ರಾಮಾಯಣ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಜುಲೈ 24ಕ್ಕೆ ಗ್ರ್ಯಾಂಡ್ ರಿಲೀಸ್, ಯಶ್-ರಣಬೀರ್-ಸಾಯಿ ಪಲ್ಲವಿ ನಟನೆಗೆ ಅಭಿಮಾನಿಗಳ ಕಾತರ

ನಿರ್ದೇಶಕ ನಿತೇಶ್ ತಿವಾರಿ ಅವರ ಬಹುನಿರೀಕ್ಷಿತ ‘ರಾಮಾಯಣ’ (Ramayana) ಚಿತ್ರದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಜುಲೈ 24ರಂದು ವಿಶ್ವಾದ್ಯಂತ ಏಕಕಾಲಕ್ಕೆ ಟ್ರೇಲರ್ ಬಿಡುಗಡೆಯಾಗಲಿದ್ದು, ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ. ಬಾಲಿವುಡ್ ನಟ ರಣಬೀರ್ ಕಪೂರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಸಿನಿಮಾ ಈಗಾಗಲೇ ದೇಶಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದೆ. ಟ್ರೇಲರ್ ಬಿಡುಗಡೆಯ ಕುರಿತ ಪೋಸ್ಟ್ ಹಂಚಿಕೊಂಡಿರುವ ಚಿತ್ರತಂಡ, ಜುಲೈ 24ರಂದು […]

ಖ್ಯಾತ ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ಶಾಕ್,ಚೆಕ್ ಬೌನ್ಸ್ ಪ್ರಕರಣ, 3 ತಿಂಗಳ ಜೈಲು ಶಿಕ್ಷೆ

ನವದೆಹಲಿ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್‌ಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಆ ಮೂಲಕ ರಾಜ್ ಪಾಲ್ ಯಾದವ್ ಮತ್ತೆ ಜೈಲುಪಾಲಾಗಿದ್ದಾರೆ. ವಿಚಾರಣೆಯ ವೇಳೆ ಅವರ ನಡೆ-ನುಡಿಯನ್ನು ಪರಿಗಣಿಸಿದ ನ್ಯಾಯಾಲಯವು ಅವರಿಗೆ ಪ್ರೊಬೇಷನ್ (ಪರಿವೀಕ್ಷಣೆಯಡಿ ಬಿಡುಗಡೆ) ಸೌಲಭ್ಯ ನೀಡಲು ನಿರಾಕರಿಸಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ರಾಜ್‌ಪಾಲ್ ಯಾದವ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿ, ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್ ಕಾಯ್ದೆಯ ಸೆಕ್ಷನ್ 138ರ ಅಡಿಯಲ್ಲಿ ವಿಚಾರಣಾ […]

ಬಾಕ್ಸ್ ಆಫೀಸ್ ನಲ್ಲಿ ‘ಆಲ್ಫಾ’ ಸಖತ್ ಕಮಾಲ್, ₹17.42 ಕೋಟಿ ಗಳಿಸಿ ದಾಖಲೆ ಬರೆದ ಆಲಿಯಾ ಭಟ್ ಅಭಿನಯದ ಈ ಆಕ್ಷನ್ ಚಿತ್ರ

ಬಾಲಿವುಡ್ ನಟಿಯರಾದ ಆಲಿಯಾ ಭಟ್ ಮತ್ತು ಶಾರ್ವರಿ ಅಭಿನಯದ ಬಹುನಿರೀಕ್ಷಿತ ‘ಆಲ್ಫಾ’ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಆರಂಭ ಕಂಡಿದೆ. ಶುಕ್ರವಾರ ತೆರೆಕಂಡ ಈ ಆಕ್ಷನ್ ಥ್ರಿಲ್ಲರ್ ಚಿತ್ರವು ಜಾಗತಿಕ ಮಟ್ಟದಲ್ಲಿ ₹17.42 ಕೋಟಿ ಗಳಿಕೆ ದಾಖಲಿಸಿದೆ. ಚಿತ್ರದ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್ (YRF) ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮೊದಲ ದಿನದ ಕಲೆಕ್ಷನ್ ವಿವರಗಳನ್ನು ಹಂಚಿಕೊಂಡಿದ್ದು, “ಆಲ್ಫಾ ವಿಶ್ವದಾದ್ಯಂತ ಪ್ರೇಕ್ಷಕರ ಹೃದಯ ಗೆಲ್ಲುತ್ತಿದೆ. ಮೊದಲ ದಿನವೇ ₹17.42 ಕೋಟಿ […]

ಸಿನಿಮಾ, ವೆಬ್‌ಸಿರೀಸ್‌ಗಳ ಪೈರಸಿ, ಟೆಲಿಗ್ರಾಂಗೆ ನೋಟಿಸ್ ನೀಡಿದ ಕೇಂದ್ರ!

ನವದೆಹಲಿ: ಸಿನಿಮಾ ಹಾಗೂ ವೆಬ್‌ಸಿರೀಸ್‌ಗಳ ಪೈರಸಿ ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ಟೆಲಿಗ್ರಾಂಗೆ ನೋಟಿಸ್ ಜಾರಿಗೊಳಿಸಿದ್ದು, ಕಾನೂನುಬಾಹಿರವಾಗಿ ಹಂಚಲಾಗುತ್ತಿರುವ ಸಿನಿಮಾ ಮತ್ತು ಒಟಿಟಿ ಕಂಟೆಂಟ್ ವಿರುದ್ಧ ತಕ್ಷಣ ಕ್ರಮ ಕೈಗೊಂಡು 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ನೋಟಿಸ್ ನೀಡಿದ್ದು, ಟೆಲಿಗ್ರಾಂನ ವಿವಿಧ ಚಾನೆಲ್‌ಗಳು ಹಾಗೂ ಗುಂಪುಗಳ ಮೂಲಕ ಹೊಸ ಸಿನಿಮಾಗಳು, ಒಟಿಟಿ ವೇದಿಕೆಗಳ ವಿಷಯಗಳು ಮತ್ತು ಇತರೆ ಆಡಿಯೋ-ವಿಜುವಲ್ ಕೃತಿಗಳನ್ನು ಅನಧಿಕೃತವಾಗಿ ಹಂಚಲಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದ […]

ದರ್ಶನ್ ಗೆ ಇನ್ನೊಂದು ವರ್ಷ ಜೈಲೇ ಗತಿ: ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಮುಖಭಂಗ; ಜಾಮೀನು ಅರ್ಜಿ ತಿದ್ದುಪಡಿ ಮನವಿ ತಿರಸ್ಕಾರ

ನವದೆಹಲಿ: ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಒಂದು ವರ್ಷದೊಳಗೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಹಿಂದಿನ ಆದೇಶದಲ್ಲಿ ತಿದ್ದುಪಡಿ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ತಿರಸ್ಕರಿಸಿದ್ದಾರೆ. ದರ್ಶನ್ ಪರವಾಗಿ ತುರ್ತು ಪರಿಸ್ಥಿತಿಗಳಲ್ಲಿ ಜಾಮೀನು ಕೋರುವ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ, ಈ ಅರ್ಜಿ ವಿಚಾರಣೆಗೆ ಅರ್ಹವಲ್ಲ ಎಂದು ತಿಳಿಸಿ, ಅದನ್ನು ಪಟ್ಟಿಗೆ ಸೇರಿಸಲು ಸಾಧ್ಯವಿಲ್ಲವೆಂದು ರಿಜಿಸ್ಟ್ರಾರ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಮೇ 15ರಂದು […]