ದರ್ಶನ್‌ಗೆ ಮತ್ತೆ ಕೋರ್ಟ್‌ನಲ್ಲಿ ಹಿನ್ನಡೆ: ಖುದ್ದು ಹಾಜರಾತಿ ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನಡೆಯಾಗಿದೆ. ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸುಜಾತ ಎಂ. ಸಾಂಬ್ರಾಣಿ ಅವರು ಪ್ರಾಸಿಕ್ಯೂಷನ್ ವಾದವನ್ನು ಪುರಸ್ಕರಿಸಿ, ದರ್ಶನ್ ಅವರು ವಿಡಿಯೋ ಕಾನ್ಫರೆನ್ಸ್ (ವಿಸಿ) ಮೂಲಕವೇ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದರೆ ಆಡಿಯೋ ಹಾಗೂ ವಿಡಿಯೋ ಗುಣಮಟ್ಟದ ಸಮಸ್ಯೆ ಉಂಟಾಗುವ ಸಾಧ್ಯತೆ […]

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆ ದಿನ ದರ್ಶನ್ ಮಾಡಿದ್ದೇನು? ನ್ಯಾಯಾಲಯದಲ್ಲಿ ದರ್ಶನ್ ಇನ್ನೊಂದು ಮುಖ ಬಯಲು ಮಾಡಿದ ಪ್ರದೋಷ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ಸಲ್ಲಿಸಿರುವ 11 ಪುಟಗಳ ಮಾಫಿ ಸಾಕ್ಷಿ (ಕ್ಷಮಾದಾನ) ಅರ್ಜಿ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿರುವ ಪ್ರದೋಷ್, ದರ್ಶನ್ ಪರಿಚಯವಾದ ದಿನದಿಂದ ಜೈಲು ಪಾಲಾಗುವವರೆಗಿನ ಘಟನೆಗಳನ್ನು ನ್ಯಾಯಾಲಯದ ಮುಂದೆ ವಿವರಿಸಿದ್ದಾನೆ. ಸಿಸಿಎಚ್-59 ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಪ್ರಕರಣದ ಹಲವು ಪ್ರಮುಖ ಸಂಗತಿಗಳನ್ನು ಪ್ರದೋಷ್ ಉಲ್ಲೇಖಿಸಿದ್ದಾನೆ. 2003ರಿಂದ ಜಯನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಸಂದರ್ಭ ದರ್ಶನ್ ಪರಿಚಯವಾಗಿತ್ತು ಎಂದು ಆತ […]

ನೆಟ್‌ಫ್ಲಿಕ್ಸ್‌ನಲ್ಲೂ ಧೂಳೆಬ್ಬಿಸಿದ ‘ಧುರಂಧರ್’ ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದು ದಾಖಲೆ ಬರೆದ ಸಿನಿಮಾ!

ಮುಂಬೈ : ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆದಿದ್ದ ‘ಧುರಂಧರ್’ (Dhurandhar) ಸಿನಿಮಾ ಇದೀಗ ಒಟಿಟಿಯಲ್ಲೂ ಹೊಸ ಇತಿಹಾಸ ನಿರ್ಮಿಸಿದೆ. ನಟ ರಣವೀರ್ ಸಿಂಗ್ ಅಭಿನಯದ ಈ ಚಿತ್ರವನ್ನು ವಿಶ್ವದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ಇಂಗ್ಲಿಷೇತರ ಸಿನಿಮಾ ಎಂದು ಟೆಡ್ ಸರಾಂಡೋಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರವು 2026ರ ಜನವರಿಯಿಂದ ಜೂನ್‌ವರೆಗೆ **Netflix**ನಲ್ಲಿ 3.7 ಕೋಟಿ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅಲ್ಲದೆ, 22 ದೇಶಗಳ ನೆಟ್‌ಫ್ಲಿಕ್ಸ್ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದು […]

ದೀಪಾವಳಿಗೆ ‘ರಾಮಾಯಣ’ಅಬ್ಬರ, ನವೆಂಬರ್ 6ಕ್ಕೆ ಸಿನಿಮಾ ಗ್ರ್ಯಾಂಡ್ ಲಾಂಚ್

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ನಿರ್ದೇಶಕ ನಿತೇಶ್ ತಿವಾರಿ ಅವರ ನಿರ್ದೇಶನದ ಈ ಬಹುಭಾಷಾ ಚಿತ್ರವು ಇದೇ ನವೆಂಬರ್ 6, 2026ರಂದು ದೀಪಾವಳಿ ಪ್ರಯುಕ್ತ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರವನ್ನು ನಮಿತ್ ಮಲ್ಹೋತ್ರಾ ನಿರ್ಮಿಸುತ್ತಿದ್ದು, Sony Pictures ತನ್ನ ಅಧಿಕೃತ ಎಕ್ಸ್ (X) ಖಾತೆಯ ಮೂಲಕ ಬಿಡುಗಡೆ ದಿನಾಂಕವನ್ನು ಪ್ರಕಟಿಸಿದೆ. ಇಂಗ್ಲಿಷ್ ಟ್ರೇಲರ್ ಬಿಡುಗಡೆ:ಈ ಹಿಂದೆ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ […]

ಬೀಯಿಂಗ್ ಹ್ಯೂಮನ್ ಆಭರಣ ವಂಚನೆ ಪ್ರಕರಣ: ಸಲ್ಮಾನ್ ಖಾನ್, ಸಹೋದರಿಗೆ ನ್ಯಾಯಾಲಯ ಸಮನ್ಸ್

ಚಂಡೀಗಢ: ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್‌ಗೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಅವರ ಸಹೋದರಿ ಅಲ್ವಿರಾ ಖಾನ್ ಅಗ್ನಿಹೋತ್ರಿ ಅವರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಜ್ಯುವೆಲ್ಲರಿ ಶೋರೂಮ್‌ಗೆ ಸಂಬಂಧಿಸಿದ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ, ಸಲ್ಮಾನ್ ಖಾನ್, ಅಲ್ವಿರಾ ಖಾನ್ ಅಗ್ನಿಹೋತ್ರಿ ಹಾಗೂ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕರಿಗೆ ಅಕ್ಟೋಬರ್ 5ರಂದು ನ್ಯಾಯಾಲಯಕ್ಕೆ ಹಾಜರಾಗಿ ಆರೋಪಗಳಿಗೆ […]