ಉಡುಪಿ:ಬ್ರಹ್ಮಾವರದ ಹಿರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರದ ಹಿರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔸ಮ್ಯಾನೇಜರ್ -01🔸ಸರ್ವಿಸ್ ಮ್ಯಾನೇಜರ್ -01🔸ಸೇಲ್ಸ್ ಎಕ್ಸಿಕ್ಯೂಟಿವ್ -01🔸ಸರ್ವಿಸ್ ಅಡ್ವೈಸರ್ -02🔸ಹೌಸ್ ಕೀಪಿಂಗ್ -01🔸ಹೆಲ್ಪರ್ -02🔸ಮೆಕ್ಯಾನಿಕ್ -04🔸ವಾಷಿಂಗ್ -01 ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಗೆ ಕಳುಹಿಸಿ[email protected] ಸಂಪರ್ಕಿಸಿ: +917996210666
ಎಸ್.ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ: ಚಿತ್ರ ಸಿಂಚನ -2025 ಸಮಾರಂಭ.

ಮಂಗಳೂರು: ದೇವಮಾನವ ಕೀರ್ತಿಶೇಷ ಪಾಲ್ಕೆ ಬಾಬುರಾಯ ಆಚಾರ್ಯರ ತ್ಯಾಗ, ಸೇವೆ, ಸಮರ್ಪಣಾ ಭಾವಗಳ ನೆನಪು ಬದುಕಿಗೆ ದಾರಿದೀಪವಾಗಬೇಕು. ದೇವಮಾನರೆಂದೇ ಕರೆಯಲ್ಪಡುವ ಪಾಲ್ಕೆ ಬಾಬುರಾಯ ಆಚಾರ್ಯರು ‘ಸರಳ ಜೀವನ, ಉದಾತ್ತ ಚಿಂತನೆ’ ಇದು ಅವರ ಬದುಕಿನ ಬಹುಮುಖ್ಯ ಮೌಲ್ಯವಾಗಿತ್ತು “ಇಂದಿಗೂ ಸಾವಿರಾರು ಜನರ ಹೃದಯದಲ್ಲಿ ಪಾಲ್ಕೆ ಬಾಬುರಾಯ ಆಚಾರ್ಯರು ಜೀವಂತವಾಗಿದ್ದಾರೆ ಎಂದು ವಿಶ್ವಕರ್ಮ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಬಿ.ಎ.ಆಚಾರ್ಯ ಅಭಿಪ್ರಾಯಪಟ್ಟರು. ಎಸ್.ಕೆ ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ ಆಯೋಜಿಸಿದ್ದ ವಜ್ರಮಹೋತ್ಸವ ಮತ್ತು ಸಂಸ್ಥೆಯ ಸ್ಥಾಪಕರಾದ ಪಾಲ್ಕೆ […]
ಕಾರ್ಕಳ ಪರಶುರಾಮ ಪ್ರತಿಮೆ:ಸರ್ಕಾರಕ್ಕೆ ನೋಟಿಸ್ ನೀಡಿದ ಕೋರ್ಟ್

ಬೆಂಗಳೂರು: ‘ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಉಮಿಕಲ್ ಬೆಟ್ಟದ ಮೇಲೆ ಪರಶುರಾಮನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.ಈ ಸಂಬಂಧ ಉಡುಪಿ ತಾಲ್ಲೂಕಿನ ವರಂಗ ಗ್ರಾಮದ ಉದಯ ಶೆಟ್ಟಿ ಮುನಿಯಾಲು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಪ್ರತಿವಾದಿಗಳಾದ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ […]
ಕೊಡವೂರಿನಲ್ಲಿ ಯಕ್ಷಗಾನ ಹೆಜ್ಜೆ ತರಬೇತಿ ಶಿಬಿರದ ಸಮಾರೋಪ

ಉಡುಪಿ: ನಾನು ಯಕ್ಷಗಾನ ಅಕಾಡೆಮಿಯ ಅಧ್ಯಕ್ಷನಾಗಲು ಬಯಸಿದ್ದ ಉದ್ದೇಶ ಇಷ್ಟೇ, ಅಕಾಡೆಮಿ ಕೊಡುವ ಸೌಲಭ್ಯಗಳು ಕಲೆ, ಕಲಾವಿದರನ್ನು ಮುಟ್ಟಬೇಕು ಎನ್ನುವುದು. ಹೀಗಾಗಿ ಯಕ್ಷಗಾನಕ್ಕೆ ಸಂಬoಧಿಸಿದ ಕಾರ್ಯಕ್ರಮಗಳಿಗೆ ಸಹಕಾರ ಕೋರಿ ಬರುವ ಸಂಘಸoಸ್ಥೆಗಳನ್ನು ಬೆಂಬಲಿಸುವ ಕಾರ್ಯ ಮಾಡುತ್ತಿದ್ದೇನೆ. ಯಕ್ಷಗಾನ ಉಳಿಸುವುದು ಕೇವಲ ಅಕಾಡೆಮಿಯ ಕೆಲಸವಲ್ಲ, ಯಕ್ಷಗಾನದಲ್ಲಿ ತೊಡಗಿಸಿಕೊಂಡಿರುವ ಸಂಘ ಸಂಸ್ಥೆಗಳು ಅಕಾಡೆಮಿ ಜೊತೆಗೆ ಕೈ ಜೋಡಿಸಬೇಕು ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಸೋಮವಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದಲ್ಲಿ ಸುಮನಸಾ […]
ಉಡುಪಿ: ಜುವೆಲ್ಲರಿ ವರ್ಕ್ಶಾಪ್ ಗೆ ನುಗ್ಗಿ ಅಪಾರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ; ಸಿಸಿಟಿವಿಯಲ್ಲಿ ಬಯಲಾಯಿತು ಕಳ್ಳರ ಕೃತ್ಯ

ಉಡುಪಿ: ಉಡುಪಿ ನಗರದ ಚಿತ್ತರಂಜನ್ ಸರ್ಕಲ್ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್ಶಾಪ್ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದನ್ನು ಕಳ್ಳತನಗೈದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವರ್ಕ್ಶಾಪ್ನ ಒಳಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ಈ ಕೃತ್ಯದಲ್ಲಿ ಇಬ್ಬರು ಮುಸುಕುಧಾರಿಗಳು ಇರುವುದು ಕಂಡುಬಂದಿದೆ. ಅದರಲ್ಲಿ ಒಬ್ಬಾತ ಮೊದಲಿಗೆ ಒಳಗೆ ಬಂದು ಒಳಗಿನ ಎರಡು ಸಿಸಿಟಿವಿ ಕ್ಯಾಮೆರಾಗಳಿಗೆ ಸ್ಪ್ರೇ ಹಾಕಿ ದೃಶ್ಯ ಕಾಣದಂತೆ ಮಾಡಿರುವುದು ಸೆರೆಯಾಗಿದೆ. ಕಳ್ಳರು ಕಾರು ಮತ್ತು ಬೈಕಿನಲ್ಲಿ ಬಂದು […]