ಠಾಣಾ ವಿಚಾರಣೆಗೆ ಹಾಜರಾದ ನಟ ದರ್ಶನ್ : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ

ಬೆಂಗಳೂರು: ದರ್ಶನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಬಳಿಕ ಮೂರು ದಿನದೊಳಗೆ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಿದ್ದರು. ಆದರೆ ದರ್ಶನ್ ಹಾಜರಾಗಿರಲಿಲ್ಲ. ಬಳಿಕ ಎರಡನೇ ಬಾರಿ ನೋಟಿಸ್ ಜಾರಿ ಮಾಡಿದ್ದು ಇಂದು ಬೆಳಿಗ್ಗೆ 11.30ಕ್ಕೆ ಠಾಣೆಗೆ ಬರುವಂತೆ ಸೂಚಿಸಿದ್ದರು.ಮಹಿಳೆಗೆ ಸಾಕುನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಆರ್.ಆರ್.ನಗರ ಠಾಣೆ ಪೊಲೀಸರು ನಟ ದರ್ಶನ್‌ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಅವರು ಹಾಜರಾದರು.ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣ ಸಂಬಂಧ ನಟ […]

‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್​ : ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ

‘ಗ್ರಾಮಾಯಣ’ ಚಿತ್ರವನ್ನು ದೇವನೂರು ಚಂದ್ರು ನಿರ್ದೇಶನ ಮಾಡುತ್ತಿದ್ದಾರೆ. ಅಪ್ಪಟ ಹಳ್ಳಿ ಸೊಗಡಿನ ಚಿತ್ರವಿದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಯಶಸ್ವಿನಿ ಅಂಚಲ್​ ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್‌ಡಮ್​ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್​ಕುಮಾರ್. ಸದ್ಯ ‘ಪೆಪೆ’ ಹಾಗೂ ‘ಗ್ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿನಯ್​ ರಾಜ್​ಕುಮಾರ್ ಅವರ​ ತಾತ ಹುಟ್ಟಿದ ಮನೆ ಅಂದ್ರೆ ಡಾ.ರಾಜ್​ಕುಮಾರ್​ ಅವರ ಮನೆ […]

ಬಹುದೊಡ್ಡ ಮೊತ್ತಕ್ಕೆ ಮಾರಿದ ನಟ 2 ಐಷಾರಾಮಿ ಅಪಾರ್ಟ್​ಮೆಂಟ್​ಗಳನ್ನು ರಣ್​ವೀರ್​ ಸಿಂಗ್​

ಇತ್ತೀಚೆಗೆ ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಬ್ಲಾಕ್​ಬಸ್ಟರ್​ ಆಗಿತ್ತು. ಇದೀಗ ನಟನ ಕುರಿತ ಸುದ್ದಿಯೊಂದು ಹೊರಬಿದ್ದಿದೆ. ಮುಂಬೈನಲ್ಲಿರುವ ಎರಡು ಐಷಾರಾಮಿ ಅಪಾರ್ಟ್​ಮೆಂಟ್​ಗಳನ್ನು ಅವರು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ.ಹಿಂದಿ ಚಿತ್ರರಂಗದ ಸೂಪರ್​ಸ್ಟಾರ್​ ನಟ ರಣ್​ವೀರ್​ ಸಿಂಗ್​. ಕಳೆದೆರಡು ವರ್ಷಗಳಿಂದ ಹಿಟ್​ ಚಿತ್ರಗಳನ್ನು ನೀಡುತ್ತಾ ವೃತ್ತಿ ಜೀವನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದಾರೆ.ನಟ ರಣ್​ವೀರ್​ ಸಿಂಗ್​ ಮುಂಬೈನಲ್ಲಿರುವ ಎರಡು ಐಷಾರಾಮಿ ಅಪಾರ್ಟ್​ಮೆಂಟ್​ಗಳನ್ನು ದೊಡ್ಡ ಮೊತ್ತಕ್ಕೆ ಮಾರಾಟ ಮಾಡಿದ್ದಾರೆ ಎಂದು ವರದಿಯಾಗಿದೆ. 1,324 ಚದರ ಅಡಿಗಳಷ್ಟು […]

ಸಿನಿಮಾ ಟಿಕೆಟ್​ ಶರವೇಗದಲ್ಲಿ ಮಾರಾಟ : ‘ಟೈಗರ್​ 3’ ಮುಂಗಡ ಬುಕ್ಕಿಂಗ್​ನಲ್ಲಿ ದಾಖಲೆ

ಬಿಡುಗಡೆಗೂ ಮುನ್ನ ಟಿಕೆಟ್​ಗಳು ಶರವೇಗದಲ್ಲಿ ಮಾರಾಟವಾಗುತ್ತಿವೆ. ಈಗಾಗಲೇ ಮುಂಗಡ ಟಿಕೆಟ್​ ಮಾರಾಟದಲ್ಲಿ ಸುಮಾರು 4.2 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಈ ವರ್ಷದ ಅತಿ ಹೆಚ್ಚು ಮುಂಗಡ ಟಿಕೆಟ್​ ಮಾರಾಟವಾದ ಮೂರನೇ ಚಿತ್ರ ಇದಾಗಿದೆ.ಮನೀಶ್​ ಶರ್ಮಾ ನಿರ್ದೇಶನದ, ಸಲ್ಮಾನ್​ ಖಾನ್​ ಮತ್ತು ಕತ್ರಿನಾ ಕೈಫ್​ ನಟನೆಯ ‘ಟೈಗರ್​ 3’ ಸಿನಿಮಾದ ಅಡ್ವಾನ್ಸ್​ ಬುಕ್ಕಿಂಗ್​ಗೆ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ.ಸಲ್ಮಾನ್​ ಖಾನ್​, ಕತ್ರಿನಾ ಕೈಫ್​ ಮತ್ತು ಇಮ್ರಾನ್​ ಹಶ್ಮಿ ಮುಖ್ಯಭೂಮಿಕೆಯ ಈ ಚಿತ್ರದ ಮೇಲೆ ಭಾರೀ ನಿರೀಕ್ಷೆ​ ಇದೆ. ಮನೀಶ್​ […]

ಅಭಿಮಾನಿಗಳಿಗೆ ದರ್ಶನ್ ಮನವಿ: ಗರಡಿ ಸಿನಿಮಾ ನೋಡಿ ನಮ್ಮಂಥ ಕಲಾವಿದರಿಗೆ ಅನ್ನದಾತರಾಗಬೇಕು

ಯೋಗರಾಜ್ ಭಟ್ ನಿರ್ದೇಶನ, ಕೌರವ ಖ್ಯಾತಿಯ ಬಿ.ಸಿ ಪಾಟೀಲ್ ಹಾಗೂ ಸೂರ್ಯ ಅಭಿನಯದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಗರಡಿ ಚಿತ್ರದ ಟ್ರೈಲರ್​ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಿದರು‌.ಹಾವೇರಿಯ ರಾಣೆಬೆನ್ನೂರಿನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗರಡಿ ಚಿತ್ರದ ಟ್ರೈಲರ್​ನ್ನು ನಟ ದರ್ಶನ್ ಬಿಡುಗಡೆ ಮಾಡಿದರು‌. ಹಾವೇರಿಯ ರಾಣೆಬೆನ್ನೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಿತು. ಟ್ರೈಲರ್ ಬಿಡುಗಡೆ ಬಳಿಕ ಮಾಡಿದ ಮಾತನಾಡಿದ ನಟ ದರ್ಶನ್, ”ಮೊದಲಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಹೇಳುತ್ತ, ನಾನು ರಾಣೇಬೆನ್ನೂರಿಗೆ ಬಂದು 9 ವರ್ಷ ಆಯ್ತು. ರಾಣೇಬೆನ್ನೂರು […]