ವೈರಲ್ ಆಗ್ತಿದೆ ಸಮಯಪ್ರಜ್ಞೆಯಿಂದ ಜೀವ ಉಳಿಸಿದ ಅಲೋಶಿಯಸ್ ವಿದ್ಯಾರ್ಥಿಗಳ ಕಾರ್ಯ

ಮಂಗಳೂರು: ಸಮಾಜ ಕಾರ್ಯ ಶಿಕ್ಷಣ(MSW) ಕೇವಲ ಪಠ್ಯದಲ್ಲಿ ಮಾತ್ರವಲ್ಲ, ನಿಜಜೀವನದಲ್ಲೂ ಹೇಗೆ ಕೆಲಸ ಮಾಡುತ್ತದೆ ಎಂಬುದಕ್ಕೆ ನಿದರ್ಶನದಂತೆ ಅಪಾರ ಮೆಚ್ಚುಗೆ ಗಳಿಸುತ್ತಿದೆ ನಗರದ ಸೇಂಟ್ ಅಲೋಶಿಯಸ್ (ಡೀಮ್ಡ್ ಟು ಬಿ ಯೂನಿವರ್ಸಿಟಿ) ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳ ತಂಡ. ಈ ವಿದ್ಯಾರ್ಥಿಗಳು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರ ಜೀವ ಉಳಿಸುವ ಮೂಲಕ ಮಾನವೀಯತೆ, ಸಮಯಪ್ರಜ್ಞೆ ಹಾಗೂ ಧೈರ್ಯದ ಮಾದರಿಯಾಗಿದೆ. ಜೂನ್ 30ರಂದು ನಗರದ ಬಸ್ ನಿಲ್ದಾಣದ ಬಳಿ ಭಾರೀ ಮಳೆಯಿಂದ ಅಂಗಡಿಯ ದೊಡ್ಡ ಗಾಜಿನ ಫಲಕ ಒಡೆದು ಅಲ್ಲಿಂದ […]
ಪ್ಲಾಸ್ಟಿಕ್ ಚೀಲಕ್ಕೆ ಹೇಳಿ ಗುಡ್ ಬೈ… ಪರಿಸರ ಕಾಳಜಿ ನಮ್ಮಿಂದ ಆರಂಭವಾಗಲಿ

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ: ಇಂದು ಒಂದು ಚೀಲ ಬದಲಿಸಿದರೆ, ನಾಳೆ ಒಂದು ಭೂಮಿ ಉಳಿಯುತ್ತದೆ. ನಿಮ್ಮ ಮಕ್ಕಳ ಭವಿಷ್ಯವನ್ನು ಯೋಚಿಸಿಯಾದರೂ ಪ್ಲಾಸ್ಟಿಕ್ ಬಳಕೆ ತ್ಯಜಿಸಿ. ಮಕ್ಕಳಿಗೆ ಜನ್ಮ ನೀಡುವುದು ಮಾತ್ರ ಕರ್ತವ್ಯವಲ್ಲ. ಮಕ್ಕಳಿಗೋಸ್ಕರ ಪರಿಸರ, ಗಾಳಿ ಶುದ್ಧವಾಗಿಡುವುದೂ ನಮ್ಮ ಮುಖ್ಯ ಕರ್ತವ್ಯ. ಪ್ರತಿ ವರ್ಷ ಜುಲೈ 3ರಂದು ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಚೀಲ ಮುಕ್ತ ದಿನ (International Plastic Bag Free Day)ವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತದೆ. ಪ್ಲಾಸ್ಟಿಕ್ ಚೀಲಗಳ ಅತಿಯಾದ ಬಳಕೆಯಿಂದ ಪರಿಸರ, ಜಲಚರಗಳು, ಪ್ರಾಣಿಗಳು […]
ಕೃತಿ ಕೈಲಾರ್ಗೆ ದೂರದರ್ಶನ ‘ಬಿ’ ಗ್ರೇಡ್ ಕಲಾವಿದೆಯ ಗರಿ

ಉಪ್ಪಿನಂಗಡಿ: ಭರತನಾಟ್ಯ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿರುವ ಉಪ್ಪಿನಂಗಡಿಯ ಬಹುಮುಖ ಪ್ರತಿಭೆ ಕೃತಿ ಕೈಲಾರ್ ಅವರಿಗೆ ಪ್ರಸಾರ ಭಾರತಿ ದೂರದರ್ಶನದಿಂದ ‘ಬಿ’ ಗ್ರೇಡ್ ಕಲಾವಿದೆಯಾಗಿ ಮಾನ್ಯತೆ ದೊರೆತಿದೆ. ಉಪ್ಪಿನಂಗಡಿಯ ಕೈಲಾರ್ ರಾಜ ಗೋಪಾಲ ಭಟ್ ಮತ್ತು ಸತ್ಯೇಶ್ವರಿ ದಂಪತಿ ಪುತ್ರಿಯಾಗಿರುವ ಈಕೆ ಭರತ ನಾಟ್ಯ ಶಾಸ್ತ್ರ ಪ್ರವೀಣೆಯಾಗಿದ್ದು, ವಿವಿಧ ವೇದಿಕೆಗಳಲ್ಲಿ ತನ್ನ ನೃತ್ಯ ಪ್ರದರ್ಶನದ ಮೂಲಕ ಮೆಚ್ಚುಗೆ ಗಳಿಸಿದ್ದಾರೆ. ಬಾಲ್ಯದಿಂದಲೇ ನೃತ್ಯ ಮಾತ್ರವಲ್ಲದೇ ಸಂಗೀತ, ಕ್ರೀಡೆ, ಯೋಗಾಸನ, ಓದು ಎಲ್ಲಾ ಕ್ಷೇತ್ರಗಳಲ್ಲೂ ಮುಂದಿರುವ ಬಹುಮುಖ ಪ್ರತಿಭೆ ಕೃತಿ […]
ಮಂಗಳೂರಿನ 60ವಯಸ್ಸಿನ ಈ ಪೋರ 38 ದೇಶಗಳ ಬೈಕ್ ಯಾತ್ರೆಗೆ ಸಜ್ಜು!!

ಮಂಗಳೂರು: ಇಲ್ಲಿನ 60 ವರ್ಷದ ಈ ಉತ್ಸಾಹಿ ಬೈಕ್ ಸವಾರ ತನ್ನ ರಾಯಲ್ ಎನ್ ಫೀಲ್ಡ್ ಬೈಕ್ ಏರಿ ಹಲವು ದೇಶಗಳಲ್ಲಿ ಸಂಚರಿಸುವ ಪ್ಲಾನ್ ಹೊಂದಿದ್ದಾರೆ. ಅವರೇ ಶರತ್ ಎಕ್ಕೂರು. ತಮ್ಮ 60ನೇ ವಯಸ್ಸಿನಲ್ಲಿ ಯುರೋಪ್ ಮತ್ತು ಗಲ್ಫ್ ಸೇರಿದಂತೆ ಸುಮಾರು 38 ದೇಶಗಳಿಗೆ ಬೈಕ್ನಲ್ಲಿ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಇದು ಅವರ ಎರಡನೇ ಅಂತಾರಾಷ್ಟ್ರೀಯ ಬೈಕ್ ಯಾತ್ರೆಯಾಗಿದ್ದು, ಮೇ 31ರಂದು ಮಂಗಳೂರಿನಿಂದ ಪ್ರಯಾಣ ಆರಂಭಿಸಲಿದ್ದಾರೆ. ಅವರು Royal Enfield Super Meteor 650 ಬೈಕ್ನಲ್ಲಿ […]
ಇಂಜಿನಿಯರ್ ಗಳಿಗಿಂತ ಹೆಚ್ಚಿನ ದುಡಿಮೆ ಕೃಷಿಯಲ್ಲಿ ಸಾಧ್ಯ- ಅಶೋಕ್ ಕೆ.ಎಸ್.

ಮೂಡುಬಿದಿರೆ : ವಿದೇಶಗಳಲ್ಲಿ ದುಡಿಯುವ ಎಂಜಿನಿಯರ್ ಗಳಿಗಿಂತ ಲಾಭದಾಯಕ ಕೃಷಿ. ನಾವು ಉನ್ನತ ಶಿಕ್ಷಣ ಪಡೆದಿದ್ದರೂ ಹಲಸಿನ ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಆದಾಯದೊಂದಿಗೆ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದೇವೆ ಎಂದು ದೊಡ್ಡಬಳ್ಳಾಪುರದ ಕೃಷಿಕ ಅಶೋಕ್ ಕೆ. ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಬೃಹತ್ […]