ಬಹುನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು, ಹೊಸ ಅಪ್ಡೇಟ್ ಸದ್ಯದಲ್ಲೇ ಕೊಡಲಾಗುವುದು ಎಂದು ಹೊಂಬಾಳೆ ಫಿಲಂನವರು ಹೇಳಿದ್ದಾರೆ. ಕಾಂತಾರ-1′ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಗುಲ್ಷನ್ ದೇವಯ್ಯ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ. ಸಾವಿರಾರು ಸಹ ಕಲಾವಿದರನ್ನು ಬಳಸಿಕೊಂಡು ಚಿತ್ರದ ಕೆಲ ಸನ್ನಿವೇಶಗಳನ್ನು ಸೆರೆಹಿಡಿಯಲಾಗಿದೆ. ಅಕ್ಟೋಬರ್ 2 ಗಾಂಧೀ ಜಯಂತಿಯಂದು ಈ ಸಿನಿಮಾ ಅದ್ಧೂರಿಯಾಗಿ ತೆರೆಗೆ ಬರಲಿದ್ದು ಚಿತ್ರತಂಡ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಗಾಂಧಿ […]
ಸೈಮಾ-2025 ಪ್ರಶಸ್ತಿ ಪ್ರಕಟ: ಸುದೀಪ್ ಅತ್ಯುತ್ತಮ ನಟ, ಉಪೇಂದ್ರ ಅತ್ಯುತ್ತಮ ನಿರ್ದೇಶಕ; ಇಲ್ಲಿದೆ ಪ್ರಶಸ್ತಿ ವಿಜೇತರ ವಿವರ!

ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025 (SIIMA 2025) ರಲ್ಲಿ ಮ್ಯಾಕ್ಸ್’ ಸಿನಿಮಾ ನಟನೆಗೆ ಕಿಚ್ಚ ಸುದೀಪ್ (Sudeep) ಅವರಿಗೆ ಅತ್ಯುತ್ತಮ ನಟ ಅವಾರ್ಡ್ ದೊರೆತಿದೆ. ಉಪೇಂದ್ರ ಅವರಿಗೆ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಸೆ.5 ರಂದು ದುಬೈಯಲ್ಲಿ ಅದ್ದೂರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿದ್ದು, 2024ರಲ್ಲಿ ಬಿಡುಗಡೆಯಾದ ಚಿತ್ರಗಳಿಗೆ ಪ್ರಶಸ್ತಿ ನೀಡಲಾಗಿದೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ಸುದೀಪ್ ಅವರು ಪೊಲೀಸ್ ಅಧಿಕಾರಿಯಾಗಿ ಮಿಂಚಿದ್ದರು. ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿದೆ. ಇನ್ನು, ‘ಯುಐ’ ನಿರ್ದೇಶನಕ್ಕೆ ಉಪೇಂದ್ರ […]
ಈ ನಟಿ ನೋಡೋಕೆ ಸಿಂಪಲ್, ಆದ್ರೆ ಈಕೆ ಬಳಸೋ ಬ್ಯಾಗ್ ಬೆಲೆಗೆ ದುಬಾರಿ ಮನೆಯನ್ನೇ ಕೊಳ್ಳಬಹುದು!

ಖ್ಯಾತ ನಟಿ ನಯನತಾರಾ ಐಷಾರಾಮಿ ಜೀನವಶೈಲಿಯ ಜೊತೆ ಆಗಾಗ ಸುದ್ದಿಯಾಗುತ್ತಾರೆ. ನಟಿ ಐಷಾರಾಮಿ ಕಾರುಗಳ ಸಂಗ್ರಹದ ಜೊತೆಗೆ ಅವರು ಖಾಸಗಿ ಜೆಟ್ ಕೂಡ ಹೊಂದಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಈಗ ಅವರು ಬಳಸುವ ಹ್ಯಾಂಡ್ ಬ್ಯಾಗ್ ಅತ್ಯಂತ ಬೆಳೆಬಾಳುತ್ತೆ ಎನ್ನುವ ವರದಿಯಾಗಿದೆ. ದುಬಾರಿ ಬೆಲೆಯ ಹ್ಯಾಂಡ್ಬ್ಯಾಗ್ಗಳ ಸಂಗ್ರಹ ಕೂಡ ಅವರಲ್ಲಿದೆಯಂತೆ. ನಯನತಾರಾ ಬಳಿ ಪ್ರಾಡಾ ಎಂಬ ಅಂತರರಾಷ್ಟ್ರೀಯ ಬ್ರ್ಯಾಂಡ್ನ ಬ್ಯಾಗ್ ಕೂಡ ಇದ್ದು, ಈ ಸಣ್ಣ ಹ್ಯಾಂಡ್ಬ್ಯಾಗ್ನ ಬೆಲೆ ಬರೋಬ್ಬರಿ ಎರಡು ಲಕ್ಷ ರೂಪಾಯಿ. ಪುಟ್ಟದ್ದೊಂದು […]
ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಸಿಕೊಂಡ ನಿರ್ದೇಶಕ ಪ್ರೇಮ್:ಎಮ್ಮೆಗೆ ಕೊಟ್ಟದ್ದು 4.5 ಲಕ್ಷ, ಎಮ್ಮೆ ಕೊಡದೇ ಕೈ ಕೊಟ್ಟ ಭೂಪ!

ಬೆಂಗಳೂರು:ಕನ್ನಡ ಚಿತ್ರ ನಿರ್ದೇಶಕ ಪ್ರೇಮ್ ಎಮ್ಮೆ ಖರೀದಿಸಲು ಹೋಗಿ ಮೋಸಗೊಂಡು ಲಕ್ಷಗಟ್ಟಲೆ ಹಣ ಕಳೆದುಕೊಂಡಿದ್ದಾರೆ. ಅವರಿಗೆ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂಪಾಯಿ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಏನಾಗಿತ್ತು: ನಿರ್ದೇಶಕ ಪ್ರೇಮ್ ಅವರು ತಮ್ಮ ಹೈನುಗಾರಿಕೆ ಮಾಡಲು ಎರಡು ಎಮ್ಮೆಗಳನ್ನು ಖರೀದಿಸಲು ಯೋಚಿಸಿದ್ದರು. ಅದರಂತೆ ಈ […]
ವಿಚ್ಛೇದನಕ್ಕೆ ಮುಂದಾದ ಸ್ಯಾಂಡಲ್ ವುಡ್ ಖ್ಯಾತ ನಟ ಅಜಯ್ ರಾವ್ ! ನಟನ ವಿರುದ್ದ ಪತ್ನಿಯೇ ದೂರು ನೀಡಿದ್ರಾ?

ಬೆಂಗಳೂರು: ಸ್ಯಾಂಡಲ್ ವುಡ್ ನಟ ಎಕ್ಸ್ಕ್ಯೂಸ್ ಮಿ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ದಂಪತಿ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಅಜಯ್ ರಾವ್ ಇತ್ತೀಚೆಗಷ್ಟೇ ಯುದ್ಧಕಾಂಡ 2 ಸಿನಿಮಾ ನಿರ್ಮಿಸಿ, ನಟಿಸಿದ್ದರು. ಅಲ್ಲದೇ ಅಜಯ್ ರಾವ್ ಅವರಿಗೆ ಸಾಕಷ್ಟು ಸಾಲವಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಮಾತುಗಳು ಕೇಳಿಬಂದಿತ್ತು. ಆದರೆ ಇದಕ್ಕೆ ಹೇಳಿಕೆ ನೀಡಿದ್ದ ನಟ, ಅದೆಲ್ಲ ಸುಳ್ಳು ಎಂದಿದ್ದರು. ಆದರೆ ಈಗ ಮತ್ತೆ ವಿಚ್ಛೇದನದ ಸುದ್ದಿ […]