ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ವಿಭು ಭಕ್ರು ನೇಮಕ.

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆಯಾಗಿದ್ದಾರೆ. ನ್ಯಾ. ವಿಭು ಭಕ್ರು ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್ ಜೊತೆಗೆ ಹಲವಾರು ನ್ಯಾಯಮಂಡಳಿಗಳಲ್ಲಿ ಅಭ್ಯಾಸ ಮಾಡಿದ್ದಾರೆ. ಅವರು ಈ ವರ್ಷ ಜ.21 ರವರೆಗೆ ದೆಹಲಿ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು. ಕರ್ನಾಟಕ ಹೈಕೋರ್ಟ್‌ ಮಾತ್ರ ಅಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ ಹಾಗೂ ಪಾಟ್ನಾ ಹೈಕೋರ್ಟ್‌ಗಳಿಗೂ […]

ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ ವಿವಾದ: ಮೂರ್ತಿ ಕಂಚಿನದ್ದಲ್ಲ; ತನಿಖೆಯಿಂದ ಸಾಬೀತು

ಉಡುಪಿ: ಕಾರ್ಕಳ ತಾಲೂಕಿನ ಉಮ್ಮಿಕಲ್ ಬೆಟ್ಟದ ಪರಶು ರಾಮ್ ಥೀಮ್ ಪಾರ್ಕ್‌ನಲ್ಲಿ ಶಿಲ್ಪಿಕೃಷ್ಣ ನಾಯ್ಕ ಹಿತ್ತಾಳೆಯಿಂದ ಪರಶು ರಾಮ ಮೂರ್ತಿ ನಿರ್ಮಿಸಿರುವುದೇ ಹೊರತು ಕಂಚಿನಿಂದ ಅಲ್ಲ ಎಂಬುದು ತಜ್ಞರ ಪರಿಶೀಲನಾ ವರದಿ ಹಾಗೂ ತನಿಖೆಯಿಂದ ಸಾಬೀತಾಗಿದೆ. ಶಿಲ್ಪಿ ಕೃಷ್ಣ ನಾಯಕ್ ಕ್ರಿಶ್ ಆರ್ಟ್ ವರ್ಲ್ಡ್ ಎಂಬ ಸಂಸ್ಥೆಯ ಮೂಲಕ ಪರಶುರಾಮ್ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದು ಕೊಂಡು ಕಾಮಗಾರಿ ನಡೆಸುತ್ತಿದ್ದು, ನಂತರ ಕೃಷ್ಣ ನಾಯ್ಕ ಕಂಚಿನ ಮೂರ್ತಿಯನ್ನು […]

ಉಡುಪಿ ಬಾಲ ಮಂದಿರದ ಇಬ್ಬರು ಮಕ್ಕಳು ನಾಪತ್ತೆ

ಉಡುಪಿ: ಉಡುಪಿ ಸರಕಾರಿ ಬಾಲಕರ ಬಾಲ ಮಂದಿರದಿಂದ ಇಬ್ಬರು ಬಾಲಕರು ಓಡಿ ಹೋಗಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಕನಕನಗರದ ದಿಲೀಪ್ (14) ಹಾಗೂ ಬೆಂಗಳೂರು ರಾಜೇಶ್ವರಿ ನಗರದ ಧನರಾಜ್(13) ನಾಪತ್ತೆಯಾದ ಬಾಲಕರು. ಇವರು ಜು.7ರಂದು ಉಡುಪಿ ಸರಕಾರಿ ಬಾಲಕರ ಬಾಲ ಮಂದಿರಕ್ಕೆ ಸ್ವಾಗತ ಕೇಂದ್ರದ ಮೂಲಕ ದಾಖಲಾಗಿದ್ದು, ಜು.13ರಂದು ಮಧ್ಯಾಹ್ನ ಇವರಿಬ್ಬರು ಸಂಸ್ಥೆಯ ಕಾರಿಡರ್‌ನ ಬಾಗಿಲಿನಿಂದ ಓಡಿ ಹೋಗಿರುವುದಾಗಿ ಮಂದಿರದ ಗೃಹಪಾಲಕ ಪ್ರಮೋದ್ ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಡುಬಿದಿರೆ:ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆ ಉದ್ಘಾಟನೆ

ಮೂಡುಬಿದಿರೆ: ಆರೋಗ್ಯ ಕ್ಷೇತ್ರದಲ್ಲಿ ಮಾನಸಿಕ ರೋಗಗಳ ಚಿಕಿತ್ಸೆಯ ವೈದ್ಯರು ಹಾಗೂ ವ್ಯಸನಮುಕ್ತ ಕೇಂದ್ರಗಳ ಅಗತ್ಯ ಬಹಳಷ್ಟಿದೆ. ನಮ್ಮ ದೇಶದಲ್ಲಿನ ಪ್ರತೀ ಜಿಲ್ಲೆಯಲ್ಲಿ 2 ಲಕ್ಷ ಜನ ಮದ್ಯವ್ಯಸನದ ಸಮಸ್ಯೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಬಳಲುತ್ತಿದ್ದಾರೆ. ಆದರೆ ಈ ಸಮಸ್ಯೆಯನ್ನು ಪರಿಹರಿಸಲು ಸೂಕ್ತ ವ್ಯವಸ್ಥೆ ನಮ್ಮಲ್ಲಿಲ್ಲ ಎಂದು ಉಡುಪಿಯ ಡಾ ಎವಿ ಬಾಳಿಗಾ ಆಸ್ಪತ್ರೆಯ ನಿರ್ದೇಶಕ ಡಾ ಪಿವಿ ಭಂಡಾರಿ ನುಡಿದರು. ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯಿAದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ […]

ಮೂಡುಬಿದಿರೆ:ಶಿಕ್ಷಕ -ಪಾಲಕ -ವಿದ್ಯಾರ್ಥಿಗಳ ಸಭೆ -2025

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ೨೦೨೫ರ ಶೈಕ್ಷಣಿಕ ಸಾಲಿನ ಸ್ಥಳೀಯ ವಿದ್ಯಾರ್ಥಿಗಳ ಶಿಕ್ಷಕ-ಪಾಲಕ-ವಿದ್ಯಾರ್ಥಿಗಳ ಪ್ರಥಮ ಸಭೆಯನ್ನು ವಿ.ಎಸ್. ಆಚಾರ್ಯ ವೇದಿಕೆಯಲ್ಲಿ ಆಯೋಜಿಸಲಾಗಿತ್ತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ. ಇದು ಅವರ ಮುಂದಿನ ಉನ್ನತ ಶಿಕ್ಷಣ ಹಾಗೂ ವೃತ್ತಿಜೀವನದ ದಿಕ್ಕನ್ನು ತೀರ್ಮಾನಿಸುತ್ತದೆ. ಈ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ ಕ್ಷೇತ್ರವನ್ನು ಗುರುತಿಸಿ, ಗುರಿ ಮುಟ್ಟುವೆಡೆಗೆ ಶ್ರಮಿಸಬೇಕು. ಈ ಪ್ರಯಾಣದಲ್ಲಿ ವಿದ್ಯಾರ್ಥಿಗಳೊಂದಿಗೆ […]