ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗ್ತಿದೆ ನಟಿಯ ಭರತನಾಟ್ಯದ ದೃಶ್ಯ

ಚಾಂದ್ ಮೇರಾ ದಿಲ್ ಚಿತ್ರದಲ್ಲಿ ಅನನ್ಯಾ ಪಾಂಡೆ Ananya Panday ಅವರ ಭರತನಾಟ್ಯ ಸನ್ನಿವೇಶ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಸಾಂಪ್ರದಾಯಿಕ ಭರತನಾಟ್ಯದ ಅಭಿಮಾನಿಗಳು, “ಭರತನಾಟ್ಯವನ್ನು ಸಿನಿಮಾಗಳಲ್ಲಿ ಗ್ಲಾಮರ್ ದೃಷ್ಟಿಯಿಂದ ತೋರಿಸಲಾಗುತ್ತಿದೆ” ಎಂದು ಟೀಕಿಸಿದ್ದಾರೆ. ಚಿತ್ರದಲ್ಲಿ ಅನನ್ಯಾ ಪಾಂಡೆ ಅವರು ಭರತನಾಟ್ಯದಲ್ಲಿ ತರಬೇತಿ ಪಡೆದ ಎಂಜಿನಿಯರಿಂಗ್ ವಿದ್ಯಾರ್ಥಿನಿ ‘ಚಾಂದನಿ’ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರು ಧರಿಸಿರುವ ಡಿಸೈನರ್ ಲೆಹೆಂಗಾ, ನೃತ್ಯದ ಭಂಗಿಗಳು ಹಾಗೂ ಶೈಲಿ ಪರಂಪರಾಗತ ಭರತನಾಟ್ಯದ ಮೂಲ ಸೌಂದರ್ಯಕ್ಕೆ ಹೊಂದಿಕೆಯಾಗಿಲ್ಲ ಎಂದು ಕೆಲವರು […]
ನಕಲಿ ಬಿಕಿನಿ ಫೋಟೋ ವೈರಲ್: “ಅದು ನನ್ನ ಫೋಟೋ ಅಲ್ಲ” ಸ್ಪಷ್ಟನೆ ನೀಡಿದ ರುಕ್ಕಿಣಿ ವಸಂತ್

ಬೆಂಗಳೂರು: ರುಕ್ಮಿಣಿ ವಸಂತ್ Rukmini Vasanth ಅವರ ಹೆಸರಿನಲ್ಲಿ ಎಐ ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಕುರಿತು ನಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಸ್ವಿಮ್ಮಿಂಗ್ ಪೂಲ್ ಬಳಿ ಮಹಿಳೆಯೊಬ್ಬರು ಕಾಣಿಸಿಕೊಂಡಿರುವ ಕೆಲವು ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದು, ಅವು ರುಕ್ಕಿಣಿ ವಸಂತ್ ಅವರದ್ದೇ ಎಂಬ ರೀತಿಯಲ್ಲಿ ಪ್ರಚಾರ ಮಾಡಲಾಗಿತ್ತು. ಆದರೆ, ಈ ಎಲ್ಲಾ ಫೋಟೋಗಳು ಮತ್ತು ವಿಡಿಯೋಗಳು ಡೀಪ್ಫೇಕ್ ಹಾಗೂ ಎಐ ತಂತ್ರಜ್ಞಾನ ಬಳಸಿ […]
‘ಟಾಕ್ಸಿಕ್’ ಸಿನಿಮಾ ತಡವಾಗಲು ಬಲವಾದ ಕಾರಣಗಳಿವೆ- ನಟಿ ತಾರಾ ಸುತಾರಿಯಾ

ರಾಕಿಂಗ್ ಸ್ಟಾರ್ ಯಶ್ Yash ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟಾಕ್ಸಿಕ್ Toxic ಬಿಡುಗಡೆಯ ಮುಂದೂಡಲ್ಪಡುತ್ತಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿರುವ ನಡುವೆಯೇ, ನಟಿ ತಾರಾ ಸುತಾರಿಯಾ Tara Sutaria ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಬಿಡುಗಡೆ ವಿಳಂಬವಾಗುತ್ತಿರುವುದಕ್ಕೆ ಹಲವು ತಾರ್ಕಿಕ ಮತ್ತು ಬಲವಾದ ಕಾರಣಗಳಿವೆ ಎಂದು ಅವರು ಹೇಳಿದ್ದಾರೆ. ಆರಂಭದಲ್ಲಿ ‘ಟಾಕ್ಸಿಕ್’ ಚಿತ್ರವನ್ನು ಮಾರ್ಚ್ 19ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ನಂತರ ಮಧ್ಯಪ್ರಾಚ್ಯದಲ್ಲಿ ನಡೆದ ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆ ಬಿಡುಗಡೆಯನ್ನು ಜೂನ್ 4ಕ್ಕೆ ಮುಂದೂಡಲಾಯಿತು. […]
ಸೇನೆಯ ರಹಸ್ಯ ಮಾಹಿತಿಗಳನ್ನು ಬಹಿರಂಗಪಡಿಸಿದ ಆರೋಪ, “ಧುರಂಧರ್ 2” ಸಿನಿಮಾ ವಿರುದ್ಧ ಪರಿಶೀಲನೆಗೆ ಕೋರ್ಟ್ ಆದೇಶ

ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಚಿತ್ರದ ಕುರಿತು ಭದ್ರತಾ ಪಡೆಗಳ ಕಾರ್ಯಾಚರಣೆ ಸಂಬಂಧಿತ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ದೆಹಲಿ ಹೈ ಕೋರ್ಟ್ Delhi High Court ಕೇಂದ್ರ ಸರ್ಕಾರಕ್ಕೆ ಪರಿಶೀಲನೆ ನಡೆಸುವಂತೆ ಸೂಚಿಸಿದೆ. ಸಶಸ್ತ್ರ ಸೀಮಾ ಬಲ್ (SSB) ಹೆಡ್ ಕಾನ್ಸ್ಟೆಬಲ್ ದೀಪಕ್ ಕುಮಾರ್ Deepak Kumar ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ನ್ಯಾಯಾಲಯ, ಸಿನಿಮಾ ಕಾಲ್ಪನಿಕ ಕಥೆಯಾಗಿರಬಹುದು. ಆದರೆ ಭದ್ರತಾ ಪಡೆ […]
‘ನಾನು ಕೈಬೀಸಿದರೂ ಯಾರೂ ನನ್ನ ನೋಡಲಿಲ್ಲ,ಯಾರೂ ಹತ್ತಿರ ಬರಲಿಲ್ಲ ನನ್ನ ಅಹಂಕಾರ ಪುಡಿಯಾಯಿತು’-ನಟ ರಜನಿಕಾಂತ್

ದಕ್ಷಿಣ ಭಾರತದ ಸೂಪರ್ಸ್ಟಾರ್ ರಜನಿಕಾಂತ್ ಅವರಿಗೆ ದೇಶದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅವರು ಕಾಣಿಸಿಕೊಂಡರೆ ಅಭಿಮಾನಿಗಳು ಸೆಲ್ಫಿ, ಆಟೋಗ್ರಾಫ್ಗಾಗಿ ಮುಗಿಬೀಳುತ್ತಾರೆ. ಆದರೆ, ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ನನ್ನತ್ತ ಯಾರೂ ಗಮನ ಕೊಡದೇ ಇದ್ದುದು ನನ್ನ ಅಹಂಕಾರವನ್ನು ಸಂಪೂರ್ಣವಾಗಿ ಪುಡಿಮಾಡಿತು ಎಂದು ರಜನಿಕಾಂತ್ ಬಹಿರಂಗಪಡಿಸಿದ್ದಾರೆ. ಮಂಗಳವಾರ ನಡೆದ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷಾಚರಣೆ ಹಾಗೂ ರವಿಶಂಕರ್ ಗುರುಜಿ ಅವರ 70ನೇ ಜನ್ಮದಿನದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, […]