ಹಿರಿಯ ಬಹುಭಾಷಾ ನಟಿ ಹೇಮಾ ಚೌಧರಿ ಆಸ್ಪತ್ರೆಗೆ ದಾಖಲು
ಭಾರತೀಯ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರು ಮೆದುಳಿನ ರಕ್ತಸ್ರಾವದಿಂದ (ಬ್ರೈನ್ ಹ್ಯಾಮರೇಜ್) ಬಳಲುತ್ತಿದ್ದು, ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಹೇಮಾ ಚೌಧರಿ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಪುತ್ರ ಐರ್ಲ್ಯಾಂಡ್ನಲ್ಲಿದ್ದಾರೆ. ಕುಟುಂಬಸ್ಥರು ಮಗನ ಬರುವಿಕೆಗಾಗಿ ಕಾಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ. ಹೇಮಾ ಚೌಧರಿ ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ಕಲಾವಿದೆ. ಕನ್ನಡ […]
ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ
ಮುಂಬೈ (ಮಹಾರಾಷ್ಟ್ರ): ಗುರುವಾರ ಮುಂಬೈನಲ್ಲಿ ಶೂಟಿಂಗ್ ಮುಗಿಸಿ ಹಿಂದುರುಗುವ ವೇಳೆ ನಟ ಶ್ರೇಯಸ್ ತಲ್ಪಾಡೆ ಗೆ ಹೃದಯಾಘಾತವಾಗಿದ್ದು ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.ಚಿತ್ರೀಕರಣ ಮುಗಿಸಿ ಹಿಂದಿರುಗುವ ವೇಳೆ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಶಸ್ತ್ರ ಚಿಕಿತ್ಸೆ ನಡೆದಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೆಲ್ಕಮ್ ಟು ದ ಜಂಗಲ್ ಚಿತ್ರವು 2007ಎ ‘ವೆಲ್ಕಮ್’ ಮೂವೀ 1 ರ ಮುಂದುವರೆದ 3 ನೇ ಭಾಗವಾಗಿದೆ. ಎರಡನೇ ಭಾಗ ‘ವೆಲ್ಕಮ್ ಬ್ಯಾಕ್’ 2015 ರಲ್ಲಿ ತೆರೆ ಕಂಡಿತು. ವೆಲ್ಕಮ್ […]
ಏಳು ವರ್ಷಗಳ ಬಳಿಕ ಮತ್ತೆ ಬರುತ್ತಿದೆ ಕಿರಿಕ್ ಶೆಟ್ಟರ “ಬ್ಯಾಚುಲರ್ ಪಾರ್ಟಿ”… ಈ ಬಾರಿ ಪಾರ್ಟಿ ಇನ್ನೂ ಜೋರು!!
ಏಳುವರ್ಷಗಳ ಹಿಂದೆ ರಕ್ಷಿತ್ ಶೆಟ್ಟಿ-ರಿಷಬ್ ಶೆಟ್ಟಿ ತಂಡದಿಂದ “ಕಿರಿಕ್ ಪಾರ್ಟಿ” ಹಿರಿ ಕಿರಿಯರೆನ್ನದೆ ಎಲ್ಲರನ್ನೂ ರಂಜಿಸಿ ಗಲ್ಲಾಪೆಟ್ಟಿಗೆಯನ್ನು ಧೂಳೀಪಟ ಮಾಡಿ ದಾಖಲೆ ಬರೆದಿತ್ತು. ಕಿರಿಕ್ ಪಾರ್ಟಿ ಬಿಡುಗಡೆಯಾಗಿ ಏಳು ವರ್ಷ ಕಳೆದಿದ್ದು, ಅಭಿಮಾನಿಗಳು ಕಿರಿಕ್ ಪಾರ್ಟಿ-2 ರ ಬಿಡುಗಡೆಗಾಗಿ ಕಾಯುತ್ತಲೇ ಇದ್ದರು. ಈ ಬಗ್ಗೆ ಚಿತ್ರದ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದು, ಈ ಬಾರಿ ಪಾರ್ಟಿ ಇನ್ನೂ ಜೋರು ಎಂದಿದ್ದು ಕುತೂಹಲವನ್ನು ಇನ್ನೂ ಕೆರಳಿಸಿದ್ದಾರೆ. ಬಹುತಾರಾಗಣದ ಬೆಂಬಲದೊಂದಿಗೆ, ಈ ಚಿತ್ರವು ಅಭಿಜಿತ್ ಮಹೇಶ್ ಅವರ […]
ಕುತೂಹಲ ಹೆಚ್ಚಿಸಿದ ‘ದಳಪತಿ 68’ : ವಿಜಯ್ 10 ನಿಮಿಷದ ವಿಂಟೇಜ್ ಲುಕ್ಗಾಗಿ 6 ಕೋಟಿ ಖರ್ಚು
ಇತ್ತೀಚೆಗಷ್ಟೇ ‘ಲಿಯೋ’ ಚಿತ್ರದ ಮೂಲಕ ವಿಶ್ವದಾದ್ಯಂತ ಧೂಳೆಬ್ಬಿಸಿದ್ದ ಹೀರೋ ಸದ್ಯ ‘ದಳಪತಿ 68’ ವರ್ಕಿಂಗ್ ಟೈಟಲ್ನಲ್ಲಿ ತಯಾರಾಗುತ್ತಿರುವ ಸಿನಿಮಾ ವಿಚಾರವಾಗಿ ಬ್ಯುಸಿಯಾಗಿದ್ದಾರೆ. ಈ ಚಿತ್ರವನ್ನು ವೆಂಕಟ್ ಪ್ರಭು ನಿರ್ದೇಶಿಸುತ್ತಿದ್ದಾರೆ. ಹೈ ಬಜೆಟ್ನಲ್ಲಿ ಸಿದ್ಧಗೊಳ್ಳುತ್ತಿರುವ ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗಿದೆಯಂತೆ. ಈಗಾಗಲೇ ಚಿತ್ರದ ಶೂಟಿಂಗ್ ಕೂಡ ಪ್ರಾರಂಭವಾಗಿದೆ. ಅದರ ಭಾಗವಾಗಿ ವಿಜಯ್ 3D VFX ಸ್ಕ್ಯಾನ್ ಅನ್ನು ಯುಎಸ್ನಲ್ಲಿ ತೆಗೆದುಕೊಂಡಿದ್ದಾರೆ. ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಸಾಲು ಸಾಲು ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ.ದಳಪತಿ […]
ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರಿಂದ ಅಪೂರ್ವ ನಿರ್ದೇಶನದ ‘ಓ ನನ್ನ ಚೇತನ’ ಚಿತ್ರದ ಟ್ರೇಲರ್ ಅನಾವರಣ
ಮಕ್ಕಳ ಕುರಿತ ಕಥೆಯಾಧಾರಿತ ಈ ಸಿನಿಮಾದ ಟ್ರೇಲರ್ ಅನ್ನು ಅವರು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭಹಾರೈಸಿದರು. ಬಳಿಕ ಮಾತನಾಡಿದ ಕ್ರೇಜಿಸ್ಟಾರ್, ‘ಓ ನನ್ನ ಚೇತನ’ ಸಿನಿಮಾದ ಟ್ರೇಲರ್ ಪ್ರೇಮಲೋಕ, ಶಾಂತಿ ಕ್ರಾಂತಿಯ ಚಿತ್ರದ ಅದ್ಭುತ ಸನ್ನಿವೇಶಗಳನ್ನು ಒಳಗೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರದಲ್ಲಿ ಮಾಸ್ಟರ್ ಪ್ರತೀಕ್, ಮಾಸ್ಟರ್ ಪ್ರೀತಮ್, ಬೇಬಿ ದಾನೇಶ್ವರಿ, ಬೇಬಿ ಡಿಂಪನಾ, ಬೇಬಿ ಮೋನಿಕಾ ನಟಿಸಿದ್ದಾರೆ. ‘ಅಪೂರ್ವ’ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ನಟಿಸಿ ನಿರ್ದೇಶಿಸಿದ ಸಿನಿಮಾ. ಈ ಚಿತ್ರದಲ್ಲಿ ಅಪೂರ್ವ ಎಂಬ ಪ್ರತಿಭಾವಂತ ಕಲಾವಿದೆಯನ್ನು ಕನ್ನಡ ಚಿತ್ರರಂಗಕ್ಕೆ […]