ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಗೆ ಅಖಂಡ ಭಾರತದಿಂದ ಅಖಂಡ ಪ್ರೀತಿ!! ಮಾರ್ಚ್ 22ರಂದು ತೆರೆಗೆ

ರಣದೀಪ್ ಹೂಡಾ ಅಭಿನಯದ ಸ್ವಾತಂತ್ರ್ಯ ವೀರ್ ಸಾವರ್ಕರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಜೀವನದ ಸ್ವಾತಂತ್ರ್ಯ ಸಂಗ್ರಾಮದ ಪಯಣವನ್ನು ಆಧರಿಸಿದೆ. ನಟನೆಯ ಜೊತೆಗೆ ಹೂಡಾ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸಿದ್ದಾರೆ. ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿರುವ ಟ್ರೈಲರ್ ಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಸದ್ಯ ಟ್ರೆಡಿಂಗ್ ನಲ್ಲಿರುವ ಟ್ರೈಲರ್ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ನಟ ರಣದೀಪ್ ಹೂಡಾ, “ಟ್ರೈಲರ್ ಗೆ ದೊರೆಯುತ್ತಿದೆ ಅಖಂಡ ಭಾರತದ ಅಖಂಡ ಪ್ರೀತಿ ಮತ್ತು […]

ಪರೀಕ್ಷೆಯಲ್ಲಿ ಕಾಪಿ ಹೊಡೆಯುವ ಫಜೀತಿಯ “ಲೋಕಲ್ ಬಾಯ್ಸ್” ಕಿರುಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆ

ಶಿವು-ಸೂಜಿ ಪ್ರೊಡಕ್ಷನ್ಸ್, ಸುಮಂತ್ ಆಚಾರ್ಯ ನಿರ್ದೇಶನದ “ಲೋಕಲ್ ಬಾಯ್ಸ್” ಕಿರುಚಿತ್ರ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಪ್ರತೀಕ್ ಶೆಟ್ಟಿ, ಕೃಷ್ಣ ಶೇಂದ್ರೆ, ಚಾರ್ಲಿ ಕುಮಾರ್, ಹೇಮಂತ್, ಸುಪ್ರೀತ್ ಕಾಟಿ, ವಿಶ್ವಾಸ್, ಕಡಕ್ ಬಾಬಿ, ಗುರು ತಾರಾಗಣದ ಚಿತ್ರವು ಕಾಲೇಜು ಹುಡುಗರ ಪರೀಕ್ಷಾ ಕೊಠಡಿಯಲ್ಲಿ ನಡೆಯುವ ಕಾಪಿ ಹೊಡೆಯುವ ಫಜೀತಿಯ ಚಿತ್ರಣವನ್ನು ಹೊಂದಿದೆ. ಡಿ.ಒ.ಪಿ ಮತ್ತು ಸಂಕಲನ ಕೂಲ್ ಮಗಾ ಸ್ಟುಡಿಯೋಸ್ ನದ್ದಾಗಿದ್ದರೆ ರೋಹಿತ್ ಸೋವರ್ ಸಂಗೀತ ನೀಡಿದ್ದಾರೆ.

ಕನ್ನಡ ಚಿತರಂಗಕ್ಕೆ ಕಾಲಿಟ್ಟ ತುಳುನಾಡ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್: ಚೊಚ್ಚಲ ಕನ್ನಡ ಚಿತ್ರ ‘ಪುರುಷೋತ್ತಮನ ಪ್ರಸಂಗ’ ತೆರೆಗೆ

ಬೆಂಗಳೂರು: ತುಳುನಾಡಿನ ಚಿರಪರಿಚಿತ ಮತ್ತು ಅತ್ಯಪೂರ್ವ ನಿರ್ದೇಶಕ-ನಟ ತೆಲಿಕೆದ ಬೊಳ್ಳಿ, ದೇವದಾಸ್‌ ಕಾಪಿಕಾಡ್‌ ನಿರ್ದೇಶನದ ಚೊಚ್ಚಲ ಕನ್ನಡ ಚಿತ್ರ “ಪುರುಷೋತ್ತಮನ ಪ್ರಸಂಗ” ಚಿತ್ರ ಇಂದು ತೆರೆಕಾಣುತ್ತಿದೆ. ಅದಾಗಲೇ ತುಳು ನಾಟಕ ಮತ್ತು ಚಲನಚಿತ್ರಗಳನ್ನು ನಿರ್ದೇಶಿಸಿ ಸೈ ಎನಿಸಿಕೊಂಡಿರುವ ದೇವದಾಸ್ ಕಾಪಿಕಾಡ್ ಕನ್ನಡ ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಲು ಅಣಿಯಾಗಿದ್ದಾರೆ. ರಾಷ್ಟ್ರಕೂಟ ಪಿಕ್ಚರ್ ಬ್ಯಾನರ್‌ನಡಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಅಜಯ್‌ ಹಾಗೂ ರಿಷಿಕಾ ನಾಯಕ-ನಾಯಕಿಯಾಗಿ ನಟಿಸಿದ್ದಾರೆ. ಅರ್ಜುನ್ ಕಾಪಿಕಾಡ್ ಸಹ ನಿರ್ದೇಶಕರಾಗಿ ಸಹಕರಿಸಿದ್ದಾರೆ. ನವೀನ್ ಡಿ ಪಡೀಲ್, ಅರವಿಂದ್ […]

ಅನುಪಮಾ ಧಾರಾವಾಹಿ ನಟ ರಿತುರಾಜ್ ಸಿಂಗ್ ಹೃದಯಾಘಾತದಿಂದ ನಿಧನ

ಮುಂಬೈ: ಅನುಪಮಾ ಧಾರವಾಹಿಯ ಜನಪ್ರಿಯ ಟಿವಿ ನಟ ರಿತುರಾಜ್ ಸಿಂಗ್ ಫೆಬ್ರವರಿ 20 ರ ಮುಂಜಾನೆ 59 ನೇ ವಯಸ್ಸಿನಲ್ಲಿ ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಸಹೋದ್ಯೋಗಿ ಮತ್ತು ಆತ್ಮೀಯ ಸ್ನೇಹಿತ ಅಮಿತ್ ಬೆಹ್ಲ್ ದುಃಖದ ಸುದ್ದಿಯನ್ನು ಖಚಿತಪಡಿಸಿದ್ದಾರೆ. ನಟ ಅಮಿತ್ ಬೆಹ್ಲ್, ರಿತುರಾಜ್ ಸಿಂಗ್ ಅವರ ಉತ್ತಮ ಸ್ನೇಹಿತರಾಗಿದ್ದು ಸುದ್ದಿಯನ್ನು ದೃಢಪಡಿಸಿದ್ದಾರೆ. ಫೆಬ್ರವರಿ 20 ರಂದು ಬೆಳಿಗ್ಗೆ12:30 ಕ್ಕೆ ರಿತುರಾಜ್ ಹೃದಯಾಘಾತ ಹೊಂದಿದ್ದಾರೆ. ರಿತುರಾಜ್ ಮೇದೋಜ್ಜೀರಕ ಗ್ರಂಥಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು […]

ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕಿರಿಕ್ ಪಾರ್ಟಿ ‘ರಶ್ಮಿಕಾ ಮಂದಣ್ಣ’ ಹೆಸರು ಸೇರ್ಪಡೆ..!

ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಗೆ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಮಂದಣ್ಣರ ವೃತ್ತಿಯ ಗ್ರಾಫು ವರ್ಷದಿಂದ ವರ್ಷಕ್ಕೆ ಏರುತ್ತಲೇ ಸಾಗುತ್ತಿದೆ. ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣ ಟಾಲಿವುಡ್​ನ ಟಾಪ್ ನಟಿ ಎನಿಸಿಕೊಂಡು ಈಗ ಬಾಲಿವುಡ್​ನಲ್ಲಿಯೂ ಹವಾ ಎಬ್ಬಿಸಿದ್ದಾರೆ. ಬಾಲಿವುಡ್​ನ ಸ್ಟಾರ್ ನಟರುಗಳೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಇದೆಲ್ಲದರ ನಡುವೆ ಗೌರವವೊಂದಕ್ಕೆ ರಶ್ಮಿಕಾ ಮಂದಣ್ಣ ಭಾಜನರಾಗಿದ್ದಾರೆ. ಇದೀಗ ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ರಶ್ಮಿಕಾ ಮಂದಣ್ಣ ಹೆಸರು ಸೇರ್ಪಡೆಗೊಂಡಿದೆ. ಪ್ರತಿಷ್ಠಿತ ಫೋರ್ಬ್ಸ್ […]