‘ಡೇರ್​ ಡೆವಿಲ್​ ಮುಸ್ತಫಾ’ ಸಿನಿಮಾ ಯಶಸ್ವಿಯಾಗಿ 50 ದಿನ ಪೂರೈಕೆ ,ಚಿತ್ರ ತಂಡದಿಂದ ಬಿರಿಯಾನಿ, ಪುಳಿಯೋಗರೆ ಪಾರ್ಟಿ

ಒಳ್ಳೆಯ ಸಿನಿಮಾಗಳು ತೆರೆ ಕಂಡಾಗ ಖಂಡಿತವಾಗಿಯೂ ಜನರು ಬೆಂಲಿಸುತ್ತಾರೆ ಅನ್ನೋ ನಂಬಿಕೆ ಗಾಂಧಿನಗರದಲ್ಲಿದೆ. ಅದಕ್ಕೆ ‘ಡೇರ್​ ಡೆವಿಲ್​ ಮುಸ್ತಫಾ’ ಉದಾಹರಣೆ. ಈ ಸಿನಿಮಾ ಮೇ 19ಕ್ಕೆ ತೆರೆ ಕಂಡಿದೆ. ಚಿತ್ರಕ್ಕೆ ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ಆಯಕ್ಷನ್ ಕಟ್ ಹೇಳಿದ್ದಾರೆ. ಸಿನಿಮಾವನ್ನು ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ. ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ಅರ್ಪಿಸಿದ್ದು, ಕೆ.ಆರ್.ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಚಿತ್ರವನ್ನು ವಿತರಿಸಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ […]

ಭರ್ಜರಿ ತಯಾರಿ , ದಿನಪೂರ್ತಿ ಕಾರ್ಯಕ್ರಮ : ಶಿವಣ್ಣನ ಹುಟ್ಟುಹಬ್ಬ

ಕೋವಿಡ್‌ ಆತಂಕ ಆನಂತರ ನಟ ಪುನೀತ್‌ ರಾಜಕುಮಾರ್‌ ಅವರ ಅಗಲಿಕೆಯ ದುಃಖದಿಂದಾಗಿ ನಟ ಶಿವರಾಜಕುಮಾರ್‌, ಸುಮಾರು ನಾಲ್ಕು ವರ್ಷಗಳಿಂದ ಅದ್ಧೂರಿ ಬರ್ತ್‌ಡೇ, ಸಂಭ್ರಮಾಚರಣೆಗಳಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಅಭಿಮಾನಿಗಳ ಒತ್ತಾಯದ ಮೇರೆಗೆ ಸಾರ್ವಜನಿಕವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಶಿವರಾಜಕುಮಾರ್‌ ಸಮ್ಮತಿಸಿದ್ದು, ಅದಕ್ಕಾಗಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ. ದಿನಪೂರ್ತಿ ಕಾರ್ಯಕ್ರಮ: ಜು.11ರ ಸಂಜೆಯಿಂದಲೇ ಶಿವರಾಜಕುಮಾರ್‌ ಅವರ ಹುಟ್ಟುಹಬ್ಬ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ರಾತ್ರಿ 12 ಗಂಟೆಗೆ ಬೃಹತ್‌ ಕೇಕ್‌ ಕತ್ತರಿಸಲಾಗುತ್ತಿದ್ದು, […]

ಸಿಂಗಲ್​ ಸೇವಂತಿ ಐಟಂ ಸಾಂಗ್​ ರಿಲೀಸ್​: ರಾಘವೇಂದ್ರ ರಾಜ್​ಕುಮಾರ್​ ನಟನೆಯ ’13’ ಸಿನಿಮಾದ ಹಾಡು

ಇದೀಗ ’13’ ಎಂಬ ಶೀರ್ಷಿಕೆ ಹೊಂದಿರುವ ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಈ ಚಿತ್ರದ ‘ಸಿಂಗಲ್​ ಸೇವಂತಿ’ ಎಂಬ ಐಟಂ ಸಾಂಗ್​ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ವೇಳೆ ಫಿಲ್ಮ್​ ಚೇಂಬರ್ ಅಧ್ಯಕ್ಷ ಭಾ.ಮ ಹರೀಶ್, ವಿನಯ್​ ರಾಜಕುಮಾರ್ ಮುಖ್ಯ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭ ಕೋರಿದರು.ನಟ ರಾಘವೇಂದ್ರ ರಾಜ್​ಕುಮಾರ್​ ಅನಾರೋಗ್ಯದ ನಡುವೆಯೂ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.ರಾಘವೇಂದ್ರ ರಾಜ್​ಕುಮಾರ್ ಮತ್ತು ಶೃತಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ’13’ ಸಿನಿಮಾದ ‘ಸಿಂಗಲ್​ ಸೇವಂತಿ’ ಐಟಂ ಸಾಂಗ್​ ಬಿಡುಗಡೆಯಾಗಿದೆ. […]

ರಾಮ್ ಪೋತಿನೇನಿ- ಪುರಿ ಜಗನ್ನಾಥ್​ ಕಾಂಬೋದಲ್ಲಿ ಮತ್ತೊಂದು ಸಿನಿಮಾ ಅದ್ಧೂರಿಯಾಗಿ ಸೆಟ್ಟೇರಿದ ‘ಡಬಲ್​ ಇಸ್ಮಾರ್ಟ್

ಈ ವೇಳೆ ಚಾರ್ಮಿ ‘ಡಬಲ್​ ಇಸ್ಮಾರ್ಟ್’ ಸಿನಿಮಾಗೆ ಕ್ಲಾಪ್​ ಮಾಡಿದರೆ, ನಿರ್ದೇಶಕ ಪುರಿ ಜಗನ್ನಾಥ್​ ಮೊದಲ ಶಾಟ್​ಗೆ ಆಯಕ್ಷನ್​ ಕಟ್​ ಹೇಳಿದರು. ಡಬಲ್ ಮಾಸ್ ಹಾಗೂ ಡಬಲ್ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಅವರು ಡಬಲ್ ಇಸ್ಮಾರ್ಟ್ ಸಿನಿಮಾದ ಶೂಟಿಂಗ್ ಅನ್ನು ಇದೇ ತಿಂಗಳ 12 ರಿಂದ ಪ್ರಾರಂಭಿಸಲಿದ್ದಾರೆ. ಮುಂದಿನ ವರ್ಷ ಅಂದ್ರೆ 2024‌ ಮಾರ್ಚ್ 8 ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.ಇದೀಗ ಸೆನ್ಸೇಷನಲ್​ ನಿರ್ದೇಶಕ ಪುರಿ ಜಗನ್ನಾಥ್ ಅವರ ಜೊತೆಗೆ […]

ಆರ್​ಆರ್​ಆರ್​ ಮೀರಿಸಲಿರುವ ಈ ಚಿತ್ರ ಎಸ್​ಎಸ್​ಎಂಬಿ 29ಗೆ ಜೊತೆಯಾದ ರಾಜಮೌಳಿ, ಮಹೇಶ್​ ಬಾಬು

ಬೆಂಗಳೂರು: ​ಮಹೇಶ್​ ಬಾಬು ಅವರ ‘ಎಸ್​ಎಸ್​ಎಂಬಿ29’ ಪ್ಯಾನ್​ ವರ್ಲ್ಡ್​​ ಪ್ರಾಜೆಕ್ಟ್​​ ಆಗಿದ್ದು, ಇದಕ್ಕಾಗಿ ಅವರು ರಾಜಮೌಳಿ ತಂಡವನ್ನು ಸೇರಿದದ್ದಾರೆ. ಈ ಕುರಿತು ಇತ್ತೀಚೆಗೆ ಖ್ಯಾತ ಬರಹಕಾರ ಕೆವಿ ವಿಜೇಂದ್ರ ಪ್ರಸಾದ್​ ಕೂಡ ಚಿತ್ರದ ಮಾಹಿತಿ ಹಂಚಿಕೊಂಡಿದ್ದರು. ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಕೆವಿ ವಿಜಯೇಂದ್ರ ಪ್ರಸಾದ್​​, ‘ಎಸ್​ಎಸ್​ಎಂಬಿ29’ ಚಿತ್ರಕ್ಕೆ ಮಹೇಶ್​ ಬಾಬು, ರಾಜಮೌಳಿ ಒಂದಾಗಿದ್ದಾರೆ. ಈ ಚಿತ್ರ ‘ಆರ್​ಆರ್​ಆರ್’​ ಸಿನಿಮಾವನ್ನು ಮೀರಿಸಲಿದ್ದು, ಸಿಕ್ಕಾಪಟ್ಟೆ ಆಯಕ್ಷನ್​ ಸಿನಿಮಾವಾಗಿರಲಿದೆ ಎಂದಿದ್ದಾರೆ ಖ್ಯಾತ ನಿರ್ದೇಶಕ ರಾಜಮೌಳಿ ತಮ್ಮ ಮುಂದಿನ ಸಿನಿಮಾವನ್ನು ಮಹೇಶ್​ […]