಳ ಕಾಲ ವಾಹನದಟ್ಟಣೆಯಾಗಿತ್ತು. ಈ ವೇಳೆ ನಿಂತಲ್ಲೇ ನಿಂತಿದ್ದ ಪ್ರಯಾಣಿಕರು, 150 ರು. ಸುಂಕವನ್ನು ಕಟ್ಟಬೇಕಾಗಿಲ್ಲ ಎಂದು ಆ.6ರಂದು […]

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸರ ವಶಕ್ಕೆ.

ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೀವ್‌ ಕುಲಾಲ್‌ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 […]

ಉಡುಪಿ:ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನ : ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಟಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಲಾಗಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಟಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಘಟಕಗಳ ವಿವರ: ಪಚ್ಚಿಲೆ ಕೃಷಿ (ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ), ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು ಹಾಗೂ ಐಸ್ ಪ್ಲಾಂಟ್ / ಕೋಲ್ಡ್ ಸ್ಟೋರೇಜ್ ಆಧುನೀಕರಣಕ್ಕೆ ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 […]

ಉಡುಪಿ:ಡಿ. ದೇವರಾಜ ಅರಸು ಅವರ ಆಡಳಿತ ಸೇವೆ ದೂರದೃಷ್ಠಿಗೆ ಹಿಡಿದ ಕೈಗನ್ನಡಿ : ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ

ಉಡುಪಿ: ಸಾಮಾಜಿಕ ನ್ಯಾಯದ ಹರಿಕಾರ ದಿವಂಗತ ಡಿ. ದೇವರಾಜ ಅರಸು ರವರು ಆಡಳಿತ ಅವಧಿಯಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತರ, ಬಡವರ ಹಾಗೂ ದೀನ ದಲಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಯೋಜನೆಗಳು ಇಂದಿಗೂ ಸಹ ಮುಂದುವರೆಯುತ್ತಿರುವುದು ಅವರ ದೂರದೃಷ್ಠಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಹೇಳಿದರು. ಅವರು ಬುಧವಾರ ನಗರದ ಮಿಷನ್ ಕಂಪೌಂಡ್‌ನ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ […]