ಹಸೆಮಣೆ ಏರಿದ ವಾಸುಕಿ ವೈಭವ್ : ಬಹುಕಾಲದ ಗೆಳತಿ ಬೃಂದಾ ವಿಕ್ರಮ್

ರಾಮಾ ರಾಮಾ ರೇ ಸಿನಿಮಾದ ಸಕ್ಸಸ್ ಜೊತೆ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡ ವಾಸುಕಿ ವೈಭವ್ ಅವರೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರು ಹಿರಿಯರ ಸಮ್ಮುಖದಲ್ಲಿ ಬೃಂದಾ ವಿಕ್ರಮ್ ಜೊತೆ ವಾಸುಕಿ ವೈಭವ್ ಅವರ ಕಲ್ಯಾಣ ಜರುಗಿದೆ. ಬಹುಕಾಲದ ಗೆಳತಿ ಜೊತೆ ಬಹಳ ಸರಳವಾಗಿ ಹಿಂದೂ ಸಂಪ್ರದಾಯದ ಪ್ರಕಾರ ವಾಸುಕಿ ವೈಭವ್ ಮದುವೆ ಆಗಿದ್ದಾರೆ.’ರಾಮಾ ರಾಮಾ ರೇ’ ಸಿನಿಮಾ ಮೂಲಕ ಸಂಗೀತ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ವಾಸುಕಿ ವೈಭವ್ ತಮ್ಮ ಬಹುಕಾಲದ […]
ಠಾಣಾ ವಿಚಾರಣೆಗೆ ಹಾಜರಾದ ನಟ ದರ್ಶನ್ : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ

ಬೆಂಗಳೂರು: ದರ್ಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಮೂರು ದಿನದೊಳಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ನಲ್ಲಿ ತಿಳಿಸಿದ್ದರು. ಆದರೆ ದರ್ಶನ್ ಹಾಜರಾಗಿರಲಿಲ್ಲ. ಬಳಿಕ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದು ಇಂದು ಬೆಳಿಗ್ಗೆ 11.30ಕ್ಕೆ ಠಾಣೆಗೆ ಬರುವಂತೆ ಸೂಚಿಸಿದ್ದರು.ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಆರ್.ಆರ್.ನಗರ ಠಾಣೆ ಪೊಲೀಸರು ನಟ ದರ್ಶನ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಅವರು ಹಾಜರಾದರು.ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ ಸಂಬಂಧ ನಟ […]
‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್ : ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ

‘ಗ್ರಾಮಾಯಣ’ ಚಿತ್ರವನ್ನು ದೇವನೂರು ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಅಪ್ಪಟ ಹಳ್ಳಿ ಸೊಗಡಿನ ಚಿತ್ರವಿದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಯಶಸ್ವಿನಿ ಅಂಚಲ್ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್ಡಮ್ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್ಕುಮಾರ್. ಸದ್ಯ ‘ಪೆಪೆ’ ಹಾಗೂ ‘ಗ್ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿನಯ್ ರಾಜ್ಕುಮಾರ್ ಅವರ ತಾತ ಹುಟ್ಟಿದ ಮನೆ ಅಂದ್ರೆ ಡಾ.ರಾಜ್ಕುಮಾರ್ ಅವರ ಮನೆ […]
ಬಹುದೊಡ್ಡ ಮೊತ್ತಕ್ಕೆ ಮಾರಿದ ನಟ 2 ಐಷಾರಾಮಿ ಅಪಾರ್ಟ್ಮೆಂಟ್ಗಳನ್ನು ರಣ್ವೀರ್ ಸಿಂಗ್

ಇತ್ತೀಚೆಗೆ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಬ್ಲಾಕ್ಬಸ್ಟರ್ ಆಗಿತ್ತು. ಇದೀಗ ನಟನ ಕುರಿತ ಸುದ್ದಿಯೊಂದು ಹೊರಬಿದ್ದಿದೆ. ಮುಂಬೈನಲ್ಲಿರುವ ಎರಡು ಐಷಾರಾಮಿ ಅಪಾರ್ಟ್ಮೆಂಟ್ಗಳನ್ನು ಅವರು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ.ಹಿಂದಿ ಚಿತ್ರರಂಗದ ಸೂಪರ್ಸ್ಟಾರ್ ನಟ ರಣ್ವೀರ್ ಸಿಂಗ್. ಕಳೆದೆರಡು ವರ್ಷಗಳಿಂದ ಹಿಟ್ ಚಿತ್ರಗಳನ್ನು ನೀಡುತ್ತಾ ವೃತ್ತಿ ಜೀವನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ.ನಟ ರಣ್ವೀರ್ ಸಿಂಗ್ ಮುಂಬೈನಲ್ಲಿರುವ ಎರಡು ಐಷಾರಾಮಿ ಅಪಾರ್ಟ್ಮೆಂಟ್ಗಳನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ. 1,324 ಚದರ ಅಡಿಗಳಷ್ಟು […]
ಸಿನಿಮಾ ಟಿಕೆಟ್ ಶರವೇಗದಲ್ಲಿ ಮಾರಾಟ : ‘ಟೈಗರ್ 3’ ಮುಂಗಡ ಬುಕ್ಕಿಂಗ್ನಲ್ಲಿ ದಾಖಲೆ

ಬಿಡುಗಡೆಗೂ ಮುನ್ನ ಟಿಕೆಟ್ಗಳು ಶರವೇಗದಲ್ಲಿ ಮಾರಾಟವಾಗುತ್ತಿವೆ. ಈಗಾಗಲೇ ಮುಂಗಡ ಟಿಕೆಟ್ ಮಾರಾಟದಲ್ಲಿ ಸುಮಾರು 4.2 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ವರ್ಷದ ಅತಿ ಹೆಚ್ಚು ಮುಂಗಡ ಟಿಕೆಟ್ ಮಾರಾಟವಾದ ಮೂರನೇ ಚಿತ್ರ ಇದಾಗಿದೆ.ಮನೀಶ್ ಶರ್ಮಾ ನಿರ್ದೇಶನದ, ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ನಟನೆಯ ‘ಟೈಗರ್ 3’ ಸಿನಿಮಾದ ಅಡ್ವಾನ್ಸ್ ಬುಕ್ಕಿಂಗ್ಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಸಲ್ಮಾನ್ ಖಾನ್, ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ ಇದೆ. ಮನೀಶ್ […]