ಉಡುಪಿ:79 ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 9 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದು, ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ […]
ಉಡುಪಿ:ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಯುವಜನರಲ್ಲಿ ಮಾದಕ ದ್ರವ್ಯ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲು ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವ್ಯಸನ ಮುಕ್ತ ಸುಸ್ಥಿರ ಸಮಾಜ ನಿರ್ಮಾಣ ಪ್ರತಿಯೊಬ್ಬರ ಆದ್ಯತೆಯಾಗಲಿ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಅವರು ಬುಧವಾರ ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಸಾರ್ವಜನಿಕ […]
ಆ.15ರಂದು ಮೂಡುಬಿದಿರೆಯಲ್ಲಿ ಮಳೆಕಾಡು, ತೋಪು ಜೈವಿಕ ಕಣಜ ನಿರ್ಮಿತಿ ಅಪೂರ್ವ ರಾಷ್ಟ್ರೀಯ ಕಾರ್ಯಕ್ರಮ

ಉಡುಪಿ: ಜೈನ ಕಾಶಿ ಟ್ರಸ್ಟ್ ಜೈನಮಠ ಮೂಡುಬಿದಿರೆ, ಮೂಡುಬಿದಿರೆ ಆಳ್ವಾಸ್ ಕಾಲೇಜು ಹಾಗೂ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಮಳೆಕಾಡು, ತೋಪು ಜೈವಿಕ ಕಣಜ ನಿರ್ಮಿತಿ ಅಪೂರ್ವ ರಾಷ್ಟ್ರೀಯ ಕಾರ್ಯಕ್ರಮವನ್ನು ಇದೇ ಆ.15ರಂದು ಮೂಡುಬಿದಿರೆ ಸಾವಿರ ಕಂಬ ಬಸದಿಯಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರದ ನಿರ್ದೇಶಕ ಪ್ರೊ. ಎಸ್.ಎ. ಕೃಷ್ಣಯ್ಯ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಡಾ. ಸ್ವಸ್ತೀ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ […]
ಸಿನಿ ಪ್ರೇಕ್ಷಕರಿಗೆ ಸಿಹಿ ಸುದ್ದಿ; ಸಿನೆಮಾ ಟಿಕೆಟ್ ದರ 200 ರೂ’ಗೆ ಮಿತಿ ಹೇರಲು ರಾಜ್ಯ ಸರ್ಕಾರ ಸಿದ್ಧತೆ!

ಬೆಂಗಳೂರು: ರಾಜ್ಯದ ಸಿನಿ ಪ್ರೇಕ್ಷಕರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಲು ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಸಿನಿಮಾ ರಿಲೀಸ್ ಆದರೂ 200 ರೂಪಾಯಿ ಮಿತಿ ಮೀರದಂತೆ ಆದೇಶ ಹೊರಡಿಸಲು ಸಿದ್ಧವಾಗಿದೆ. ಕರ್ನಾಟಕ ಸರ್ಕಾರ ಒಂದು ಆದೇಶ ಹೊರಡಿಸಲು ಸಿದ್ಧತೆ ನಡೆಸಿದೆ. ರಾಜ್ಯದ ಸಿನಿ ಪ್ರೇಕ್ಷಕರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ಒಂದನ್ನು ನೀಡಲು ಮುಂದಾಗಿದ್ದು, ಇನ್ನು ಮುಂದೆ ಯಾವುದೇ ಸಿನಿಮಾ ರಿಲೀಸ್ ಆದರೂ 200 ರೂಪಾಯಿ ಮಿತಿ ಮೀರದಂತೆ ಆದೇಶ ಹೊರಡಿಸಲು ಸಿದ್ಧವಾಗಿದೆ.ಕರ್ನಾಟಕ ಸರ್ಕಾರ […]
ಬೇಕರಿಯಿಂದ ಖರೀದಿಸಿದ ಪಪ್ಸ್ನಲ್ಲಿ ಹಾವು ಪತ್ತೆ; ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಹೈದರಾಬಾದ್: ತೆಲಂಗಾಣದ ಮೆಹಬೂಬ್ ನಗರದಲ್ಲಿ ಬೇಕರಿಯಿಂದ ಖರೀದಿಸಿದ್ದ ಕರ್ರಿ ಪಪ್ಸ್ನಲ್ಲಿ ಹಾವು ಪತ್ತೆಯಾಗಿರುವ ಘಟನೆ ನಡೆದಿದೆ. ಶ್ರೀಶೈಲ ಎಂಬ ಮಹಿಳೆ ಜಡ್ಚರ್ಲಾ ಪುರಸಭೆಯಲ್ಲಿರುವ ಅಯ್ಯಂಗಾರ್ ಬೇಕರಿಯಿಂದ ಎಗ್ ಪಪ್ಸ್, ಕರ್ರಿ ಪಪ್ಸ್ ಖರೀದಿಸಿದ್ದರು. ಅಲ್ಲಿಂದ ಮನೆಗೆ ಬಂದ ಮಹಿಳೆ ತಮ್ಮ ಮಕ್ಕಳೊಂದಿಗೆ ತಿನ್ನಲು ಕುಳಿತರು. ಈ ವೇಳೆ ಕರ್ರಿ ಪಪ್ಸ್ ತೆರೆದಾಗ ಅದರಲ್ಲಿ ಹಾವು ಇರುವುದು ಪತ್ತೆಯಾಗಿದೆ. ಕೂಡಲೇ ಮಹಿಳೆ ಈ ಕುರಿತು ಬೇಕರಿ ಮಾಲೀಕರಿಗೆ ಮಾಹಿತಿ ತಿಳಿಸಿದ್ದು, ಅವರು ಬೇಜವ್ದಾರಿಯಿಂದ ವರ್ತಿಸಿದ್ದಾರೆ. ಜೊತೆಗೆ ಇಲ್ಲಸಲ್ಲದ ಕಾರಣ […]