ಕಾಪಿರೈಟ್ ಉಲ್ಲಂಘನೆ ಆರೋಪ: ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನಲ್ಲಿ ಕೇಸು ದಾಖಲು.
![](https://udupixpress.com/wp-content/uploads/2024/07/1000186219.jpg)
ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯ ಎರಡು ಹಾಡುಗಳನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ನವೀನ್ ಅವರು ಆರೋಪಿಸಿದ್ದಾರೆ. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ […]
ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣ.
![](https://udupixpress.com/wp-content/uploads/2024/06/Screenshot_20240619-1010262-1.png)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಮುಚ್ಚಿಹಾಕಲು ಆರೋಪಿ, ನಟ ದರ್ಶನ್ 30 ಲಕ್ಷ ರೂ. ನೀಡಿರುವುದಾಗಿ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ. ರೇಣುಕಾ ಸ್ವಾಮಿಯ ಶವವನ್ನು ವಿಲೇವಾರಿ ಮಾಡಿ, ಈ ಪ್ರಕರಣದಲ್ಲಿ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಬೇಕು. ಪೊಲೀಸರು, ಲಾಯರ್ ಮತ್ತು ಶವ ಸಾಗಿಸುವ ವ್ಯಕ್ತಿಗಳಿಗೆ ತಗಲುವ ವೆಚ್ಚವನ್ನು ಭರಿಸಲು 30 ಲಕ್ಷ ರೂ. ಹಣ ನೀಡಿರುವುದಾಗಿ ಪೊಲೀಸರ ವಿಚಾರಣೆ ವೇಳೆ ದರ್ಶನ್ ಸ್ವ ಇಚ್ಛೆ ಹೇಳಿಕೆ ನೀಡಿದ್ದಾರೆ. ಪೊಲೀಸರು ಈ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ […]
ಆರು ಮರಿಗಳಿಗೆ ಜನ್ಮ ನೀಡಿದ “777 ಚಾರ್ಲಿ”: ಇನ್ಸ್ಟಾಗ್ರಾಮ್ ಲೈವ್ನಲ್ಲಿ ಸಂತಸ ಹಂಚಿಕೊಂಡ ರಕ್ಷಿತ್ ಶೆಟ್ಟಿ.
![](https://udupixpress.com/wp-content/uploads/2024/05/IMG-20240517-WA0005-1024x575.jpg)
ಚಾರ್ಲಿ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಟೈಮಲ್ಲಿ ತುಂಬಾ ಫೇಮಸ್ ಆದ ಮೂವಿ ಇದು. ಅದ್ರೆ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ರಕ್ಷಿತ್ ಶೆಟ್ಟಿ ಲೈವ್ ಬಂದು ಒಂದು ಸಂತಸದ ವಿಚಾರ ಹಂಚಿಕೊಂಡಿದ್ದಾರೆ. ಅದೇನು ಅಂತೀರಾ ಇಲ್ಲಿದೆ ನೋಡಿಹೌದು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ. ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ರಕ್ಷಿತ್ ಶೆಟ್ಟಿ ಅವರು ಮೈಸೂರಿಗೆ ತೆರಳಿದ್ದಾರೆ. ಅಲ್ಲಿಂದ ಅವರು ಬಹಳ ಖುಷಿಯಲ್ಲಿ ಲೈವ್ […]
Bangalore Fashion Week 2024: ಸಿಲ್ವರ್ ಜ್ಯುಬಿಲಿ ಆಚರಿಸಿಕೊಂಡ ಬೆಂಗಳೂರು ಫ್ಯಾಷನ್ ವೀಕ್
![](https://udupixpress.com/wp-content/uploads/2024/03/Bangalore-Fashion-week-2024.webp)
ಸತತ ಮೂರು ದಿನಗಳ ಕಾಲ ಉದ್ಯಾನನಗರಿಯಲ್ಲಿ ನಡೆದ ಬೆಂಗಳೂರು ಫ್ಯಾಷನ್ ವೀಕ್ (Bangalore Fashion Week 2024) ಸಿಲ್ವರ್ ಜ್ಯುಬಿಲಿ ಆಚರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಡೆದ ಶೋನಲ್ಲಿ ಸೆಲೆಬ್ರೆಟಿ ಡಿಸೈನರ್ಗಳು, ಮಾಡೆಲ್ಗಳು, ಫ್ಯಾಷನ್ ಕ್ಷೇತ್ರದ ದಿಗ್ಗಜರು ಪಾಲ್ಗೊಂಡಿದ್ದರು. ಈ ಕುರಿತಂತೆ ಇಲ್ಲಿದೆ ವರದಿ. ಸಮ್ಮರ್ ಸೀಸನ್ ಡಿಸೈನರ್ವೇರ್ಗಳನ್ನು ಧರಿಸಿದ ಪ್ರೊಫೆಷನಲ್ ಮಾಡೆಲ್ಗಳು ಬಿಗ್ ರ್ಯಾಂಪ್ ಮೇಲೆ ಕ್ಯಾಟ್ ವಾಕ್ ಮಾಡುತ್ತಾ ನೋಡುಗರ ಮನ ಸೆಳೆದರೇ, ಸೆಲೆಬ್ರೆಟಿ ಡಿಸೈನರ್ಗಳು, ಕೊರಿಯಾಗ್ರಾಫರ್ಗಳು ಹಾಗೂ ಸೆಲೆಬ್ರೆಟಿಗಳು ರ್ಯಾಂಪ್ನ ಈ ಪ್ರದರ್ಶನಕ್ಕೆ ಸಾಕ್ಷಿಯಾದರು. […]
ಕೆ.ಅಣ್ಣಾಮಲೈ ನಟನೆಯ ಕನ್ನಡ ಚಲನಚಿತ್ರ ‘ಅರಬ್ಬಿ’ಯ ಟ್ರೈಲರ್ ಬಿಡುಗಡೆ
![](https://udupixpress.com/wp-content/uploads/2024/03/arabbie.png)
ಬೆಂಗಳೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ(K. Annamalai) ನಟಿಸಿರುವ ಮೊಟ್ಟ ಮೊದಲ ಕನ್ನಡ ಚಲನಚಿತ್ರ ‘ಅರಬ್ಬಿ’ಯ ಟ್ರೈಲರ್ ಬಿಡುಗಡೆ ಆಗಿದೆ. ಕೈಗಳಿಲ್ಲದ ಕೆ.ಎಸ್ ವಿಶ್ವಾಸ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ನೈಜ ಕಥೆಯನ್ನು ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ವಿಶ್ವಾಸ್ ಅವರ ತರಬೇತುದಾರನ ಪಾತ್ರದಲ್ಲಿ ಅಣ್ಣಾಮಲೈ ನಟಿಸಿದ್ದಾರೆ. ಐಪಿಎಸ್ ವೃತ್ತಿಗೆ ವಿದಾಯ ಹೇಳಿದ ಬಳಿಕ ಅಣ್ಣಾಮಲೈ ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದರು. ಈಗ ಅದರ ಟ್ರೈಲರ್ ಬಿಡುಗಡೆಗೊಂಡಿದೆ. ಅಣ್ಣಾಮಲೈ ಕೆಲವು ಆಕ್ಷನ್ […]