ಕಾಸರಗೋಡು: ಕಾಂತಾರ ವೀಕ್ಷಿಸಲು ಒಂದೇ ಬಸ್ ನಲ್ಲಿ ತೆರಳಿದ 69 ಗ್ರಾಮಸ್ಥರು!

ಕಾಸರಗೋಡು: ಎಲ್ಲೆಲ್ಲೂ ಕಾಂತಾರ ಮಾಯೆ ಆವರಿಸಿದೆ. ಹಳ್ಳಿ, ನಗರ, ದೇಶ, ಭಾಷೆಗಳ ಗಡಿಯನ್ನು ಮೀರಿ ಕಾಂತಾರ ಬೆಳೆಯುತ್ತಿದೆ. ಒಂದಾನೊಂದು ಕಾಲದಲ್ಲಿ ತುಳುನಾಡಿನ ಅವಿಭಾಜ್ಯ ಅಂಗವಾಗಿದ್ದ, ಮತ್ತು ಈಗಲೂ ತುಳುವ ಆಚರಣೆಗಳನ್ನು ಮೈಗೂಡಿಸಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯ ಕುಂಟಮುಕ್ಕಲ ಗ್ರಾಮದ ಒಟ್ಟು 69 ಜನರು ಕಾಂತಾರ ವೀಕ್ಷಿಸಲು ಒಂದೇ ಬಸ್ ನಲ್ಲಿ ತೆರಳಿದ್ದಾರೆ ಎನ್ನುವ ಸುದ್ದಿಯನ್ನು ನ್ಯೂಸ್ 18 ವರದಿ ಮಾಡಿದೆ. ಕಾಸರಗೋಡಿನ ಸಮೀಪದ ಚಿತ್ರಮಂದಿರದಲ್ಲಿ ಕಾಂತಾರವನ್ನು ವೀಕ್ಷಿಸಲು ಈ ಉತ್ಸಾಹಭರಿತ ಗ್ರಾಮಸ್ಥರ ಗುಂಪು ಒಂದೇ ಬಸ್ ಹತ್ತಿದೆ […]
ಕಾಂತಾರ ಕಂಡು ಮೆಚ್ಚಿದ ಕರಾವಳಿ ಬೆಡಗಿಯರು: ಅನುಷ್ಕಾ, ಶಿಲ್ಪಾ ಶೆಟ್ಟಿ ಯಿಂದ ರಿಷಭ್ ಗುಣಗಾನ

ಕರಾವಳಿಯ ಬೆಡಗಿಯರಾದ ಅನುಷ್ಕಾ ಶೆಟ್ಟಿ ಮತ್ತು ಶಿಲ್ಪಾ ಶೆಟ್ಟಿ ಕಾಂತಾರ ಸಿನಿಮಾ ನೋಡಿ ರಿಷಬ್ ಶೆಟ್ಟಿ ಮತ್ತು ಸಂಪೂರ್ಣ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಮೂಲತಃ ಪುತ್ತೂರಿನ ಬೆಳ್ಳಿಪಾಡಿಯವರಾದ ಅನುಷ್ಕಾ ಶೆಟ್ಟಿ ಕಾಂತಾರ ಸಿನಿಮಾ ನೋಡಿ ಚಿತ್ರವನ್ನು ಸಂಪೂರ್ಣವಾಗಿ ಮೆಚ್ಚಿಕೊಂಡಿದ್ದೇನೆ. ರಿಷಭ್ ಮತ್ತು ಸಮಸ್ತ ಕಾಂತಾರ ತಂಡಕ್ಕೆ ಶುಭಾಶಯ ಎಂದಿದ್ದಾರೆ. ನಿಡ್ಡೋಡಿಯ ಮುದಲಾಡಿಯವರಾದ ಶಿಲ್ಪಾ ಶೆಟ್ಟಿ ಕೂಡಾ ಕಾಂತಾರ ಸಿನಿಮಾ ವೀಕ್ಷಿಸಿ, ಎಂತಹ ನಿರೂಪಣೆ, ಭಾವನೆ, ಕಂಪನ ಮತ್ತು ಜಗತ್ತು. ಕ್ಲೈಮ್ಯಾಕ್ಸ್ ಸಮಯದಲ್ಲಿ ಮೈರೋಮಾಂಚನಗೊಂಡಿತ್ತು. ಸಿನಿಮಾದ ಶಕ್ತಿಯು […]
ಕಾಂತಾರದ ಮೈನವಿರೇಳಿಸುವ ಹಿನ್ನೆಲೆ ಸಂಗೀತದ ಮಾಂತ್ರಿಕ ಬಿ. ಅಜನೀಶ್ ಲೋಕನಾಥ್: ಕಾಂತಾರ ಯಶಸ್ಸಿನ ಹಿಂದೆ ಜನಪದ ಸಂಗೀತದ ಛಾಪು

ತುಳುನಾಡಿನ ನಂಬಿಕೆ ಮತ್ತು ಆಚರಣೆಗಳನ್ನು ಅತ್ಯಮೋಘವಾಗಿ ಬಿಂಬಿಸಿರುವ ಕಾಂತಾರ ಚಿತ್ರದ ಯಶಸ್ಸಿನ ಹಿಂದೆ ಅದರ ಸಂಗೀತ ಮತ್ತು ಹಿನ್ನೆಲೆ ಸಂಗೀತವೂ ಕೆಲಸ ಮಾಡಿದೆ. ಚಿತ್ರದ ಮನಮೋಹಕ ಹಾಡುಗಳಾಗಿರಲಿ, ಜನ ಕೈ ಮುಗಿಯುತ್ತಿರುವ, ಅಥವಾ ಮೈಮೇಲೆ ಆವೇಶ ಬಂದಂದಾಡುತ್ತಿರುವ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ದೈವಾರಾಧನೆಯ ಹಿನ್ನೆಲೆ ಸಂಗೀತವೆ ಇರಲಿ ಇದರ ಸಂಪೂರ್ಣ ಶ್ರೇಯ ಕನ್ನಡದ ಸಂಗೀತ ಮಾಂತ್ರಿಕ ಬಿ.ಅಜನೀಶ್ ಲೋಕನಾಥ್ ಅವರಿಗೆ ಸಲ್ಲಬೇಕು. ಕರಾವಳಿಯ ದೈವಾರಾಧನೆಯ, ಭೂತ-ಕೋಲದ ಸಂಸ್ಕೃತಿಯನ್ನು ಹತ್ತಿರದಿಂದ ಕಂಡವರಿಗೆ, ಬಾಲ್ಯದಿಂದಲೂ ಇದನ್ನು ಅನುಭವಿಸಿದವರಿಗೆ ಈ ಹಿನ್ನೆಲೆ […]
ಒಟಿಟಿಗೆ ಬರಲಿದೆ ಜಲ್ಲಿಕಟ್ಟು ಆಧಾರಿತ ‘ಪೆಟ್ಟೈಕಾಲಿ’ ವೆಬ್ ಸರಣಿ: ಟ್ರೈಲರ್ ಹಂಚಿಕೊಂಡ ಕನ್ನಡಿಗ ಕಿಶೋರ್

ಖ್ಯಾತ ನಿರ್ದೇಶಕ ವೆಟ್ರಿ ಮಾರನ್ ಅವರ ‘ಪೆಟ್ಟೈಕಾಲಿ’, ತಮಿಳುನಾಡಿನ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು ಆಧರಿಸಿದ ಮೊದಲ ವೆಬ್ ಸರಣಿ, ಈ ವರ್ಷ ದೀಪಾವಳಿಯಿಂದ ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಪ್ರದರ್ಶನಗೊಳ್ಳಲಿದೆ. ವೆಟ್ರಿ ಮಾರನ್ ಅವರ ‘ಪೆಟ್ಟೈಕಾಳಿ’ ಚಿತ್ರವನ್ನು ಅವರ ಬಹುಕಾಲದ ಸಹಾಯಕ ರಾಜ್ ಕುಮಾರ್ ನಿರ್ದೇಶಿಸಿದ್ದಾರೆ. ಸಾಕಷ್ಟು ಆಸಕ್ತಿಯನ್ನು ಹುಟ್ಟುಹಾಕಿರುವ ಈ ಸರಣಿಯು ಒಟಿಟಿ ಪ್ಲಾಟ್ಫಾರ್ಮ್ ಆಹಾ ತಮಿಳಿನಲ್ಲಿ ತೆರೆಕಾಣಲಿದೆ. ಈ ಸರಣಿಯು ಪ್ರೇಕ್ಷಕರನ್ನು ಹಿಂದೆಂದೂ ನೋಡಿರದ ಆಳವಾದ ಜಲ್ಲಿಕಟ್ಟು ಜಗತ್ತಿನೊಳಗೆ ತೆಗೆದುಕೊಂಡು ಹೋಗಲಿದೆ ಎಂದು ನಿರೀಕ್ಷಿಸಲಾಗಿದೆ. ತುಳುನಾಡಿನ […]
ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಅರಮನೆ ಮೈದಾನದಲ್ಲಿ ಪುನೀತ ಪರ್ವ: ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸುವ ನಿರೀಕ್ಷೆ

ಅಪ್ಪು ಕಣ್ಮರೆಯಾಗಿ ಒಂದು ವರ್ಷವಾಗುತ್ತಾ ಬಂದಿದ್ದು, ಅವರ ಪುಣ್ಯ ಸ್ಮರಣೆಯ ಒಂದು ದಿನಕ್ಕೂ ಮುನ್ನ ಅಕ್ಟೋಬರ್ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನೈಜ ಜೀವನದ ಪುನೀತ್ ರಾಜ್ಕುಮಾರ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಬಿಡುಗಡೆ ಪೂರ್ವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ. ಈ ಪುನೀತ ಪರ್ವ ಕಾರ್ಯಕ್ರಮಕ್ಕೆ […]