ಸ್ಯಾಂಡಲ್ವುಡ್ ಸ್ಟಾರ್ ಪೊಲೀಸ್ ವಶಕ್ಕೆ : ನಟ ನಾಗಭೂಷಣ್ ಕಾರು ಅಪಘಾತ: ಮಹಿಳೆ ಸಾವು, ಪತಿ ಸ್ಥಿತಿ ಗಂಭೀರ

ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಘಾತಕ್ಕೊಳಗಾಗಿದ್ದು, ಮಹಿಳೆ ಸಾವನ್ನಪ್ಪಿದ್ದಾರೆ. ಮೃತರ ಪತಿ ಸ್ಥಿತಿ ಗಂಭೀರವಾಗಿದೆ. ಕೋಣನಕುಂಟೆ ಕ್ರಾಸ್ ದಾರಿ ಮಧ್ಯೆ ಶನಿವಾರ ರಾತ್ರಿ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ನೇಹಿತರನ್ನು ಭೇಟಿಯಾಗಿ ಜೆ.ಪಿ ನಗರದ ತಮ್ಮ ಮನೆಗೆ ನಟ ನಾಗಭೂಷಣ್ ತೆರಳುತ್ತಿದ್ದರು. ಫುಟ್ ಪಾತ್ ಮೇಲೆ ವಾಕಿಂಗ್ ಮಾಡುತ್ತಿದ್ದ ದಂಪತಿ ರಸ್ತೆಗಿಳಿದ ಪರಿಣಾಮ ಕಾರು ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಾಗಭೂಷಣ್ ಅವರ ಕಾರು ಅಪಘಾತಕ್ಕೊಳಗಾಗಿ, ಓರ್ವ […]
₹1,000 ಕೋಟಿ ದಾಟಿದ ‘ಜವಾನ್’ ಹಿನ್ನೆಲೆ : ಬೆನ್ನಿನ ಮೇಲೆ ಶಾರುಖ್ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

2023ರಲ್ಲಿ ‘ಪಠಾಣ್’ ಮತ್ತು ‘ಜವಾನ್’ ಎಂಬ ಎರಡು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ತಮ್ಮ ‘ಕಿಂಗ್ ಖಾನ್’ ಹೆಸರನ್ನು ಭದ್ರಪಡಿಸಿಕೊಂಡಿದ್ದಾರೆ. ಈ ಸಿನಿಮಾಗಳು ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ಗಳಿಸುವಲ್ಲಿ ಯಶ ಕಂಡಿದೆ. ಡಿಸೆಂಬರ್ನಲ್ಲಿ ತೆರೆ ಕಾಣಲಿರುವ ‘ಡಂಕಿ’ ಚಿತ್ರದ ಮೇಲೂ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆಬಾಲಿವುಡ್ ಸೂಪರ್ಸ್ಟಾರ್ ಶಾರುಖ್ ಖಾನ್ ಪ್ರಪಂಚದಾದ್ಯಂತ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.’ಜವಾನ್’ ಸಿನಿಮಾದ ಕಲೆಕ್ಷನ್ ವಿಶ್ವದಾದ್ಯಂತ 1,000 ಕೋಟಿ ರೂಪಾಯಿ ದಾಟಿದ ಖುಷಿಯಲ್ಲಿ, ಶಾರುಖ್ ಖಾನ್ ಅಭಿಮಾನಿಯೊಬ್ಬರು ನಟನ ಟ್ಯಾಟೂವನ್ನು […]
ವಿಶೇಷ ವಿಡಿಯೋ ಹಂಚಿಕೊಂಡ ಚಿತ್ರತಂಡ ವರ್ಷ ಪೂರೈಸಿದ ‘ಕಾಂತಾರ’

ವರ್ಷ ಪೂರೈಸಿರುವ ಸಂಭ್ರಮದಲ್ಲಿರುವ ಚಿತ್ರತಂಡ, ಅದ್ಭುತ ಯಶಸ್ಸಿಗೆ ಕಾರಣರಾದ ಪ್ರೇಕ್ಷಕರಿಗೆ ತುಂಬು ಹೃದಯದಿಂದ ಧನ್ಯವಾದ ಅರ್ಪಿಸಿದ್ದಾರೆ. ಅದರ ಸಲುವಾಗಿ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ‘ಕನ್ನಡ ಚಿತ್ರರಂಗದ ಬ್ಲಾಕ್ ಬಸ್ಟರ್ ಸಿನಿಮಾ ‘ಕಾಂತಾರ’ ವರ್ಷ ಪೂರೈಸಿದೆ. ಕಳೆದ ವರ್ಷ ಇದೇ ದಿನ ಸಿನಿಮಾ ತೆರೆಗಪ್ಪಳಿಸಿತ್ತು. ಅದಾದ ಬಳಿಕ ಆದದ್ದೆಲ್ಲವೂ ಇತಿಹಾಸವೇ. ಕಾಂತಾರ’ ಸಿನಿಮಾ ವರ್ಷ ಪೂರೈಸಿರುವ ಹಿನ್ನೆಲೆ ಚಿತ್ರತಂಡ ವಿಶೇಷ ವಿಡಿಯೋವೊಂದನ್ನು ಹಂಚಿಕೊಂಡಿದೆ. ಕಾಂತಾರ’ ಹೇಗೆ ಶುರುವಾಯಿತು ಅನ್ನೋದರಿಂದ ಹಿಡಿದು ಇಡೀ ಚಿತ್ರದ ಈವರೆಗಿನ ಸಕ್ಸಸ್ ಅನ್ನು ವಿಡಿಯೋ […]
ನಟ ಶಿವರಾಜಕುಮಾರ್ ”ಸರಕಾರಗಳು ಕೂಲಂಕುಷವಾಗಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಬೇಕು”

ಬೆಂಗಳೂರು, ಸೆ.29: . ಕರ್ನಾಟಕ ಹಾಗೂ ತಮಿಳುನಾಡು ಸರಕಾರಗಳು ಕೂಲಂಕುಷವಾಗಿ ಪರಿಶೀಲಿಸಿ ಕಾವೇರಿ ನದಿ ನೀರಿನ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾಗಿದೆ ಎಂದು ನಟ ಶಿವರಾಜ್ಕುಮಾರ್ ತಿಳಿಸಿದ್ದಾರೆ.ಕಲಾವಿದರು ಬಂದು ನಿಂತು ಧರಣಿ ನಡೆಸಿದರೆ ಪರಿಹಾರ ಸಮಸ್ಯೆ ಆಗುವುದಿಲ್ಲ.ನಾವು ಆಯ್ಕೆ ಮಾಡಿರುವ ಸರಕಾರ ಈ ವಿವಾದವನ್ನು ಬಗೆಹರಿಸಬೇಕು ಎಂದರು. ಶುಕ್ರವಾರ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾವೇರಿ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಸುಮಾರು ವರ್ಷಗಳ ಕಾಲದಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಹೋರಾಟದಲ್ಲಿ ಯಾವಾಗಲೂ ನಂಬಿಕೆ ಮತ್ತು ವಿಶ್ವಾಸದಿಂದ […]
ಯಶ್ ಮುಂದಿನ ಸಿನಿಮಾ ‘ಕೆಜಿಎಫ್ 3’ : ರಾಕಿಭಾಯ್ ಅಭಿಮಾನಿಗಳಿಗೆ ಗುಡ್ ನ್ಯೂಸ್

ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಸಿನಿಮಾ ಬಗ್ಗೆ ತಿಳಿದುಕೊಳ್ಳಲು ಇಡೀ ಭಾರತೀಯ ಚಿತ್ರರಂಗವೇ ಕಾತರದಿಂದ ಕಾಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಕಳೆದೊಂದು ವರ್ಷದಿಂದ ಟ್ರೆಂಡಿಂಗ್ನಲ್ಲಿರುವ ಹೆಸರು. ಹೊಂಬಾಳೆ ಫಿಲ್ಮ್ಸ್ ಮತ್ತೊಮ್ಮೆ ಯಶ್ ಜೊತೆಗೆ ಕೈ ಜೋಡಿಸಲಿದ್ದು, ಕೆಜಿಎಫ್ 3 ನಿರ್ಮಾಣವಾಗಲಿದೆ ಎಂದು ಹತ್ತಿರದ ಮೂಲಗಳು ಬಹಿರಂಗಪಡಿಸಿದೆ. ಕೆಜಿಎಫ್ 2 ಬಳಿಕ ನಟನ ಯಾವುದೇ ಸಿನಿಮಾ ಅನೌನ್ಸ್ ಆಗಿಲ್ಲ. ಅಭಿಮಾನಿಗಳು ಎಷ್ಟೇ ಬೇಡಿಕೆ ಇಟ್ಟರೂ ರಾಕಿಭಾಯ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಸುಳಿವು ಬಿಟ್ಟುಕೊಟ್ಟಿಲ್ಲ. ಆದರೆ, ಕಳೆದ […]