ಅಗಸ್ಟ್ 26ಕ್ಕೆ ‘ಉದಯಗಿರಿ’ ಹಾಗೂ ‘ಹಿಮಗಿರಿ’ ಯುದ್ಧನೌಕೆಗಳು ನೌಕಾಪಡಕ್ಕೆ ಸೇರ್ಪಡೆ.

ನವದೆಹಲಿ: ರಹಸ್ಯ ಕಾರ್ಯಾಚರಣೆ ಉದ್ದೇಶದ ‘ಉದಯಗಿರಿ’ ಹಾಗೂ ‘ಹಿಮಗಿರಿ’ ಯುದ್ಧನೌಕೆಗಳನ್ನು ವಿಶಾಖಪಟ್ಟಣದಲ್ಲಿ ಆಗಸ್ಟ್‌ 26ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಏಕಕಾಲಕ್ಕೆ ನೌಕಾಪಡೆಗೆ ಸೇರ್ಪಡೆ ಮಾಡಲಾಗುವುದು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.‘ಪ್ರಾಜೆಕ್ಟ್‌ 17ಎ’ ಭಾಗವಾಗಿ ಈ ನೌಕೆಗಳನ್ನು ನಿರ್ಮಿಸಲಾಗಿದೆ. ಈ ಯೋಜನೆ ಭಾಗವಾಗಿ ನಿರ್ಮಿಸಿರುವ ಮೊದಲ ಯುದ್ಧನೌಕೆ ‘ನೀಲಗಿರಿ’ಯನ್ನು ಜನವರಿಯಲ್ಲಿ ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೌಕಾಪಡೆಗೆ ಸೇರ್ಪಡೆ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದರು. ಈ ಯುದ್ಧನೌಕೆಯನ್ನು ಮಜಗಾಂವ್‌ ಡಾಕ್‌ ಶಿಪ್‌ ಬಿಲ್ಡರ್ಸ್ ಲಿಮಿಟೆಡ್ (ಎಂಡಿಎಲ್‌) ನಿರ್ಮಿಸಿದೆ. ಇದೇ ಶ್ರೇಣಿಯ […]

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ. ಹಣ: ಬಸನಗೌಡ ಪಾಟೀಲ್ ಯತ್ನಾಳ್

ಕೊಪ್ಪಳ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ. ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಯತ್ನಾಳ್‌ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ […]

ಉಡುಪಿ:ಶ್ರೀ ಶ್ರೀ ರಮಾನಂದ ಗುರುಜಿಯವರಿಂದ ಷಷ್ಟಿ ಪೂರ್ತಿ ಸಮಾರಂಭ ಹಾಗೂ ಅಭಿನಂದನಾ ಮಹೋತ್ಸವ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿಗಳು ಖ್ಯಾತ ಆಧ್ಯಾತ್ಮಿಕ ಚಿಂತಕರು ಆದ ಶ್ರೀ ಶ್ರೀ ರಮಾನಂದ ಗುರೂಜಿ ಅವರ 60ನೇ ವರ್ಷದ ಹುಟ್ಟು ಹಬ್ಬ ಸಮಾರಂಭ ಕ್ಷೇತ್ರದಲ್ಲಿ ನೆರವೇರಿತು. ವೇದಮೂರ್ತಿ ವಿಖ್ಯಾತ ಭಟ್ ನೇತೃತ್ವದಲ್ಲಿ ನೆರವೇರಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಪೂರ್ವಭಾವಿ ಕಾರ್ಯಕ್ರಮವಾಗಿ ಕ್ಷೇತ್ರದಲ್ಲಿ ಸಾಯಂಕಾಲ ಪೂರ್ಣಮಾನ ಸುದರ್ಶನ ಯಾಗ, ಕಲಶ ಪ್ರತಿಷ್ಠಾಪನ ವಿಧಿಗಳು, ಪ್ರಾತ: ಕಾಲದಲ್ಲಿ ತ್ರಿನಾಳಿಕೇರ ಗಣ ಯಾಗ, ಪೂರ್ಣಮಾನ ಧನ್ವಂತರಿಯಾಗ, ಮಾರ್ಕಂಡೇಯ ಹೋಮ, ನವಗ್ರಹ […]

ಉಡುಪಿ: ಬೈಕ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು; ಬೈಕ್ ಸವಾರರ ಸ್ಥಿತಿ ಗಂಭೀರ.

ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಬೈಕೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟು, ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಆ.9ರ ಶನಿವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಸಂಭವಿಸಿದೆ. ಮೃತಪಟ್ಟ ಪಾದಚಾರಿ ಶಂಕರ್ ಶೆಟ್ಟಿ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳಾದ ನತಾಷಾ ಮತ್ತು ದರ್ಶನ್ ರಾಜ್ ಎಂದು ಗುರುತಿಸಲಾಗಿದೆ.ಗಾಯಾಳುಗಳನ್ನು ಉಚ್ಚಿಲ ಹಾಗೂ ಮೂಳೂರಿನ ಎಸ್.ಡಿ.ಪಿ.ಐ ಆ್ಯಂಬುಲೆನ್ಸ್‌ ಸಹಾಯದಿಂದ ಜಲಾಲುದ್ದೀನ್ ಜಲ್ಲು, ಕೆ.ಎಂ. ಸಿರಾಜ್, ಹಮೀದ್ ಆ್ಯಂಬುಲೆನ್ಸ್, […]