ವೈದ್ಯ, ಲೆಕ್ಕಪರಿಶೋಧಕ, ಪತ್ರಿಕಾ ದಿನಾಚರಣೆ ಗೌರವ ಪುರಸ್ಕಾರ 2025 ಪ್ರದಾನ ಸಮಾರಂಭ

ಉಡುಪಿ: ಪ್ರತಿ ದಿನ ಹೊಸತನ್ನು ತಿಳಿಯಲು, ಕಲಿಯುವ ನಿಟ್ಟಿನಲ್ಲಿ ನಾವು ಬದುಕಿನುದ್ದಕ್ಕೂ ನಾವು ನಿರಂತರ ವಿದ್ಯಾರ್ಥಿಗಳಾಗಬೇಕು. ದಾನದಿಂದ ಸಿಗುವ ತೃಪ್ತಿ ಬದುಕಿನ ಶ್ರೇಷ್ಠ ಅಂಶ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ, ಪತ್ರಿಕಾ ದಿನದಂಗವಾಗಿ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯಲ್ಲಿ ಮಂಗಳವಾರ ಗೌರವ […]
ಪ್ರಿಯಾಂಕ ಖರ್ಗೆ ಹೇಳಿಕೆಯಲ್ಲಿ ತಪ್ಪೇನಿಲ್ಲ ಆರ್ ಎಸ್ ಎಸ್ ಗೆ ನಿಷೇಧ ಹೇರಬೇಕು ಎಂದರೆ ಹೇರಲೇಬೇಕು: ಮಂಜುನಾಥ ಭಂಡಾರಿ

ಉಡುಪಿ: ಕಾಂಗ್ರೆಸ್ನ ಯಾವ ನಾಯಕರು ಏನು ಹೇಳಿದ್ದಾರೆ ಎನ್ನೋದು ಮುಖ್ಯವಲ್ಲ, ಎಐಸಿಸಿ ಅಧ್ಯಕ್ಷರು ಏನು ಹೇಳಿದ್ದಾರೆ ಎನ್ನುವುದೇ ಮುಖ್ಯ ಎಂದು ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ನಾಯಕರ ಬಳಿ ಮಾಧ್ಯಮಗಳು ಅಭಿಪ್ರಾಯ ಕೇಳಿದಾಗ ಹೇಳುತ್ತಾರೆ. ಸೆಪ್ಟೆಂಬರ್ನಲ್ಲಿ ಯಾವ ಕ್ರಾಂತಿಯೂ ಇಲ್ಲ. ವಾಂತಿಯೂ ಆಗುವುದಿಲ್ಲ. ಪಕ್ಷ ಬಲಿಷ್ಠವಾಗಿದ್ದು, ವರಿಷ್ಠ ಮಂಡಳಿ ನಿರ್ಧಾರ ತೆಗೆದುಕೊಳ್ಳುತ್ತದೆ. ಬದಲಾವಣೆ ಆಗಬೇಕು ಎಂದರೆ ಅಖಿಲ ಭಾರತ ಮಟ್ಟದಲ್ಲಿ ನಿರ್ಧಾರ ಮಾಡುತ್ತಾರೆ. ಒಬ್ಬರು, ಇಬ್ಬರು ನಾಯಕರಿಂದ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು. […]
ಕೆಪಿಸಿಸಿ ನಿಯೋಗದಿಂದ ಉಡುಪಿ ಜಿಲ್ಲೆಯ ವಿವಿಧ ಧಾರ್ಮಿಕ ನಾಯಕರ ಭೇಟಿ

ಉಡುಪಿ: ಕರಾವಳಿ ಭಾಗದಲ್ಲಿ ಇತ್ತೀಚೆಗೆ ನಡೆದಿರುವ ಹಲವು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕೂಲಂಕಷ ಅಧ್ಯಯನ ನಡೆಸಿ, ಇವುಗಳಿಗೆ ಕಡಿವಾಣ ಹಾಕಲು ಅನುಸರಿಸಬೇಕಾದ ಕ್ರಮಗಳ ಕುರಿತು ಶಿಫಾರಸ್ಸು ಮಾಡಿ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ನಿಯೋಜಿತವಾದ ಪಕ್ಷದ ಹಿರಿಯ ನಾಯಕರ ಕೆಪಿಸಿಸಿ ನಿಯೋಗ ಮಂಗಳವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ನ ಹಿರಿಯ ಅಧಿಕಾರಿಗಳು, ಪರ್ಯಾಯ ಪುತ್ತಿಗೆ ಹಾಗೂ ಪೇಜಾವರ ಶ್ರೀಗಳು ಸೇರಿದಂತೆ ವಿವಿಧ ಧರ್ಮಗಳ ಮುಖಂಡರು, ವಿವಿಧ ಸಂಘಟನೆಗಳ ನಾಯಕರನ್ನು ಭೇಟಿ ಮಾಡಿ ಚರ್ಚಿಸಿತು. ಎಐಸಿಸಿ […]
ಉಡುಪಿ: ಕೆಪಿಸಿಸಿ ನಿಯೋಗದಿಂದ ಮುಸ್ಲಿಮ್ ಮುಖಂಡರೊಂದಿಗೆ ಸಮಾಲೋಚನೆ

ಉಡುಪಿ: ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಸೌಹಾರ್ದವನ್ನು ಸಮಾಜದಲ್ಲಿ ಮೂಡಿಸುವ ಉದ್ದೇಶದಿಂದ ಕೆಪಿಸಿಸಿಯಿಂದ ನಿಯೋಜನೆಗೊಂಡ ಹಿರಿಯ ಮುಖಂಡರನ್ನು ಒಳಗೊಂಡ ನಿಯೋಗ ಇಂದು ಉಡುಪಿ ಜಾಮೀಯ ಮಸೀದಿಗೆ ಭೇಟಿ ನೀಡಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿತು. ರಾಜ್ಯಸಭಾ ಸದಸ್ಯ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಡಾ.ನಾಸಿರ್ ಹುಸೇನ್, ವಿಧಾನ ಪರಿಷತ್ನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಎಂಎಲ್ಸಿ ಮಂಜುನಾಥ್ ಭಂಡಾರಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಕಿಮ್ಮನೆ ರತ್ನಾಕರ್ ಅವರ […]
ಉಡುಪಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:IQMIST Pvt.Ltd ವತಿಯಿಂದ ವಿವಿಧ ಹುದ್ದೆಗಳಿಗೆ ಜುಲೈ 10 ಮತ್ತು 11ರಂದು ಸಂದರ್ಶನ ನಡೆಯಲಿದೆ. ಬೆಳಿಗ್ಗೆ 11 ಗಂಟೆಯಿಂದ ಸಂಜೆ 7:00 ಗಂಟೆವರೆಗೆ ಫ್ರೆಶರ್ಸ್ ಮತ್ತು ಅನುಭವವಿರುವವರು ಈ ಸಂದರ್ಶನದಲ್ಲಿ ಭಾಗವಹಿಸಬಹುದು. ಹುದ್ದೆಗಳು: ▪ ಡಿಜಿಟಲ್ ಮಾರ್ಕೆಟಿಂಗ್ ಮ್ಯಾನೇಜರ್▪ ವಿಡಿಯೋ ಎಡಿಟರ್▪ ಸೋಶಿಯಲ್ ಮೀಡಿಯಾ ಸ್ಪೆಶಲಿಸ್ಟ್▪ ಗ್ರಾಫಿಕ್ ಡಿಸೈನರ್▪ ಸೇಲ್ಸ್ ಎಕ್ಸಿಕ್ಯೂಟಿವ್▪ ಅಕೌಂಟ್ ಮ್ಯಾನೇಜರ್▪ ಮಾರ್ಕೆಟಿಂಗ್ ಮ್ಯಾನೇಜರ್▪ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್▪ ಕ್ಲೈಂಟ್ ರಿಲೇಶನ್ಶಿಪ್ ಮ್ಯಾನೇಜರ್ ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ವಾಟ್ಸಪ್ ನಂಬರ್ ಗೆ […]