ಮಂಗಳೂರು:ಜು.20ರಂದು ಪುರಭವನದಲ್ಲಿ ‘ಬೋಲಾವ ವಿಠಲ’:ಪಂಚಮ್ ನಿಶಾದ್ ಮತ್ತು ಸಂಗೀತ ಭಾರತಿ ಪ್ರತಿಷ್ಠಾನ ಪ್ರಸ್ತುತಿ

ಮಂಗಳೂರು: ಸಂಗೀತ ಭಾರತಿ ಪ್ರತಿಷ್ಠಾನವುಮುಂಬಯಿನ ಪಂಚಮ ನಿಶಾದ್‌ನ ಸಹಯೋಗದೊಂದಿಗೆ`ಬೋಲಾವ ವಿಠಲ ಎಂಬ ಸಂಗೀತ ಕಾರ‍್ಯಕ್ರಮವನ್ನು ಜುಲೈ20 ರಂದು ಸಂಜೆ 5 ರಿಂದ ಮಂಗಳೂರಿನ ಪುರಭವನದಲ್ಲಿಆಯೋಜಿಸಿದೆ. ಹಿರಿಯ ಸಂಗೀತ ದಿಗ್ಗಜ ಕಲಾವಿದ ಸಂಜಯ್ ಅಭ್ಯಂಕರ್ಹಾಗೂ ಶರಯೂ ದಾತೆ ಅವರಿಂದ ಅಭಂಗ ರೂಪದಲ್ಲಿಹಾಡುಗಾರಿಕೆ ನಡೆಯಲಿದೆ. ತಬ್ಲಾದಲ್ಲಿ ಪ್ರಸಾದ್ ಪಾದ್ಯೆ,ಪಕ್‌ವಾಜ್‌ನಲ್ಲಿ ಸುಖದ್ ಮುಂಡೆ, ರಿದಂನಲ್ಲಿ ಸೂರ್ಯಕಾಂತ್ಸುರ್ವೆ, ಹಾರ್ಮೋನಿಯಂನಲ್ಲಿ ಅಭಿಷೇಕ್ ಶಿಂಕರ್, ಕೊಳಲಿನಲ್ಲಿ ಶಡಜ್ ಗೋಡ್ಕಿಂಡಿ ಸಾಥ್ ನೀಡಲಿದ್ದಾರೆ ಎಂದು ಸಂಗೀತ ಭಾರತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರೊ.ನರೇಂದ್ರ ಎಲ್.ನಾಯಕ್ ತಿಳಿಸಿದ್ದಾರೆ. ದೇಶ ವಿದೇಶದ […]

ಉಡುಪಿ ಕಲಾಕ್ಷೇತ್ರ : ಯಕ್ಷಗಾನ ತರಗತಿ ಉದ್ಘಾಟನೆ

ಉಡುಪಿ:ಉಡುಪಿ ಗುಂಡಿಬೈಲು ಯಕ್ಷಗಾನ ಕಲಾಕ್ಷೇತ್ರದ 2025-26 ನೇ ಸಾಲಿನ ಯಕ್ಷಗಾನ ತರಗತಿಯನ್ನು ಅಧ್ಯಕ್ಷ ಕೇಶವಮೂರ್ತಿ ಬೆಲ್ಪತ್ರೆ ಉದ್ಘಾಟಿಸಿ ಅಮೃತ ಮಹೋತ್ಸವ ವರ್ಷದ ಈ ಕಾಲಘಟ್ಟದಲ್ಲಿ ಸಂಘ ಸ್ಥಾಪನೆ ಮಾಡಿದ ಹಿರಿಯರು ಕಂಡ ಕನಸನ್ನು ನನಸಾಗಿಸುವ ಕಾರ್ಯ ನಮ್ಮಿಂದ ಆಗಬೇಕಿದೆ. ಯಕ್ಷಗಾನ ಕಲೆಯ ಶಿಕ್ಷಣ ವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಮ್ಮ ಮುಂದಿದೆ. ನಾವು ಸಂಘದ ವಿನಮ್ರ ಸೇವಕರಾಗಿ ಅದನ್ನು ಮುಂದುವರೆಸಿ ಕೊಂಡು ಬಂದಿದ್ದೇವೆ ಎಂದು ಹೇಳಿ ವಿದ್ಯಾರ್ಥಿಗಳು ಈ ತರಗತಿ ಗಳಿಂದ ಉತ್ತಮ ಕಲಾವಿದರಾಗಿ ಸಂಘಕ್ಕೆ […]

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಚಿವ ರಾಮಲಿಂಗ ರೆಡ್ಡಿ ಭೇಟಿ

ಉಡುಪಿ: ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ […]

ಉಡುಪಿ: ಶೀರೂರು ಪರ್ಯಾಯ; ಕಟ್ಟಿಗೆ ಮುಹೂರ್ತ ಸಂಪನ್ನ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯ ಮಹೋತ್ಸವದಲ್ಲಿ ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿಯಾಗಿ “ಕಟ್ಟಿಗೆ ಮುಹೂರ್ತವು” ಶ್ರೀಕೃಷ್ಣ ಮಠದ ಪರಿಸರದಲ್ಲಿ ಇಂದು ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರೊಂದಿಗೆ ಪ್ರಸ್ತುತ ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗು ಕಿರಿಯ ಯತಿ ಸುಶೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಶ್ರೀರೂರು ಮಠದ ದಿವಾನರಾದ ಡಾ.ಉದಯಕುಮಾರ ಸರಳತ್ತಾಯರು ನೇತೃತ್ವದಲ್ಲಿ ಪುರೋಹಿತರಾದ ಗಿರಿರಾಜ ಉಪಾಧ್ಯಾಯರು ಶ್ರೀರೂರು […]

ಹೆಬ್ರಿ ಎಸ್.ಆರ್. ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ.

ಹೆಬ್ರಿ: ಸ್ಟೆಮ್ ರೋಬೋ ಅವರು ಆಯೋಜಿಸಿದ ಸ್ಟೀಮ್ ಇನ್ನೋವೇಶನ್ ಲೀಗ್ ಎಂಬ ವಿಶ್ವದ ಬೃಹತ್ ಎಐ ಮತ್ತು ರೋಬೋಟಿಕ್ಸ್ ಕಾಂಪಿಟೇಶನ್ ಫೋಕಸ್ ಅರೌಂಡ್ ಇನ್ನೋವೇಶನ್ ಎಂಬ ಸ್ಪರ್ಧೆಯಲ್ಲಿ ಎಸ್.ಆರ್ ಪಬ್ಲಿಕ್ ಸ್ಕೂಲಿನ ವಿನೀಶ್ ಆಚಾರ್ಯ, ಆಕರ್ಷ್ ಎ ಶೆಟ್ಟಿ, ಆರುಷ್ ಶೆಟ್ಟಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ ಶೆಟ್ಟಿ ಹಾಗೂ ಕಾರ್ಯದರ್ಶಿಯಾದ ಸಪ್ನಾ ಎನ್ ಶೆಟ್ಟಿ ಅಭಿನಂದಿಸಿದ್ದಾರೆ.