ಹೇರ್ ಫಾಲ್ ಸಮಸ್ಯೆಗೆ ಶಾಂಪೂ ಬದಲಿಸಬೇಕಂತಿಲ್ಲ; ಈ 5 ಆಹಾರಗಳು ನಿಮ್ಮ ಡಯಟ್ ನಲ್ಲಿ ಇರಲಿ!

ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವಿಕೆ ಸಮಸ್ಯೆ ಸಾಮಾನ್ಯವಾಗಿದೆ. ಜೀವನಶೈಲಿ, ಒತ್ತಡ, ಹಾರ್ಮೋನು ಬದಲಾವಣೆಗಳು ಮತ್ತು ಪೌಷ್ಟಿಕಾಂಶದ ಕೊರತೆ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ವಿಶೇಷವಾಗಿ ದೇಹದಲ್ಲಿ ಒಮೆಗಾ-3 ಕೊರತೆಯಿದ್ದರೆ ಕೂದಲು ದುರ್ಬಲವಾಗಿ ಉದುರುವಿಕೆ ಹೆಚ್ಚಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಒಮೆಗಾ-3 ದೇಹಕ್ಕೆ ಅತ್ಯಗತ್ಯವಾದ ಪೋಷಕಾಂಶವಾಗಿದ್ದು, ಇದು ಕೂದಲು, ಚರ್ಮ, ಹೃದಯ ಮತ್ತು ಮೆದುಳಿನ ಆರೋಗ್ಯಕ್ಕೆ ಸಹಕಾರಿ. ಆದರೆ ದೇಹವೇ ಇದನ್ನು ಉತ್ಪತ್ತಿ ಮಾಡಲಾರದು. ಆದ್ದರಿಂದ ಆಹಾರದ ಮೂಲಕವೇ ಪಡೆಯಬೇಕು. ಒಮೆಗಾ-3 ಕೊರತೆಯಿಂದ ಏನಾಗುತ್ತದೆ? ಒಮೆಗಾ-3 ಕೊರತೆಯಿದ್ದರೆ ನೆತ್ತಿಯಲ್ಲಿ […]

ಗಂಡ/ ಹೆಂಡತಿ ಒಬ್ಬರನ್ನೊಬ್ಬರು ಹೆಚ್ಚು ಪ್ರೀತಿಸಲು ಸಿಂಪಲ್ ಸೂತ್ರ ಇಲ್ಲಿದೆ

ಗಂಡ-ಹೆಂಡತಿ ನಡುವಿನ ಪ್ರೀತಿ ಮತ್ತು ಆತ್ಮೀಯತೆ ಹೆಚ್ಚಲು ದೊಡ್ಡ ರಹಸ್ಯಗಳ ಅಗತ್ಯವಿಲ್ಲ. ಪ್ರತಿದಿನದ ಸಣ್ಣ ಸಣ್ಣ ನಡೆಗಳು ಸಂಬಂಧವನ್ನು ಗಟ್ಟಿಗೊಳಿಸುತ್ತವೆ. ಪ್ರೀತಿ ಹೆಚ್ಚಿಸಲು ಸರಳ ಮಾರ್ಗಗಳು ಮುಖ್ಯ ಮಂತ್ರ ನಂಬಿಕೆ + ಗೌರವ + ಸಂವಹನ + ಸಮಯ = ದೀರ್ಘಕಾಲದ ಸಂತೋಷದ ದಾಂಪತ್ಯ ಪ್ರೀತಿ ಒಂದೇ ದಿನದಲ್ಲಿ ಹೆಚ್ಚಾಗುವುದಿಲ್ಲ. ಪ್ರತಿದಿನದ ಸಣ್ಣ ಸಣ್ಣ ಕಾಳಜಿಗಳು ಪ್ರೀತಿಯನ್ನು ಗಟ್ಟಿಗೊಳಿಸುತ್ತವೆ.

ಟೊಮೆಟೊ ಬೇಗ ಹಾಳಾಗುತ್ತಿದೆಯೇ? ಹೀಗೆ ಮಾಡಿದರೆ ವಾರಗಟ್ಟಲೇ ಫ್ರೆಶ್ ಆಗಿರುತ್ತದೆ!

ಎಲ್ಲರ ಮನೆಗಳಲ್ಲೂ ಟೊಮ್ಯಾಟೋ ಒಂಥರಾ ಆಪದ್ಭಾಂಧವ ಇದ್ದ ಹಾಗೆ. ಬೇರೆ ಯಾವುದೇ ತರಕಾರಿ ಇಲ್ಲದಿದ್ದರೂ ತೊಂದರೆ ಇಲ್ಲ ಟೊಮ್ಯಾಟೋ ಒಂದಿದ್ದರೆ ದಿಢೀರ್ ಅಡುಗೆ ತಯಾರಿಸಬಹುದು. ಹಾಗಾಗೇ ಪ್ರತಿಯೊಬ್ಬರ ಮನೆಯ ಅಡುಗೆಯಲ್ಲೂ ಟೊಮೆಟೊ ಪ್ರಮುಖ ಸ್ಥಾನ ಪಡೆದಿದೆ. ಸಾಂಬಾರ್, ದಾಲ್, ಕರಿ ಸೇರಿದಂತೆ ಬಹುತೇಕ ಎಲ್ಲಾ ಆಹಾರ ಪದಾರ್ಥಗಳ ರುಚಿಯನ್ನು ಹೆಚ್ಚಿಸುವ ಟೊಮೆಟೊ ಇಲ್ಲದೆ ಅಡುಗೆ ಪೂರ್ಣವಾಗುವುದೇ ಇಲ್ಲ. ಆದರೆ ಗೃಹಿಣಿಯರಿಗೆ ಟೊಮ್ಯಾಟೋ ಕೊಳೆತು ಹೋಗದಂತೆ ವಾರಗಟ್ಟಲೇ ಸಂರಕ್ಷಿಸಿಟ್ಟಿಕೊಳ್ಳುವುದೇ ಒಂದು ದೊಡ್ಡ ತಲೆಬಿಸಿ. ಟೊಮೆಟೊದಲ್ಲಿ ಆರೋಗ್ಯಕ್ಕೆ ಅಗತ್ಯವಾದ ಅನೇಕ […]

ಕೃಷಿ ಭೂಮಿಯಲ್ಲಿ ಮನೆ ಕಟ್ಟೋ ಪ್ಲಾನ್ ನಿಮಗಿದ್ಯಾ? ಹಾಗಾದ್ರೆ ಈ ನಿಯಮ ನಿಮಗೆ ತಿಳಿದಿರ್ಲೇಬೇಕು

ಒಂದು ಸಣ್ಣದಾದರೂ ತೋಟ, ಜಮೀನು ಖರೀದಿಸುವುದು, ಅಲ್ಲೊಂದು ಪುಟ್ಟದಾದರೂ ಮನೆ ಕಟ್ಟಿ ನೆಮ್ಮದಿಯಿಂದ ಜೀವನ ನಡೆಸೋದು ಪ್ರತಿಯೊಬ್ಬರ ಕನಸು. ಭೂಮಿ ಖರೀದಿ ಅಥವಾ ಮನೆ ನಿರ್ಮಾಣ ಮಾಡುವ ಮುನ್ನ ಬಹುತೇಕ ಜನರಿಗೆ ಎದುರಾಗುವ ಸಾಮಾನ್ಯ ಪ್ರಶ್ನೆಗಳಲ್ಲಿಕೃಷಿ ಭೂಮಿಯಲ್ಲಿ ಮನೆ ಕಟ್ಟಬಹುದೇ? ಎಂಬುದೂ ಒಂದು. ಇದರ ಉತ್ತರ ಸರಳವಾಗಿಲ್ಲ. ಕೆಲವು ಕಾನೂನು ಕ್ರಮಗಳನ್ನು ಪಾಲಿಸಿದರೆ ಮಾತ್ರ ಮನೆ ನಿರ್ಮಾಣ ಸಾಧ್ಯ. ಕೃಷಿ ಭೂಮಿ ಎಂದರೇನು? ಕೃಷಿ ಭೂಮಿ ಎಂದರೆ ಬೆಳೆ ಬೆಳೆಸಲು, ಹಣ್ಣು-ತರಕಾರಿಗಳು ಬೆಳೆಯಲು, ಹೈನುಗಾರಿಕೆ ಅಥವಾ ಕೋಳಿ […]

ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ?  ನಿಮ್ಹಾನ್ಸ್ ತಯಾರಿಸಿರುವ “ಮೈಂಡ್‌ ನೋಟ್‌” ಆಪ್  ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್‌ ನೋಟ್‌’ ಆಪ್‌ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್‌ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್‌ ನೋಟ್‌’ ಆಪ್‌ ಬಳಕೆದಾರರಿಗೆ ಪ್ರಶ್ನಾವಳಿ, […]