ಉಡುಪಿ:ಕೃಷಿ ಪ್ರಶಸ್ತಿ : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಪ್ರತಿ ಹಂತದಲ್ಲಿ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಬೆಳೆ ಸ್ಪರ್ಧೇಗೆ ಅನ್ವಯಿಸುವಂತೆ ಒಂದೇ ಅರ್ಜಿಯನ್ನು ಸ್ಫರ್ಧಿಗಳಿಂದ ಪಡೆಯಲಾಗುತ್ತಿದ್ದು, ಮುಂಗಾರು ಹಂಗಾಮಿನ ಮಳೆಯಾಶ್ರಿತ ಭತ್ತದ ಬೆಳೆಯಲ್ಲಿ ಬೆಳೆ ಸ್ಪರ್ಧೆಗೆ ರೈತರು ಹಾಗೂ ರೈತ ಮಹಿಳೆಯರು ಕೆ-ಕಿಸಾನ್ ಪೋರ್ಟಲ್‌ನಡಿ ಆರ್.ಎಸ್.ಕೆ ಅಥವಾ ಸಿಟಿಝನ್ […]

ಕಾರ್ಕಳ: ಹಾಸ್ಟೆಲ್ ಗೋಡೆಯಲ್ಲಿ ಪ್ರಚೋದನಕಾರಿ ಬರಹ: ವಿದ್ಯಾರ್ಥಿನಿ ಬಂಧನ.

ಕಾರ್ಕಳ: ಕಾರ್ಕಳದ ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ನ ಶೌಚಾಲಯದ ಗೋಡೆಯಲ್ಲಿ ಪ್ರಚೋದನಕಾರಿ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿನಿಯನ್ನು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಬಂದಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಫಾತಿಮಾ ಶಬ್ನಾ (21) ಬಂಧಿತರು. ಆರೋಪಿ ಮೇ 7 ರಂದು ಹಾಸ್ಟೆಲ್ ನ ಶೌಚಾಲಯದ ಕೊಠಡಿ ಗೋಡೆಯಲ್ಲಿ ಎರಡು ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಬರಹ ಬರೆದಿರುವ ಕುರಿತು ಹಾಸ್ಟೆಲ್ ಮ್ಯಾನೇಜರ್ ಪೊಲೀಸರಿಗೆ ದೂರು ನೀಡಿದ್ದರು.

ಜುಲೈ 20ರಂದು ಕುಂದಾಪುರದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟ

ಉಡುಪಿ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಇದರ ಆಶ್ರಯದಲ್ಲಿ “ಲಗೋರಿ” ಗ್ರಾಮೀಣ ಕ್ರೀಡಾಕೂಟವನ್ನು ಇದೇ ಜುಲೈ 20ರಂದು ಕುಂದಾಪುರ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಮ್ಮ ಸಂಸ್ಥೆಯು ಕಳೆದ ಎರಡು ವರ್ಷಗಳಿಂದ ಭಾಷೆಯ ಹೆಸರಿನಲ್ಲಿ ಲಗೋರಿ ಎಂಬ ಕ್ರೀಡಾಕೂಟವನ್ನು ಆಯೋಜಿಸುತ್ತಿದೆ. ಇಂದಿನ ಜನಾಂಗ ನೋಡದ ಮತ್ತು‌ ಆಡದ ಆಟಗಳನ್ನು […]

ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸರ ದಾಳಿ- 7 ಮಂದಿ ವಶಕ್ಕೆ

ಉಡುಪಿ : ಬ್ರಹ್ಮಾವರ ತಾಲೂಕು ಬಿಲ್ಲಾಡಿ ಗ್ರಾಮದ ಮೆತ್ತಗೊಳಿ ಎಂಬಲ್ಲಿಯ ಕೋಳಿ ಶೆಡ್ ಬಳಿ ಅಂದರ್‌ ಬಾಹ‌ರ್ ಇಸ್ಪೀಟು ಆಟದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಜಯಕರ ಪೂಜಾರಿ(42), ಚಕ್ರಪಾಣಿ(60), ನಿಲೇಶ್ ಕೋಠಾರಿ(43),ಜಗದೀಶ ಆಚಾರ್ಯ(45), ಗೋಪಾಲ, ಸದಾಶಿವ ಶಾಸ್ತ್ರಿ, ಕಾಳಪ್ಪ ನಾಯ್ಕ(59) ಬಂಧಿತರು. ಬಂಧಿತರಿಂದ ಇಸ್ಪೀಟು ಜುಗಾರಿ ಆಟಕ್ಕೆ ಬಳಸಿದ ರೂ. 9,880 ನಗದು, 8 ಮೊಬೈಲ್‌ ಹ್ಯಾಂಡ್ ಸೆಟ್, ಒಂದು ಕಾರು,ಸ್ಕೂಟರ್ ಸಹಿತ ಸುತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ […]

ಬೈಂದೂರು: ದನ ಕಳ್ಳತನ- ಇಬ್ಬರು ಆರೋಪಿಗಳ ಬಂಧನ

ಉಡುಪಿ: ದನ ಕಳ್ಳತನ ಮಾಡಿ ಸಾಗಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಂದೂರು ಪೋಲಿಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಸ್ತಾನ ನಿವಾಸಿ ಮೊಹಮ್ಮದ್ ಕೈಪ್ ಮತ್ತು ಉಚ್ಚಿಲ ಕಾಪು ನಿವಾಸಿ ಮೊಹಮ್ಮದ್ ಸುಹೇಲ್ ಖಾದರ್ ಎಂದು ಗುರುತಿಸಲಾಗಿದೆ. ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ದನ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ 3 ತಂಡಗಳನ್ನು ರಚಿಸಲಾಗಿತ್ತು. ಕಾರ್ಯಾಚರಣೆ ಇಳಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ದನಕಳ್ಳತನಕ್ಕೆ ಉಪಯೋಗಿಸಿದ […]