ಶಿವಣ್ಣನ ‘ಬೇಲ್’ ಟೀಸರ್ಗೆ ಫುಲ್ ಮಾರ್ಕ್ಸ್! ‘ವಿಜಿ’ ಅವತಾರ ಕಂಡು ಥ್ರಿಲ್ ಆದ ಫ್ಯಾನ್ಸ್

ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ. ಪವನ್ ಒಡೆಯರ್ ನಿರ್ದೇಶನದ ಈ ಚಿತ್ರ ಆಕ್ಷನ್ ಜೊತೆಗೆ ನ್ಯಾಯ, ಅಧಿಕಾರ ಮತ್ತು ಸಂಘರ್ಷದ ಕಥೆಯನ್ನು ಹೇಳುವ ಸುಳಿವು ನೀಡಿದೆ. ಟೀಸರ್ಗೆ ‘The First Hearing’ ಎಂಬ ಶೀರ್ಷಿಕೆ ನೀಡಲಾಗಿದ್ದು, “Justice will be served” ಎಂಬ ಥೀಮ್ ಚಿತ್ರದ ಮೂಲ ಸಂಘರ್ಷದ ಬಗ್ಗೆ ಕುತೂಹಲ ಮೂಡಿಸುತ್ತದೆ. ಶಿವಣ್ಣನ ‘ವಿಜಿ’ ಪಾತ್ರವೇ ಹೈಲೈಟ್ ಟೀಸರ್ನ […]
ಮೂರನೇ ದಿನಕ್ಕೆ ₹200 ಕೋಟಿ ಬಾಚಿದ ‘ಟಾಕ್ಸಿಕ್’ ಕನ್ನಡಕ್ಕಿಂತ ಹಿಂದಿಯಲ್ಲಿಯೇ ಜಾಸ್ತಿ ಗಳಿಕೆ!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ಬಾಕ್ಸ್ ಆಫೀಸ್ ಕಲೆಕ್ಷನ್ ಮೂರನೇ ದಿನಕ್ಕೆ ಭಾರತದಲ್ಲಿ ₹200 ಕೋಟಿಯ ಸಮೀಪ ತಲುಪಿದೆ. ಗೀತು ಮೋಹನ್ದಾಸ್ ನಿರ್ದೇಶನದ ಈ ಚಿತ್ರ ಮೂರನೇ ದಿನ ದೇಶಾದ್ಯಂತ 19,390 ಪ್ರದರ್ಶನಗಳಿಂದ ₹27.20 ಕೋಟಿ ಗಳಿಕೆ ಕಂಡಿದೆ. ಶುಕ್ರವಾರ ಚಿತ್ರದ ಒಟ್ಟಾರೆ ಆಕ್ಯುಪೆನ್ಸಿ ಶೇ.25.5ರಷ್ಟಿತ್ತು. ಭಾಷಾವಾರು ಗಳಿಕೆಯಲ್ಲಿ ಹಿಂದಿ ಆವೃತ್ತಿ ಅಗ್ರಸ್ಥಾನದಲ್ಲಿದ್ದು, ₹19.15 ಕೋಟಿ ಗಳಿಸಿದೆ. ಕನ್ನಡ ಆವೃತ್ತಿ ₹5 ಕೋಟಿ, ತೆಲುಗು ₹1.50 ಕೋಟಿ, ತಮಿಳು ₹0.75 ಕೋಟಿ […]
ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಗ್ಯಾಂಗ್ಗೆ ಮತ್ತಷ್ಟು ಸಂಕಷ್ಟ; ಪ್ರದೋಷ್ ಸಾಕ್ಷ್ಯಕ್ಕೆ ಕೋರ್ಟ್ ದಿನಾಂಕ ನಿಗದಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್ ಮಾಫಿ ಸಾಕ್ಷಿ (ಅಪ್ರೂವರ್) ಆಗಲು ಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಅವರ ಸಾಕ್ಷ್ಯ ದಾಖಲಿಸಲು ನ್ಯಾಯಾಲಯ ಮುಂದಾಗಿದೆ. ಪ್ರದೋಷ್ ಅವರನ್ನು ಸಾಕ್ಷಿಯಾಗಿ ವಿಚಾರಣೆ ನಡೆಸಲು 59ನೇ ಸಿಸಿಹೆಚ್ ನ್ಯಾಯಾಲಯ ವಿಟ್ನೆಸ್ ಸಮನ್ಸ್ ಜಾರಿಗೊಳಿಸಿದೆ. ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್ ಅವರು ಪ್ರದೋಷ್ಗೆ ಸಮನ್ಸ್ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ […]
‘ಟಾಕ್ಸಿಕ್’ ಭರ್ಜರಿ ಓಪನಿಂಗ್:ನೆಗೆಟಿವ್ ಪ್ರತಿಕ್ರಿಯೆಗಳ ನಡುವೆಯೂ ಮೊದಲ ದಿನವೇ ₹140 ಕೋಟಿಗೂ ಅಧಿಕ ಗಳಿಕೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ಭರ್ಜರಿ ಆರಂಭ ಕಂಡಿದೆ. ಬಿಡುಗಡೆಯಾದ ಮೊದಲ ದಿನವೇ ಚಿತ್ರ ₹140 ಕೋಟಿಗೂ ಅಧಿಕ ಗಳಿಕೆ ಕಂಡಿದೆ ಎಂದು ಅಂದಾಜಿಸಲಾಗಿದೆ. ಭಾರತದಲ್ಲಿ ‘ಟಾಕ್ಸಿಕ್’ ಸುಮಾರು ₹120.75 ಕೋಟಿ ಹಾಗೂ ವಿದೇಶಿ ಮಾರುಕಟ್ಟೆಯಲ್ಲಿ ₹20 ಕೋಟಿ ಗಳಿಸಿದೆ ಎನ್ನಲಾಗಿದೆ. ಯಾವುದೇ ಪ್ರೀಮಿಯರ್ ಅಥವಾ ಸೆಲೆಬ್ರಿಟಿ ಶೋಗಳಿಲ್ಲದೆ ನೇರವಾಗಿ ಆರು ಭಾಷೆಗಳಲ್ಲಿ ತೆರೆಕಂಡ ಚಿತ್ರಕ್ಕೆ ಬಹುತೇಕ ಕಡೆ ಫ್ಯಾನ್ ಶೋಗಳು ಹೌಸ್ಫುಲ್ ಆಗಿವೆ. ಈ ಮೂಲಕ 2026ರಲ್ಲಿ ಮೊದಲ […]
ಖ್ಯಾತ ನಿರ್ದೇಶಕ, ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ, ದೂರು ದಾಖಲು

ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ₹3.85 ಕೋಟಿ ವಂಚನೆ ಆರೋಪ ಕೇಳಿಬಂದಿದೆ. ಈ ಸಂಬಂಧ ನಟ ಭಾಸ್ಕರ್ ಶೆಟ್ಟಿ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ಸಲ್ಲಿಸಿದ್ದು, ನಿರ್ದೇಶಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರೂ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು […]