ಕರಾವಳಿ ಸೊಗಡಿನ ಮತ್ತೊಂದು ಚಿತ್ರ “ವೇಷ” ಚಿತ್ರದ ಟ್ರೈಲರ್ ಬಿಡುಗಡೆ
ಜೀವನದಲ್ಲಿ ಎಲ್ಲರೂ ಒಂದಲ್ಲ ಒಂದು ರೀತಿ “ವೇಷ” ಹಾಕುತ್ತಾರೆ. ನಮ್ಮ ಚಿತ್ರದಲ್ಲೂ ಯಾವುದೊ ಒಂದು ಸಂದರ್ಭದಲ್ಲಿ ನಾಯಕ “ವೇಷ” ಹಾಕುವ ಹಾಗೆ ಸಂದರ್ಭ ಎದುರಾಗುತ್ತದೆ. ಟ್ರೇಲರ್ ಮೂಲಕ ಹೊರಬಂದಿರುವ “ವೇಷ” ಸದ್ಯದಲ್ಲೇ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ಈ ತನಕ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿರುವ ನನಗೆ ಹಿರಿತೆರೆಯಲ್ಲಿ ಇದು ಮೊದಲ ನಿರ್ದೇಶನದ ಚಿತ್ರ ಎನ್ನುತ್ತಾರೆ ವೇಷ ಚಿತ್ರದ ನಿರ್ದೇಶಕ ಕೃಷ್ಣ ನಾಡ್ಪಾಲ್. ಹಂಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ರಾಘವೇಂದ್ರ ಡಿ.ಜಿ ನಿರ್ಮಿಸಿ ನಾಯಕ ನಟನಾಗಿ ಅಭಿನಯಿಸಿರುವ ಕೃಷ್ಣ ನಾಡ್ಪಾಲ್ ನಿರ್ದೇಶನದ […]
ರಿಲಯನ್ಸ್ ಎಂಟರ್ ಟೈನ್ ಮೆಂಟ್ ಸಾಥ್ : ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾ
ಬಾಲಿವುಡ್ನಲ್ಲಿ ದಂಗಲ್, ಸುಲ್ತಾನ್ ಶೈಲಿಯಲ್ಲಿ ಚಿತ್ರಗಳು ಸಿನಿಮಾ ಪ್ರೇಮಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ವನಜಾ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಸಿನಿಮಾಗೆ ರಿಲಯನ್ಸ್ ಎಂಟರ್ಟೈನ್ ಮೆಂಟ್ ಸಂಸ್ಥೆ ಜೊತೆಯಾಗಿದೆ. ಮೈಸೂರು ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚು ಕೇಳಿ ಬರುವ ಹೆಸರು ಗರಡಿ. ಕರ್ನಾಟಕದ ಅಪ್ಪಟ ದೇಸಿ ಕ್ರೀಡೆ ಆಗಿರುವ ಗರಡಿ ಹಾಗೂ ಪೈಲ್ವಾನ್ಗಳ ಬಗ್ಗೆ ಸಾಕಷ್ಟು ಅಧ್ಯಯನ ಮಾಡಿ ನಿರ್ದೇಶಕ ಯೋಗರಾಜ್ ಭಟ್ ಆಕ್ಷನ್ ಕಟ್ ಹೇಳಿರುವ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದು. […]
ಸ್ಯಾಂಡಲ್ವುಡ್ ಸ್ಟಾರ್ ಪೊಲೀಸ್ ವಶಕ್ಕೆ : ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ
ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಘಾತಕ್ಕೊಳಗಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಮೃತರ ಪತಿ ಸ್ಥಿತಿ ಗಂಭೀರವಾಗಿದೆ. ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ […]
₹1,000 ಕೋಟಿ ದಾಟಿದ ‘ಜವಾನ್’ ಹಿನ್ನೆಲೆ : ಬೆನ್ನಿನ ಮೇಲೆ ಶಾರುಖ್ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ
2023ರಲ್ಲಿ ‘ಪಠಾಣ್’ ಮತ್ತು ‘ಜವಾನ್’ ಎಂಬ ಎರಡು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ತಮ್ಮ ‘ಕಿಂಗ್ ಖಾನ್’ ಹೆಸರನ್ನು ಭದ್ರಪಡಿಸಿಕೊಂಡಿದ್ದಾರೆ. ಈ ಸಿನಿಮಾಗಳು ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ಗಳಿಸುವಲ್ಲಿ ಯಶ ಕಂಡಿದೆ. ಡಿಸೆಂಬರ್ನಲ್ಲಿ ತೆರೆ ಕಾಣಲಿರುವ ‘ಡಂಕಿ’ ಚಿತ್ರದ ಮೇಲೂ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಪ್ರಪಂಚದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.’ಜವಾನ್’ ಸಿನಿಮಾದ ಕಲೆಕ್ಷನ್ ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ದಾಟಿದ ಖುಷಿಯಲ್ಲಿ, ಶಾರುಖ್ ಖಾನ್ ಅಭಿಮಾನಿಯೊಬ್ಬರು ನಟನ ಟ್ಯಾಟೂವನ್ನು […]
ವಿಶೇಷ ವಿಡಿಯೋ ಹಂಚಿಕೊಂಡ ಚಿತ್ರತಂಡ ವರ್ಷ ಪೂರೈಸಿದ ‘ಕಾಂತಾರ’
ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ ಚಿತ್ರದ ಈವರೆಗಿನ ಸಕ್ಸಸ್ ಅನ್ನು ವಿಡಿಯೋ […]