ಜೈಲಿನಲ್ಲಿ ಯೋಗ ಮಾಡಿದ ದರ್ಶನ್, ವೈರಲ್ ಆಯ್ತು ಫೋಟೋ!

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗಾಗಿ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ಮತ್ತು ಪವಿತ್ರ ಗೌಡ ಭಾಗವಹಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜೈಲಿನ ಎಲ್ಲಾ ಕೈದಿಗಳಿಗಾಗಿ ಸಾಮೂಹಿಕ ಯೋಗಾಭ್ಯಾಸ ಹಮ್ಮಿಕೊಳ್ಳಲಾಗಿತ್ತು. ಬೆನ್ನು ನೋವಿನ ಸಮಸ್ಯೆ ಇದೆ ಎಂದು ತಿಳಿಸಿದ್ದ ನಟ ದರ್ಶನ್ ಆರಂಭದಲ್ಲಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿಂದೇಟು ಹಾಕಿದ್ದರು ಎನ್ನಲಾಗಿದೆ. ಬಳಿಕ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿ […]

ತೆರೆಗೆ ಬರುತ್ತಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನಗಾಥೆ, ಅಮೀರ್ ಖಾನ್ ನಿರ್ಮಾಣದಲ್ಲಿ ಮೂಡಿಬರಲಿದೆ ರಾಷ್ಟ್ರಪತಿ ಸಾಕ್ಷ್ಯಚಿತ್ರ!

ಭಾರತದ ಮೊದಲ ಆದಿವಾಸಿ ಮಹಿಳಾ ರಾಷ್ಟ್ರಪತಿಯಾದ ದ್ರೌಪದಿ ಮುರ್ಮು Droupadi Murmu ಅವರ ಜೀವನ ಪಯಣ ಇದೀಗ ಸಾಕ್ಷ್ಯಚಿತ್ರವಾಗಿ ಮೂಡಿಬರಲಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಖ್ಯಾತ ಬಾಲಿವುಡ್ ನಟ ಅಮೀರ್ ಖಾನ್ Aamir Khan ನಿರ್ಮಿಸಲಿದ್ದಾರೆ. ಆಮೀರ್ ಖಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಸಾಕ್ಷ್ಯಚಿತ್ರಕ್ಕೆ ಲೇಖಕಿ ಹಾಗೂ ನಿರ್ದೇಶಕಿ ಸ್ವಾತಿ ಚಕ್ರವರ್ತಿ ಭಟ್ಕಲ್ ನಿರ್ದೇಶನ ಮಾಡಲಿದ್ದಾರೆ. ಒಡಿಶಾದ ಒಂದು ಸಣ್ಣ ಹಳ್ಳಿಯಲ್ಲಿ ಬೆಳೆದ ಬಾಲಕಿಯೊಬ್ಬಳು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ […]

ಬದಲಾಯ್ತು ಸೋನು ನಿಗಂ ಮೋಹಕ ಧ್ವನಿ: ಅಷ್ಟಕ್ಕೂ ಮಳೆ ಹಾಡಿನ ಈ ಮೆಲೊಡಿ ಗಾಯಕನಿಗೆ ಕಾಡುತ್ತಿರುವ ಸಮಸ್ಯೆ ಏನು?

ನವದೆಹಲಿ: ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾ ಹಾಡುಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿರುವ ಖ್ಯಾತ ಗಾಯಕ ಸೋನು ನಿಗಂ ತಮ್ಮ ಆರೋಗ್ಯದ ಕುರಿತು ಆತಂಕಕಾರಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನರಗಳಿಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿರುವುದಾಗಿ, ಈ ಸಮಸ್ಯೆಯಿಂದ ಸ್ವರವೂ ಬದಲಾಗಿರುವುದಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಮೂಲಕ ತಿಳಿಸಿದ್ದು, ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ. ಕಳೆದ ಒಂದು ವಾರದಿಂದ ತಾವು ತೀವ್ರವಾದ ನರ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದು, ಎಂಆರ್‌ಐ (MRI) ಹಾಗೂ ಸಿಟಿ ಸ್ಕ್ಯಾನ್ (CT Scan) ಸೇರಿದಂತೆ […]

ನಟಿ ಅನುಷ್ಕಾ ಶರ್ಮ ಧರಿಸಿದ್ದ ತುಳಸಿ ಕಂಠಿ ಮಾಲೆಗೆ ಈಗ ಭಾರೀ ಡಿಮ್ಯಾಂಡ್, ಅಷ್ಟಕ್ಕೂ ಬಾಲಿವುಡ್ ಬೆಡಗಿಯ ಈ ತುಳಸೀಮಾಲೆಯಲ್ಲಿ ಅಂತದ್ದೇನಿದೆ?

ಮುಂಬೈ: ನಟಿ ಅನುಷ್ಕಾ ಶರ್ಮ ಧರಿಸಿದ್ದ ತುಳಸಿ ಕಂಠಿ ಮಾಲೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅದರ ಪರಿಣಾಮವಾಗಿ ವಿವಿಧ ಬ್ರ್ಯಾಂಡ್‌ಗಳ ತುಳಸಿ ಮಾಲೆಗಳ ಬೇಡಿಕೆ ಮತ್ತು ಮಾರಾಟದಲ್ಲೂ ಗಮನಾರ್ಹ ಏರಿಕೆ ಕಂಡುಬಂದಿದೆ. ಇತ್ತೀಚೆಗೆ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಅನುಷ್ಕಾ ಶರ್ಮಾ ಧರಿಸಿದ್ದ ಗಾಢ ಬಣ್ಣದ ತುಳಸಿ ಕಂಠಿ ಮಾಲೆ ಅಭಿಮಾನಿಗಳ ಗಮನ ಸೆಳೆದಿತ್ತು. ಪಂದ್ಯ ಪ್ರಸಾರದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಲೆಯ ಕುರಿತು ವ್ಯಾಪಕ ಚರ್ಚೆ ಆರಂಭವಾಗಿದ್ದು, ಅನೇಕರು ಅದೇ […]

ವೈರಲ್ ಆಯ್ತು ದರ್ಶನ್ ಲೈವ್ ವಿಡಿಯೋ: ಅಭಿಮಾನಿಗಳ ಬಗ್ಗೆ ನಟನ ಭಾವನಾತ್ಮಕ ಮಾತುಗಳು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿರುವ ನಟ ದರ್ಶನ್ Darshan ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದೆ. ಜೈಲು ಸೇರಿ ಒಂದು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೂ ದರ್ಶನ್ ಅವರ ಅಭಿಮಾನಿಗಳ ಬೆಂಬಲ ಕಡಿಮೆಯಾಗದಿರುವುದು ವಿಶೇಷವಾಗಿದೆ. ಮತ್ತೆ ವೈರಲ್ ಆಗಿರುವ ಹಳೆಯ ವಿಡಿಯೋದಲ್ಲಿ ದರ್ಶನ್ ತಮ್ಮ ಅಭಿಮಾನಿಗಳ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದು, ತಮ್ಮ ಮೇಲೆ ಪ್ರೀತಿ ಮತ್ತು ಬೆಂಬಲ ತೋರಿದ ಪ್ರತಿಯೊಬ್ಬ ಅಭಿಮಾನಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಅಭಿಮಾನಿಗಳ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಅವರು […]