ಮಂಗಳೂರು: ಒಳ ಉಡುಪಿನಲ್ಲಿಟ್ಟು 1.69 ಕೋಟಿ ರೂ ಮೌಲ್ಯದ ವಜ್ರ ಅಕ್ರಮ ಸಾಗಾಟ ಯತ್ನ; ವ್ಯಕ್ತಿ ಸೆರೆ

ಮಂಗಳೂರು: ದಿನಂಪ್ರತಿ ಅಕ್ರಮ ಚಿನ್ನ ಸಾಗಾಟದ ಘಟನೆಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುತ್ತವೆ. ಆದರೀಗ ವ್ಯಕ್ತಿಯೋರ್ವ ತನ್ನ ಒಳ ಉಡುಪಿನಲ್ಲಿ ಕೋಟ್ಯಾಂತರ ರೂ. ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69 ಕೋಟಿ ರೂ.ಮೌಲ್ಯದ ವಜ್ರದ ಹರಳುಗಳನ್ನು ಜಪ್ತಿ ಮಾಡಲಾಗಿದೆ. ಮೇ 25ರಂದು ದುಬೈಗೆ ತೆರಳಬೇಕಿದ್ದ ವ್ಯಕ್ತಿಯೋರ್ವ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದು, ಆತನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು […]

ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ರೋಗಿಗಳಿಂದ ಪ್ರತಿಭಟನೆ: ಶಾಸಕರಿಂದ ಸ್ಪಂದನೆ

ಉಡುಪಿ: ಸೋಮವಾರದಂದು ಜಿಲ್ಲಾಸ್ಪತೆಯ ವಠಾರದಲ್ಲಿ ಡಯಾಲಿಸ್ ಸಮಸ್ಯೆ ಸರಿಪಡಿಸುವಂತೆ ಕೋರಿ ರೋಗಿಗಳಿಂದ ಪ್ರತಿಭಟನೆ ನಡೆಯಿತು. ಆಸ್ಪತ್ರೆಯ ವಠಾರದಲ್ಲಿ ಜಮಾಯಿಸಿದ ರೋಗಿಗಳು ಸಮಸ್ಯೆಯನ್ನು ಸರಿಪಡಿಸುವಂತೆ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ವಿಷಯ ತಿಳಿದ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಕಾಂಗ್ರೆಸ್ ಮುಖಂಡ ಕೆ ಕೃಷ್ಣಮೂರ್ತಿ ಆಚಾರ್ಯ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಶೀಘ್ರವೇ ಪರಿಹರಿಸುವುದಾಗಿ ರೋಗಿಗಳಿಗೆ ಭರವಸೆ ನೀಡಿದರು. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ […]

ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ […]

ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕುವವರ ವಿರುದ್ದ ಕಠಿಣ ಕ್ರಮ: ಅಕ್ಷಯ್ ಮಚ್ಚೀಂದ್ರ

ಉಡುಪಿ: ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 33 ಕಾರುಗಳ ಟಿಂಟ್ ಗ್ಲಾಸ್ ಗಳನ್ನು ಮತ್ತು 21 ವಾಹನಗಳ ಕರ್ಕಶ ಹಾರ್ನ್ ಗಳನ್ನು ತೆರವುಗೊಳಿಸಿದರು. ಟಿಂಟ್ ಗ್ಲಾಸ್ ಮತ್ತು ಕರ್ಕಶ ಹಾರ್ನ್ ಹಾಕಿದವರು ಕೂಡಲೆ ತೆರವುಗೊಳಿಸಬೇಕು ಇಲ್ಲವಾದಲ್ಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ. ಅಲ್ಲದೆ, ದ್ವಿಚಕ್ರ ವಾಹನಗಳಲ್ಲಿ ಡಿಫೆಕ್ಟಿವ್ ಸೈಲೆನ್ಸರ್ ಗಳನ್ನು ಅಳವಡಿಸಿ ಕರ್ಕಶ ಶಬ್ದ ಮಾಡಿ […]

ಐಪಿಎಲ್ ಫೈನಲ್: ಮೀಸಲು ದಿನ ಕೂಡ ಮಳೆ ಬಂದರೆ ಯಾರಾಗುವರು ಚಾಂಪಿಯನ್ ?

ಅಹಮದಾಬಾದ್: 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಫೈನಲ್ ಪಂದ್ಯವನ್ನು ಮಳೆ ಹಿನ್ನೆಲೆ ಮೀಸಲು ದಿನವಾದ ಸೋಮವಾರಕ್ಕೆ ಮುಂದೂಡಲಾಗಿದೆ. ನಿನ್ನೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸುರಿದ ಮಳೆಯಿಂದಾಗಿ ಟಾಸ್ ಪ್ರಕ್ರಿಯೆ ಕೂಡ ನಡೆಸಲಾಗಿಲ್ಲ. ಇದರಿಂದಾಗಿ ರೋಚಕ ಕಾದಾಟ ವೀಕ್ಷಿಸಲು ಬಂದಿದ್ದ 1,32,000ಕ್ಕು ಮಿಕ್ಕಿ ಪ್ರೇಕ್ಷಕರು ನಿರಾಸೆ ಅನುಭವಿಸಿದ್ದಾರೆ. ಭಾನುವಾರ ರಾತ್ರಿ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಬೇಕಿತ್ತು. ಆದರೆ ಸಂಜೆ 6.30ರ ವೇಳೆಗೆ ಮಳೆ […]