ಸೂರ್ಯೋದಯಕ್ಕೂ ಮೊದಲೇ ರಿಲೀಸಾಗಿ ಅಬ್ಬರಿಸಿತು ‘ರಾಮಾಯಣ’ ಟ್ರೈಲರ್,ರಾವಣನಾಗಿ ಯಶ್ ಅಬ್ಬರ, ಶ್ರೀರಾಮನಾಗಿ ರಣಬೀರ್ ಕಪೂರ್ ಮಿಂಚು

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಸಿನಿಮಾ ‘ರಾಮಾಯಣ’ ಚಿತ್ರದ ಮೊದಲ ಟ್ರೈಲರ್ ಇಂದು ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಯಾಗಿ ಸಿನಿಪ್ರಿಯರ ಮನಗೆದ್ದಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್, ಶ್ರೀರಾಮನಾಗಿ ರಣಬೀರ್ ಕಪೂರ್ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಪಡೆಯುತ್ತಿವೆ. ಆಸ್ಕರ್ ಪ್ರಶಸ್ತಿ ವಿಜೇತರಾದ ಹಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಅವರ ಸಂಗೀತ ಹಾಗೂ ಅದ್ಭುತ ವಿಎಫ್ಎಕ್ಸ್ ಚಿತ್ರದ ಪ್ರಮುಖ ಆಕರ್ಷಣೆಯಾಗಿದೆ. ನಿರ್ದೇಶಕ ನಿತೇಶ್ ತಿವಾರಿ ಹಾಗೂ ನಿರ್ಮಾಪಕ ನಮಿತ್ […]
ಬಿಡುಗಡೆಗೂ ಮೊದಲೇ ‘ಧುರಂಧರ್ 2’ ದಾಖಲೆ ಮುರಿದ ‘ರಾಮಾಯಣ’, ಮ್ಯೂಸಿಕ್ ಹಕ್ಕುಗಳಿಂದಲೇ ಭರ್ಜರಿ ದಾಖಲೆ!

ಭಾರತೀಯ ಸಿನಿರಂಗದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ ಬಿಡುಗಡೆಯಾಗುವ ಮುನ್ನವೇ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಭಾರಿ ತಾರಾಗಣ, ಅದ್ಧೂರಿ ನಿರ್ಮಾಣ ಹಾಗೂ ಸಾವಿರಾರು ಕೋಟಿ ರೂಪಾಯಿ ಬಜೆಟ್ನಿಂದಲೇ ಸುದ್ದಿಯಲ್ಲಿರುವ ಈ ಸಿನಿಮಾ, ಇದೀಗ ಸಂಗೀತ ಹಕ್ಕುಗಳ ಮಾರಾಟದಲ್ಲೂ ಬಾಲಿವುಡ್ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ರಣಬೀರ್ ಕಪೂರ್, ಯಶ್ ಮತ್ತು ಸನ್ನಿ ಡಿಯೋಲ್ ಅಭಿನಯದ ಈ ಸಿನಿಮಾ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಸುಮಾರು ₹4,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಸಿನಿಮಾ ಬಿಡುಗಡೆಯಾಗುವ ಮೊದಲುವೇ ಅದರ ವಿವಿಧ […]
ಮನೆಯಲ್ಲಿ ಸೊಳ್ಳೆ ಬತ್ತಿ ಹಚ್ಚೋ ಅಭ್ಯಾಸ ಇದ್ಯಾ? ಈ ಎಲ್ಲಾ ಸಮಸ್ಯೆಗಳಿಗೆ ಕಾರಣ ಆಗ್ಬೋದು ಎಚ್ಚರವಿರಲಿ

ಮಳೆಗಾಲ ಆರಂಭವಾಗುತ್ತಿದ್ದಂತೆ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆಗಳಿಂದ ತಪ್ಪಿಸಿಕೊಳ್ಳಲು ಅನೇಕರು ರಾತ್ರಿ ಮಲಗುವಾಗ ಸೊಳ್ಳೆ ಬತ್ತಿ ಹಚ್ಚುತ್ತಾರೆ. ಆದರೆ, ಸೊಳ್ಳೆ ಬತ್ತಿಯಿಂದ ಹೊರಬರುವ ಹೊಗೆಯನ್ನು ದೀರ್ಘಕಾಲ ಉಸಿರಾಡುವುದು ಆರೋಗ್ಯಕ್ಕೆ ಹಾನಿಕಾರಕವಾಗಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಸೊಳ್ಳೆಗಳನ್ನು ನಿಯಂತ್ರಿಸಲು ಬಳಸುವ ಸೊಳ್ಳೆ ಬತ್ತಿಗಳಲ್ಲಿ ವಿವಿಧ ರಾಸಾಯನಿಕ ಪದಾರ್ಥಗಳಿರುತ್ತವೆ. ಬತ್ತಿ ಉರಿಯುವಾಗ ಬಿಡುಗಡೆಯಾಗುವ ಹೊಗೆ ಮನೆಯೊಳಗೆ ಹರಡುತ್ತದೆ. ವಿಶೇಷವಾಗಿ ಬಾಗಿಲು, ಕಿಟಕಿಗಳನ್ನು ಮುಚ್ಚಿಕೊಂಡು ಸೊಳ್ಳೆ ಬತ್ತಿ ಹಚ್ಚಿ ಮಲಗಿದರೆ ಕೋಣೆಯೊಳಗೆ ಹೊಗೆ ಹೆಚ್ಚಾಗಿ ಸಂಗ್ರಹವಾಗುವ ಸಾಧ್ಯತೆಯಿದೆ. ಶ್ವಾಸಕೋಶಕ್ಕೆ ತೊಂದರೆ ಉಂಟಾಗಬಹುದು […]
ಕರಾವಳಿ ಚಿತ್ರದ ಮೇಕಿಂಗ್ ಔಟ್; ವಿಡಿಯೋ ಹಂಚಿಕೊಂಡ ರಾಗಿಣಿ ಪ್ರಜ್ವಲ್! ಲಿಂಕ್ ಇಲ್ಲಿದೆ

ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರದ ಮೇಕಿಂಗ್ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದ್ದು, ಇದನ್ನು ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಪ್ರಜ್ವಲ್ ಹಂಚಿಕೊಂಡಿದ್ದಾರೆ. ‘ಕರಾವಳಿ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರದ ಖದರ್ ಅನ್ನು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಅವರ ಕಮ್ಬ್ಯಾಕ್ ಚಿತ್ರ ಎಂಬ ಮಾತುಗಳೂ ಕೇಳಿಬಂದಿವೆ. ಚಿತ್ರದ ಪಾತ್ರಕ್ಕಾಗಿ ಪ್ರಜ್ವಲ್ ಅವರು ಸಾಕಷ್ಟು ಶ್ರಮವಹಿಸಿರುವುದು […]
‘ಟಾಕ್ಸಿಕ್’ ಹೊಸ ಪೋಸ್ಟರ್ ರಿಲೀಸ್, ರಕ್ತಸಿಕ್ತ ಲುಕ್ನಲ್ಲಿ ರಾಕಿಂಗ್ ಸ್ಟಾರ್ ಯಶ್,ರಿಲೀಸ್ ಗೆ ಒಂದು ತಿಂಗಳು ಇರುವಾಗಲೇ ಬಂತು ಥ್ರಿಲ್ಲಿಂಗ್ ಪೋಸ್ಟರ್

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಿಡುಗಡೆಗೆ ಕೌಂಟ್ಡೌನ್ ಆರಂಭವಾಗಿದೆ. ಚಿತ್ರ ಬಿಡುಗಡೆಯಾಗಲು ಕೇವಲ ಒಂದು ತಿಂಗಳು ಬಾಕಿ ಇರುವ ಸಂದರ್ಭದಲ್ಲಿ, ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಯಶ್ ಅವರ ಸ್ಟೈಲಿಷ್ ಹಾಗೂ ರಕ್ತಸಿಕ್ತ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ‘Begins with a Bang’ ಎಂಬ ಟ್ಯಾಗ್ಲೈನ್ನೊಂದಿಗೆ ಬಿಡುಗಡೆಯಾದ ಹೊಸ ಪೋಸ್ಟರ್ನಲ್ಲಿ ಯಶ್ ಅವರ ಕೈಗಳಲ್ಲಿ ರಕ್ತ ಮೆತ್ತಿಕೊಂಡಿದ್ದು, ಕೈಯಲ್ಲಿ ಸಿಗರೇಟ್ ಹಿಡಿದಿರುವ ವಿಭಿನ್ನ ಗೆಟಪ್ ಕುತೂಹಲ ಹೆಚ್ಚಿಸಿದೆ. ಪೋಸ್ಟರ್ನಲ್ಲಿರುವ ದೃಶ್ಯ, […]