ಉಡುಪಿ : ಕರವೇ (ಪ್ರವೀಣ್ ಶೆಟ್ಟಿ ಬಣ) ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿ ಆಯ್ಕೆ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾ ಘಟಕದ ಗೌರವ ಸಲಹೆಗಾರರಾಗಿಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ದಲಿತ ಹೋರಾಟಗಾರ ಶೇಖರ್ ಹೆಜಮಾಡಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಗೌರವಾಧ್ಯಕ್ಷರಾದ ಅನ್ಸಾರ್ ಅಹಮದ್ ರವರು ಉಡುಪಿ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆಯ ಗೌರವ ಸಲಹೆಗಾರರಾಗಿ ಶೇಖರ್ ಹೆಜಮಾಡಿಯವರನ್ನು ದಿನಾಂಕ 23-07-2025 ರಿಂದ ಜಾರಿಗೆ ಬರುವಂತೆ ಆಯ್ಕೆ ಮಾಡಿ ಆದೇಶ ಹೊರಡಿಸಿರುತ್ತಾರೆ.

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ: ಜುಲೈ 30 ಮತ್ತು 31 ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರ.

ಮಣಿಪಾಲ: ಬಂಜೆತನ ಮತ್ತು ಸಂತಾನೋತ್ಪತ್ತಿ ಆರೋಗ್ಯದ ಬಗ್ಗೆ ಹೆಚ್ಚುತ್ತಿರುವ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಮಹತ್ವದ ಉಪಕ್ರಮದಲ್ಲಿ, ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯು ಬುಧವಾರ , ಜುಲೈ 30 ಮತ್ತು ಗುರುವಾರ , 31, 2025 ರಂದು ಉಚಿತವಾಗಿ ಫಲವತ್ತತೆ ಮತ್ತು ಬಂಜೆತನ ತಪಾಸಣಾ ಶಿಬಿರವನ್ನು ಆಯೋಜಿಸುತ್ತಿದೆ. ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಎರಡೂ ದಿನ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12:30 ರವರೆಗೆ ಈ ಶಿಬಿರವ ನಡೆಯಲಿದೆ. ಈ ಶಿಬಿರವು ದಂಪತಿಗಳು ಮತ್ತು ವ್ಯಕ್ತಿಗಳಿಗೆ […]

ಕುಂದಾಪುರ: ಆಂಬುಲೆನ್ಸ್ ಚಾಲಕ ನೇಣು ಬಿಗಿದು ಆತ್ಮಹತ್ಯೆ.

ಕುಂದಾಪುರ: ಸಮಾಜ ಸೇವಕ, ಆಂಬುಲೆನ್ಸ್ ಚಾಲಕ ಅಯೂಬ್ ಕೆ.ಎಸ್. ಕೋಟೇಶ್ವರ(56) ಮನೆಯಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಇವರು ಹಲವು ವರ್ಷಗಳಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಚಾಲಕರಾಗಿದ್ದು ಸಮಾಜ ಸೇವಕರಾಗಿದ್ದರು. ತಿಂಗಳ ಹಿಂದೆ ಸ್ವಂತ ಆಂಬುಲೆನ್ಸ್ ಖರೀದಿಸಿದ್ದು ಇತ್ತೀಚೆಗೆ ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಡಿವೈಡರ್ ಬಳಿ ನಿಯಂತ್ರಣ ತಪ್ಪಿ ಬ್ಯಾರಿ ಕೇಡ್‌ಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ದುರಸ್ತಿ ಹಣ ಇಲ್ಲದ ಚಿಂತೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಇವರು, ಮನೆಯ ಕೋಣೆಯಲ್ಲಿ ನೇಣು […]

Tanuja’S Mind therapy ಅವರ Re Design Your Mind ಕುರಿತು ಕಾರ್ಯಾಗಾರ ಹಾಗೂ ಪುಸ್ತಕ ಬಿಡುಗಡೆ

ಉಡುಪಿ:ಮಣಿಪಾಲದಲ್ಲಿ ಜು.27 ರಂದು Tanuja’S Mind therapy ಅವರ Re Design Your Mind ಕುರಿತು 3 ಗಂಟೆಗಳ ಕಾರ್ಯಾಗಾರವು ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮಣಿಪಾಲದ ಟೀ ಟ್ರೀಟ್ ಸೂಟ್ ಹೊಟೆಲ್ನಲ್ಲಿ ನಡೆಯಿತು. ಈ ಕಾರ್ಯಗಾರದಲ್ಲಿ ಇಂದಿನ ನಮೆಲ್ಲರ ಜೀವನ ಶೈಲಿ,ಒತ್ತಡ , ಆತಂಕ,ಭಯ ಹೇಗೆ ನಿರ್ವಹಿಸಬಹುದು ಹಾಗೂ ಆತ್ಮವಿಶ್ವಾಸವನ್ನು ಹೇಗೆ ಹೆಚ್ಚಿಸಿಕೊಳ್ಳುವುದರ ಬಗ್ಗೆ ತನುಜಾ ಮಾಬೆನ್ ಅವರು ವಿವರವಾಗಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತನುಜಾ ಮಾಬೆನ್ ಅವರ Redesign […]