ಉಡುಪಿ ಜಿಲ್ಲೆಯ ಸಹಕಾರಿ ಸಂಸ್ಥೆಗಳಿಂದ ಸಹಕಾರಿ ಕ್ಷೇತ್ರದ ಭವಿಷ್ಯ ರೂಪಿಸುವ ಕೆಲಸ ಆಗುತ್ತಿದೆ- ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕರ್ನಾಟಕ ರಾಜ್ಯ ಸಹರಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪತ್ತಿನ ಹಾಗೂ ಇತರೆ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರಿಗೆ ರಾಜ್ಯಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಶನಿವಾರ ಉಡುಪಿ ಲಿಕೋ ಬ್ಯಾಂಕಿನ ಡೈಮಂಡ್ ಜ್ಯುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಸಹಕಾರಿ ಕ್ಷೇತ್ರದ ಭವಿಷ್ಯ ರೂಪಿಸುವ ಕೆಲಸ ಜಿಲ್ಲೆಯ ಸಹಕಾರಿಗಳಿಂದ ಆಗುತ್ತಿರುವುದು ಹೆಮ್ಮೆಯ […]

ಉಡುಪಿ: ಮಹೇಶ್ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಮೂರು ಗಂಟೆಗಳ ಪೊಲೀಸ್ ಕಸ್ಟಡಿ ಬಳಿಕ ಸಂಜೆ 4:00ಗೆ ಉಡುಪಿ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದು ಆರೋಪಿ ಪರ ವಕೀಲ ವಿಜಯ ವಾಸು ಪೂಜಾರಿ ಹಾಗೂ ಸಹಾಯಕ ಸರಕಾರಿ ಅಭಿಯೋಜಕರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ನಾಗೇಶ್ ಎನ್ಎ ಶರತುಬದ್ಧ […]

ಕಾರ್ಕಳ ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ, ಸಾಮಾಜಿಕ ಕಾರ್ಯಕ್ರಮ, ರಕ್ತದಾನ ಶಿಬಿರ, ಆಡಂಬರ ರಹಿತ ಆರ್ಥಪೂರ್ಣ ಕಾರ್ಯಕ್ರಮ :ಡಾ.ಸಂಜಯ್

ಕಾರ್ಕಳ: ಸಾಮಾಜಿಕ ಪ್ರಜ್ಞೆಯ ಜವಾಬ್ದಾರಿಯನ್ನುಹೊಂದಿದ ಅರ್ಥಪೂರ್ಣ ಆಡಂಬರರಹಿತ ಜ್ಞಾನಸುಧಾದಕಾರ್ಯಗಳು ಪ್ರಶಂಸನೀಯ. ಸಭ್ಯತೆ, ನಡೆನುಡಿಯಸಾಕಾರಮೂರ್ತಿ ಡಾ.ಸುಧಾಕರ್ ಶೆಟ್ಟಿಯವರು ಎಂದುಕಾರ್ಕಳ ಟಿ.ಎಂ.ಎಪೈ ರೋಟರಿ ಆಸ್ಪತ್ರೆಯ ಪ್ರಸೂತಿ,ಸ್ತ್ರೀ ರೋಗ ತಜ್ಞ ಡಾ. ಸಂಜಯ್ ಹೇಳಿದರು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿಆಗಸ್ಟ್ 21ರಂದು ನಡೆದ ಸಾಮಾಜಿಕ ನೆರವಿನ ಸೇವಾಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾಜಿಕ ಕಾರ್ಯಕ್ರಮ :ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನವತಿಯಿಂದ ಸಮಾಜ ಸೇವಕ ಅಂಬಲಪಾಡಿ ವಿಶು ಶೆಟ್ಟಿ ಹಾಗೂಸ್ವಚ್ಛ ಕಾರ್ಕಳದ […]

ಬಂಟಕಲ್: ಸೋದೆ ಶಿಕ್ಷಣ ಸಂಸ್ಥೆ ಸಮೂಹ ಮತ್ತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ, (ಮಾಹೆ) ಜೊತೆ ಒಡಂಬಡಿಕೆ

ಉಡುಪಿ, ಬಂಟಕಲ್: ಶ್ರೀ ಸೋದೆ ವಾದಿರಾಜ ಮಠಶಿಕ್ಷಣ ಸಂಸ್ಥೆ ಸಮೂಹ ಮತ್ತು ಮಣಿಪಾಲ ಉನ್ನತ ಶಿಕ್ಷಣಅಕಾಡೆಮಿ, (ಮಾಹೆ) ಮಣಿಪಾಲ ಜೊತೆ ದಿನಾಂಕ 22 ಆಗಸ್ಟ್2025 ರಂದು ಒಡಂಬಡಿಕೆಗೆ ಸಹಿ ಹಾಕಲಾಯಿತು. ಈ ಒಪ್ಪಂದವು ಶೈಕ್ಷಣಿಕ ಕ್ಷೇತ್ರದಲ್ಲಿ ನವೀನತೆ,ಸಂಶೋಧನೆಯಲ್ಲಿ ಉತ್ಕೃಷ್ಟತೆ ಮತ್ತು ಉದ್ಯಮಶೀಲತೆಯಕ್ಷೇತ್ರದಲ್ಲಿ ಅಭಿವೃದ್ಧಿ, ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಗೆವಿವಿಧ ಕ್ಷೇತ್ರಗಳಲ್ಲಿ ತಂತ್ರಜ್ಞಾನ ಮತ್ತು ಜ್ಞಾನವನ್ನುಹಂಚಿಕೊಳ್ಳಲು ವೇದಿಕೆಯನ್ನು ಒದಗಿಸುತ್ತದೆ.ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಕರು, ಹ್ಯಾಕಥಾನ್, ಇಂಟರ್ನ್ಶಿಪ್, ಮತ್ತು ಸಣ್ಣ ಪ್ರಾಜೆಕ್ಟ್ಗಳ ಮೂಲಕ ತಮ್ಮ ಕೌಶಲ್ಯಗಳನ್ನು ಮತ್ತು ವೃತ್ತಿಪರ ಬೆಳವಣಿಗೆಯನ್ನು ಹೆಚ್ಚಿಸಿಕೊಳ್ಳುವಂತಹ […]

ಕಾರ್ಕಳ ಕ್ರೆಸ್ಟ್ ಕಿಂಗ್: ಶಗುನ್ ಎಸ್ ವರ್ಮ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ರಾಷ್ಟ್ರೀಯ ವಾಲಿಬಾಲ್ ತಂಡದ ಅರ್ಹತಾ ಶಿಬಿರಕ್ಕೆ ಆಯ್ಕೆ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಶಗುನ್ ಎಸ್ ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯಬಾಲಕಿಯರ ವಿಭಾಗದ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಆಟಗಾರರು ಭಾಗವಹಿಸಿದ್ದು ಅದರಲ್ಲಿ ಎಂಟು ಆಟಗಾರರು ಆಯ್ಕೆಯಾಗಿದ್ದರು. ಇದರಲ್ಲಿ ಉಡುಪಿ ಜಿಲ್ಲೆಯಿಂದ ಏಕೈಕ ಆಟಗಾರಳಾಗಿ ಶಗುನ್ ಆಯ್ಕೆಯಾಗಿದ್ದಾಳೆ. ಭಾರತವನ್ನು ಪ್ರತಿನಿಧಿಸುವ ರಾಷ್ಟೀಯ ತಂಡದ ಆಯ್ಕೆಪ್ರಕ್ರಿಯೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿದ್ದುಇಲ್ಲಿ ಆಯ್ಕೆಯಾದ ತಂಡವು ಮುಂದಿನ ಅಂತರಾಷ್ಟ್ರೀಯಪಂದ್ಯವನ್ನು ಚೀನಾದ ಶಾಂಗ್ಲೋದಲ್ಲಿ ಆಡಲಿದೆ. ಈಕೆಕಲ್ಲೊಟ್ಟೆ ನಿವಾಸಿ […]