ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನ

ಮುಂಬೈ: ಬಾಲಿವುಡ್ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ, ಪ್ರಕಾಶ್ ಕೌರ್ ಮಕ್ಕಳಾದ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ. ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, […]
ಸಖತ್ ಸದ್ದು ಮಾಡ್ತಿದೆ “ದಿ ರಾಜಾಸಾಬ್” ಟ್ರೈಲರ್: ಪ್ರಭಾಸ್ ಅಭಿಮಾನಿಗಳು ಫುಲ್ ಖುಷ್

ರೆಬೆಲ್ ಸ್ಟಾರ್ ಪ್ರಭಾಸ್ ಅವರ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಹಾರರ್-ಫ್ಯಾಂಟಸಿ ಡ್ರಾಮಾ “ದಿ ರಾಜಾಸಾಬ್” ಸಿನಿಮಾ ಮೇಲೆ ಎಲ್ಲರ ಕಣ್ಣಿದೆ. ನಿರೀಕ್ಷೆಯೂ ದುಪ್ಪಟ್ಟಾಗಿದೆ. ಕಳೆದ ವರ್ಷ, ಚಿತ್ರತಂಡವು ಪ್ಯಾನ್-ಇಂಡಿಯಾ ಝಲಕ್ ಮೂಲಕ ಕುತೂಹಲ ಕೆರಳಿಸಿತ್ತು. ಇದೀಗ ಇದೇ ರಾಜಾಸಾಬ್ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಮಾರುತಿ ನಿರ್ದೇಶನದ ಬಹುನಿರೀಕ್ಷಿತ ‘ದಿ ರಾಜಾಸಾಬ್’ ಸಿನಿಮಾದ ಟ್ರೈಲರ್ ಬಿಡುಗಡೆ ಆಗುವ ಮೂಲಕ ಅಭಿಮಾನಿಗಳಿಗೆ ಹಬ್ಬದ ಉಡುಗೊರೆ ನೀಡಿದೆ. ಪೀಪಲ್ ಮೀಡಿಯಾ ಫ್ಯಾಕ್ಟರಿ ಸಂಸ್ಥೆಯ ಈ ಮಹೋನ್ನತ ಪ್ರಾಜೆಕ್ಟ್ಗೆ ಟಿ.ಜಿ. ವಿಶ್ವ ಪ್ರಸಾದ್ […]
ಮತ್ತೆ ಶುರುವಾಯ್ತು ಕಾಂತಾರ ಫೀವರ್ : ಕಾಂತಾರ ಚಾಪ್ಟರ್ 1 ಟ್ರೈಲರ್ ಅಬ್ಬರಕ್ಕೆ ಪ್ರೇಕ್ಷಕರು ಫುಲ್ ಖುಷ್

ಕೊನೆಗೂ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್ ನ ಅದ್ದೂರಿತನಕ್ಕೆ ಪ್ರೇಕ್ಷಕರು ಖುಷ್ ಆಗಿದ್ದಾರೆ. ಚಿತ್ರದ ಟ್ರೈಲರ್ ಹೊಸ ಲೋಕವೊಂದಕ್ಕೆ ಕರೆದೊಯ್ಯುವಂತಿದ್ದು ಕಾಡಿನ ರೋಮಾಂಚಕ ಸನ್ನಿವೇಶ, ನಾಯಕನ ಪರಾಕ್ರಮ, ಜನರ ವ್ಯಾಪಾರ, ಜೀವನ, ರಾಜನ ಆಳ್ವಿಕೆ, ದಬ್ಬಾಳಿಕೆ ಎಲ್ಲವೂ ಟ್ರೈಲರ್ ನಲ್ಲಿ ಸೊಗಸಾಗಿ ಮೂಡಿಬಂದಿದೆ. ಹೊಂಬಾಳೆ ಫಿಲ್ಮ್ ನಿರ್ಮಿಸಿದ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ ಕಾಂತಾರ ಸಿನಿಮಾದ ಪ್ರೀಕ್ವೆಲ್ ಇದಾಗಿದೆ. ಕಳೆದ ಕೆಲವು ಸಮಯಗಳಿಂದ ಈ ಚಿತ್ರದ ಕುರಿತು ಭಾರೀ ನಿರೀಕ್ಷೆ, ಹೈಪ್ ನೀಡುವ ಮಾತುಗಳು […]
ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು, ಹೊಸ ಅಪ್ಡೇಟ್ ಸದ್ಯದಲ್ಲೇ ಕೊಡಲಾಗುವುದು ಎಂದು ಹೊಂಬಾಳೆ ಫಿಲಂನವರು ಹೇಳಿದ್ದಾರೆ. ಕಾಂತಾರ-1′ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಗುಲ್ಷನ್ ದೇವಯ್ಯ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಸಾವಿರಾರು ಸಹ ಕಲಾವಿದರನ್ನು ಬಳಸಿಕೊಂಡು ಚಿತ್ರದ ಕೆಲ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಅಕ್ಟೋಬರ್ 2 ಗಾಂಧೀ ಜಯಂತಿಯಂದು ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದ್ದು ಚಿತ್ರತಂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಗಾಂಧಿ […]
ಸೈಮಾ-2025 ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಇಲ್ಲಿದೆ ಪ್ರಶಸ್ತಿ ವಿಜೇತರ ವಿವರ!

ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ರಲ್ಲಿ ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಸೆ.5 ರಂದು ದುಬೈಯಲ್ಲಿ ಅದ್ದೂರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ […]